Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:11 - ಕನ್ನಡ ಸತ್ಯವೇದವು C.L. Bible (BSI)

11 ಆಗ ಅವನು ನನಗೆ, “ಅತಿಪ್ರಿಯ ದಾನಿಯೇಲನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು. ಎದ್ದು ನಿಂತುಕೋ. ನಾನು ನಿನ್ನ ಬಳಿಗೆ ಕಳುಹಿಸಲ್ಪಟ್ಟವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಅವರು ನನಗೆ, “ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಅವನು ನನಗೆ - ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ ಎಂದು ಹೇಳಿದನು; ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ನನಗೆ, “ದಾನಿಯೇಲನೇ, ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನಾನು ನಿನಗೆ ಈ ಮುಂದೆ ಹೇಳುವ ಮಾತುಗಳ ಬಗ್ಗೆ ಚೆನ್ನಾಗಿ ವಿಚಾರಮಾಡು. ಎದ್ದುನಿಲ್ಲು, ನನ್ನನ್ನು ನಿನ್ನ ಬಳಿಗೆ ಕಳುಹಿಸಲಾಗಿದೆ” ಎಂದು ಹೇಳಿದನು. ಆಗ ನಾನು ಎದ್ದುನಿಂತೆ. ನಾನು ಭಯದಿಂದ ಇನ್ನೂ ನಡುಗುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆತನು ನನಗೆ, “ದಾನಿಯೇಲನೇ, ಅತಿ ಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ಏಕೆಂದರೆ ನಾನು ಈಗ ನಿನ್ನ ಬಳಿಗೆ ಕಳುಹಿಸಲಾಗಿದ್ದೇನೆ,” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಮೇಲೆ, ನಾನು ನಡುಗುತ್ತಲೇ ನಿಂತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:11
15 ತಿಳಿವುಗಳ ಹೋಲಿಕೆ  

ಎದ್ದು ನಿಂತುಕೋ; ನಿನ್ನನ್ನು ನನ್ನ ದಾಸನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಿಕೊಳ್ಳುವುದಕ್ಕಾಗಿ ನಿನಗೆ ದರ್ಶನವಿತ್ತಿದ್ದೇನೆ. ಈ ದರ್ಶನದಲ್ಲಿ ನನ್ನ ವಿಷಯವಾಗಿ ಕಂಡದ್ದನ್ನು ಮತ್ತು ಮುಂದಿನ ದರ್ಶನಗಳಲ್ಲಿ ನಾನು ನಿನಗೆ ತೋರಿಸಲಿರುವ ವಿಷಯಗಳನ್ನು ಕುರಿತು ಬೇರೆಯವರಿಗೆ ನೀನು ತಿಳಿಸಬೇಕು.


ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ, ಸಮಾಧಿಯಿಂದ ಹೊರಕ್ಕೆ ಬಂದು, ಅಲ್ಲಿಂದ ಓಡಿಹೋದರು. ಭಯದ ನಿಮಿತ್ತ ಅವರು ಯಾರಿಗೂ ಏನನ್ನೂ ಹೇಳಲಿಲ್ಲ.


ಸರ್ವೇಶ್ವರ ನನಗೆ, “ನರಪುತ್ರನೇ, ಎದ್ದು ನಿಲ್ಲು; ನಿನ್ನ ಸಂಗಡ ಮಾತಾಡಬೇಕು,” ಎಂದು ಹೇಳಿದರು.


ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.


ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.)


ಯೇಸುವಿನ ಪಕ್ಕದಲ್ಲೇ ಒರಗಿಕುಳಿತಿದ್ದ ಅವರ ಆಪ್ತ ಶಿಷ್ಯನಿಗೆ,


ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ಆ ಮೂರು ವಾರ ಮುಗಿಯುವ ತನಕ ನಾನು ಯಾವ ರುಚಿಪದಾರ್ಥವನ್ನೂ ತಿನ್ನಲಿಲ್ಲ. ಮಾಂಸವನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಬಾಯಲ್ಲಿ ಇಡಲಿಲ್ಲ. ಎಣ್ಣೆಯನ್ನೂ ಹಚ್ಚಿಕೊಳ್ಳಲಿಲ್ಲ.


ಆಗ ಬಯಸುವನು ರಾಜ ನಿನ್ನ ಲಾವಣ್ಯವನು I ಆತನ ಪಾದಕ್ಕೆರಗು, ಆತನೇ ನಿನಗೊಡೆಯನು II


“ಇದನ್ನು ನೋಡಿದಾಗ ನನ್ನ ಎದೆ ತತ್ತರಗೊಳ್ಳುತ್ತದೆ. ನನ್ನ ಗುಂಡಿಗೆ ಎದೆಬಿಟ್ಟು ಮಿಡಿಯುತ್ತದೆ.


ನಾನು ನನ್ನ ನಲ್ಲನ ನಲ್ಲೆ ಆತನ ಆಸೆ ನನ್ನ ಮೇಲೆ !


ನೋಹ, ದಾನಿಯೇಲ, ಯೋಬ, ಎಂಬೀ ಮೂವರು ವ್ಯಕ್ತಿಗಳು ಆ ನಾಡಿನಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು