Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:16 - ಕನ್ನಡ ಸತ್ಯವೇದವು C.L. Bible (BSI)

16 ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಗೋ, ನರರೂಪಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ - ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರವಿುಸಿವೆ, ನಿತ್ರಾಣನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಮನುಷ್ಯಕುಮಾರನಂತಿರುವವನು ನನ್ನ ತುಟಿಗಳನ್ನು ಸ್ಪರ್ಶಿಸಿದನು. ನಾನು ಬಾಯಿ ತೆರೆದು ಮಾತನಾಡಲು ಪ್ರಾರಂಭಿಸಿದೆ. ನನ್ನ ಎದುರಿಗೆ ನಿಂತುಕೊಂಡಿದ್ದವನಿಗೆ, “ಸ್ವಾಮಿ, ದರ್ಶನದಲ್ಲಿ ನೋಡಿದ ಸಂಗತಿಗಳಿಂದ ನಾನು ಚಿಂತಾಕ್ರಾಂತನಾಗಿದ್ದೇನೆ; ಅಂಜಿಕೊಂಡಿದ್ದೇನೆ; ನಿಸ್ಸಹಾಯಕನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಮಾನವನಂತೆ ಇರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ನಾನು ಬಾಯಿತೆರೆದು ಮಾತನಾಡಿ, ನನ್ನ ಮುಂದೆ ನಿಂತಿದ್ದವನಿಗೆ, “ನನ್ನ ಒಡೆಯನೇ, ಆ ದರ್ಶನದ ನಿಮಿತ್ತ, ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ, ನಾನು ನಿತ್ರಾಣನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:16
29 ತಿಳಿವುಗಳ ಹೋಲಿಕೆ  

ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ತಟ್ಟನೆ ಮನುಷ್ಯ ರೂಪಹೊಂದಿದ ಒಬ್ಬನು ನನ್ನೆದುರಿಗೆ ನಿಂತನು.


ಆ ಉರಿಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿ: “ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು,” ಎಂದನು.


ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.


ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.


ಇಲ್ಲಿಗೆ ಆ ಕನಸಿನ ವಿವರ ಮುಗಿಯಿತು. ದಾನಿಯೇಲನಾದ ನಾನು ನನ್ನ ಆಲೋಚನೆಗಳಿಂದ ಬಹಳ ಕಳವಳಗೊಂಡೆ. ನನ್ನ ಮುಖ ಬಾಡಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲೇ ಇಟ್ಟುಕೊಂಡೆ.


ದಾನಿಯೇಲನಾದ ನನ್ನ ಮನ ಒಳಗೇ ವ್ಯಥೆಗೊಂಡಿತು. ನನ್ನ ಮನಸ್ಸಿನಲ್ಲಿ ತೋಚಿದ ದರ್ಶನಗಳು ನನ್ನನ್ನು ಕಳವಳಪಡಿಸಿದವು.


ಆ ದೀಪಸ್ತಂಭಗಳ ನಡುವೆ ‘ನರಪುತ್ರ'ನಂಥ ಒಬ್ಬ ವ್ಯಕ್ತಿಯಿದ್ದರು. ಅವರು ನಿಲುವಂಗಿಯನ್ನು ತೊಟ್ಟಿದ್ದರು. ಅದು ಅವರ ಪಾದಗಳನ್ನು ಮುಟ್ಟುವಷ್ಟು ನೀಳವಾಗಿತ್ತು. ಅಲ್ಲದೆ, ಚಿನ್ನದ ಎದೆಪಟ್ಟಿಯನ್ನು ಕಟ್ಟಿಕೊಂಡಿದ್ದರು.


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು.


ನನಗೆ ಅದು ಕೇಳಿಸಿತ್ತಾದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯಾ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆಮಾಡಿದೆ.


ಹೀಗೆ ಪ್ರಾರ್ಥನೆ ಮಾಡುತ್ತಿರುವಾಗಲೇ, ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲೆಂಬ ವ್ಯಕ್ತಿ ಅಸುರುಸುರಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿ, ನನ್ನೊಂದಿಗೆ ಮಾತಾಡಿ, ಹೀಗೆಂದು ಉಪದೇಶ ಮಾಡಿದನು:


ಅವನು ಬರುವುದಕ್ಕೆ ಹಿಂದಿನ ಸಾಯಂಕಾಲ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆ ಪಲಾಯಿತನು ಬೆಳಿಗ್ಗೆ ಬರುವನೆಂದು ಸರ್ವೇಶ್ವರ ನನ್ನ ಬಾಯನ್ನು ಬಿಚ್ಚಿದರು; ಹೌದು ನನ್ನ ಬಾಯಿ ಬಿಚ್ಚಿತ್ತು, ನನ್ನ ಮೂಕತನ ಹೋಗಿತ್ತು.


ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ.


ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.


ಅಧಿಕ ಜ್ಞಾನವುಳ್ಳವನಿಗೆ ಅಧಿಕ ವ್ಯಥೆ, ಹೆಚ್ಚು ತಿಳುವಳಿಕೆಯುಳ್ಳವನಿಗೆ ಹೆಚ್ಚು ಸಂಕಟ.


ಮಾನೋಹನು ಇದನ್ನು ಕೇಳಿ ಸರ್ವೇಶ್ವರನಿಗೆ, “ಸ್ವಾಮೀ, ದಯವಿರಲಿ; ನೀವು ಕಳುಹಿಸಿದ ದೇವಪುರುಷ ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿರುವ ಮಗುವಿಗಾಗಿ ಮಾಡಬೇಕಾದುದ್ದನ್ನು ನಮಗೆ ಬೋಧಿಸಲಿ,” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದರು.


ಆಗ ಗಿದ್ಯೋನನು, “ಸ್ವಾಮೀ, ನಾನು ಇಸ್ರಯೇಲರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆ ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು,” ಎಂದನು.


ಆಗ ಗಿದ್ಯೋನನು ಅವನಿಗೆ, “ಸ್ವಾಮೀ, ಸರ್ವೇಶ್ವರ ನನ್ನೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಭುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ,” ಎನ್ನಲು,


ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.


ಅದಕ್ಕೆ ಮೋಶೆ, “ಸ್ವಾಮೀ, ಈ ಕಾರ್ಯಕ್ಕೆ ತಾವು ಬೇರೊಬ್ಬನನ್ನು ನೇಮಿಸಬೇಕು,” ಎನ್ನಲು, ಸರ್ವೇಶ್ವರ ಅವನ ಮೇಲೆ ಸಿಟ್ಟುಗೊಂಡರು.


ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.


ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!


ಅವನು ನನ್ನೊಡನೆ ಮಾತಾಡುತ್ತಿರುವಾಗ ನಾನು ಮೈಮರೆತು ಅಧೋಮುಖವಾಗಿ ಬಿದ್ದಿದ್ದೆ. ಆಗ ಅವನು ನನ್ನನ್ನು ಮುಟ್ಟಿ, ನಿಲ್ಲಿಸಿ ನನಗೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು