Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:13 - ಕನ್ನಡ ಸತ್ಯವೇದವು C.L. Bible (BSI)

13 ಪರ್ಷಿಯ ರಾಜ್ಯದ ಕಾವಲುದೂತನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಪ್ರಧಾನ ದೂತರಲ್ಲಿ ಒಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ಅಲ್ಲಿನ ಪರ್ಷಿಯ ರಾಜರ ಸಂಗಡ ಹೋರಾಡಲು ಅವನನ್ನು ಬಿಟ್ಟು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿವಸ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜನ ಸಂಗಡ [ಹೋರಾಡಿ]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಪಾರಸಿಯ ರಾಜ್ಯದ ದಿವ್ಯಪಾಲಕನು ನನ್ನೊಂದಿಗೆ ಕಳೆದ ಇಪ್ಪತ್ತೊಂದು ದಿನಗಳಿಂದ ಹೋರಾಡುತ್ತಿದ್ದನು; ನನಗೆ ತೊಂದರೆ ಕೊಡುತ್ತಿದ್ದನು. ಆಗ ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ನಾನು ಅಲ್ಲಿ ಪಾರಸಿಯ ರಾಜನ ಹತ್ತಿರ ಸಿಕ್ಕಿಹಾಕಿಕೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಪಾರಸಿಯ ರಾಜ್ಯದ ರಾಜಪುತ್ರನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು. ಏಕೆಂದರೆ ನಾನು ಆ ಪಾರಸಿಯ ಅರಸನಿಂದ ತಡೆಹಿಡಿಯಲಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:13
11 ತಿಳಿವುಗಳ ಹೋಲಿಕೆ  

ಪ್ರಧಾನ ದೇವದೂತ ಮಿಕಾಯೇಲನೂ ಇಂಥ ದೂಷಣೆಯನ್ನು ಆಡಲಿಲ್ಲ. ಮೋಶೆಯ ಪಾರ್ಥಿವ ಶರೀರದ ವಿಷಯದಲ್ಲಿ ಸೈತಾನನೊಡನೆ ವಾಗ್ವಾದ ಮಾಡಿದಾಗಲೂ ಅಂಥ ದೂಷಣೆಯನ್ನು ಆಡಲು ಧೈರ್ಯಗೊಳ್ಳದೆ, “ಸರ್ವೇಶ್ವರ ನಿನ್ನನ್ನು ಖಂಡಿಸಲಿ,” ಎಂದಷ್ಟೇ ಹೇಳಿದನು.


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಸ್ವರ್ಗದಲ್ಲಿ ಒಂದು ಯುದ್ಧ ಪ್ರಾರಂಭವಾಯಿತು. ಮಿಕಾಯೇಲನು ತನ್ನ ಸಹದೂತರ ಸಹಿತ ಘಟಸರ್ಪದ ವಿರುದ್ಧ ಯುದ್ಧಮಾಡಿದನು. ಘಟಸರ್ಪವೂ ತನ್ನ ದೂತರ ಸಮೇತ ಯುದ್ಧದಲ್ಲಿ ಕಾದಾಡಿತು.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ನಿಮ್ಮಲ್ಲಿಗೆ ಹಿಂದಿರುಗಲು ನಮಗೆ ಮನಸ್ಸಿತ್ತು. ಪೌಲನೆಂಬ ನಾನಂತೂ, ನಿಮ್ಮ ಬಳಿಗೆ ಬರಲು ಅನೇಕ ಸಾರಿ ಪ್ರಯಾಸಪಟ್ಟೆ. ಆದರೆ ಸೈತಾನನು ನಮಗೆ ಅಡ್ಡಿ ಆತಂಕವನ್ನೊಡ್ಡಿದನು.


ಸಕಲ ಆಧಿಪತ್ಯಕ್ಕೂ ಅಧಿಕಾರಕ್ಕೂ ಶಿರಸ್ಸು ಅವರೇ. ಅವರಲ್ಲಿ ಮಾತ್ರ ನೀವು ಪರಿಪೂರ್ಣತೆಯನ್ನು ಹೊಂದಲು ಸಾಧ್ಯ.


ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.


ಅಂದಿನಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಜೆರುಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸ ನಿಂತುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು