Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:5 - ಕನ್ನಡ ಸತ್ಯವೇದವು C.L. Bible (BSI)

5 ಇದಲ್ಲದೆ, “ಇನ್ನು ಮುಂದಕ್ಕೆ ಅವರು ಸನ್ನಿಧಿಸೇವಕರಾಗುವಂತೆ, ನನ್ನ ಭೋಜನಪದಾರ್ಥಗಳನ್ನು ಹಾಗೂ ನಾನು ಕುಡಿಯುವ ದ್ರಾಕ್ಷಾರಸವನ್ನು ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನಪದಾರ್ಥಗಳನ್ನೂ ತಾನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ದಿನವಹಿ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರುಷ ಪೋಷಿಸಬೇಕು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅರಸನಾದ ನೆಬೂಕದ್ನೆಚ್ಚರನು ದಿನಾಲು ಆ ತರುಣರಿಗೆ ತಾನು ಸೇವಿಸುವ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ಕೊಡುತ್ತಿದ್ದನು. ಅವರನ್ನು ತನ್ನ ಸೇವಕರನ್ನಾಗಿ ಮಾಡಿಕೊಳ್ಳುವ ಉದ್ದೇಶದಿಂದ ಮೂರು ವರ್ಷಗಳ ತರಬೇತಿ ಕೊಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅರಸನು ರಾಜಭೋಜನದಲ್ಲಿಯೂ, ತಾನು ಕುಡಿಯುವ ದ್ರಾಕ್ಷಾರಸದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿಸಿದನು. ಹೀಗೆ ಅವರು ಮೂರು ವರ್ಷಗಳ ಕಾಲ ಪೋಷಿಸಲಾದ ಮೇಲೆ ಅರಸನ ಸನ್ನಿಧಿಯ ಸೇವಕರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:5
14 ತಿಳಿವುಗಳ ಹೋಲಿಕೆ  

ರಾಜನು ಅವರ ಸಂಗಡ ಮಾತಾಡುವಾಗ ಅಲ್ಲಿದ್ದ ಯುವಕರಲ್ಲೆಲ್ಲ ದಾನಿಯೇಲನಿಗೆ, ಹನನ್ಯನಿಗೆ, ಮೀಶಾಯೇಲನಿಗೆ, ಅಜರ್ಯನಿಗೆ, ಸಮಾನರು ಯಾರೂ ಕಂಡುಬರಲಿಲ್ಲ. ಆದಕಾರಣ ಆ ನಾಲ್ವರು ಸನ್ನಿಧಿಸೇವಕರಾದರು.


ಆದರೆ ದಾನಿಯೇಲನು ತಾನು ರಾಜನ ಭೋಜನ ಪದಾರ್ಥಗಳನ್ನು ತಿಂದು ಹಾಗೂ ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನೇ ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿಕೊಂಡನು. ಕಂಚುಕಿಯರ ನಾಯಕನಿಗೆ, “ಕ್ಷಮಿಸು, ನಾನು ಅಶುದ್ಧನಾಗಲಾರೆ,” ಎಂದು ವಿನಂತಿಸಿದನು.


ನಿಮ್ಮ ಪ್ರಜೆಗಳು ಭಾಗ್ಯವಂತರು! ಸದಾ ನಿಮ್ಮ ಸನ್ನಿಧಿಯಲ್ಲಿದ್ದು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ನಿಮ್ಮ ಸೇವಕರು ಧನ್ಯರು!


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ನಮಗೆ ಅಗತ್ಯವಾದ ಆಹಾರವನ್ನು ಅನುದಿನವೂ ಕೊಡಿ.


ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.


ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.


ನಿಮ್ಮ ಪ್ರಜೆಗಳು ಹಾಗೂ ಸದಾ ನಿಮ್ಮ ಸನ್ನಿಧಿಯಲ್ಲಿ ಇದ್ದುಕೊಂಡು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ಸೇವಕರು ಧನ್ಯರು!


ಅವನ ಜೀವಿತಕಾಲವೆಲ್ಲ, ಅವನಿಗೆ ಬೇಕಾಗಿ ಇದ್ದ ಎಲ್ಲ ಪದಾರ್ಥಗಳು ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.


ತರುವಾಯ ಸೌಲನು ಜೆಸ್ಸೆಯನ ಬಳಿಗೆ ದೂತರನ್ನು ಅಟ್ಟಿ, ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲೇ ಸೇವೆಮಾಡಲಿ,” ಎಂದು ತಿಳಿಸಿದನು.


ಈಜಿಪ್ಟ್ ದೇಶದ ಅರಸನಾದ ಫರೋಹನ ಆಸ್ಥಾನವನ್ನು ಸೇರಿದಾಗ ಜೋಸೆಫನಿಗೆ ಮೂವತ್ತು ವರ್ಷ ವಯಸ್ಸು. ಜೋಸೆಫನು ಫರೋಹನ ಸನ್ನಿಧಿಯಿಂದ ಹೊರಟು ಈಜಿಪ್ಟ್ ದೇಶದಲ್ಲೆಲ್ಲ ಸಂಚಾರ ಮಾಡಿದನು.


ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.


ಒಡೆಯನ ರುಚಿಪದಾರ್ಥಗಳನ್ನು ಬಯಸಬೇಡ. ಅವುಗಳಲ್ಲಿ ಮರೆಮೋಸ ಅಡಗಿರಲು ಸಾಧ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು