Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:19 - ಕನ್ನಡ ಸತ್ಯವೇದವು C.L. Bible (BSI)

19 ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಮೇಲೆ ಆ ಪುರುಷನು ನನಗೆ - ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು ಎಂದು ಹೇಳಿದನು. ಅವನು ಆ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು - ಎನ್ನೊಡೆಯನೇ, ಮಾತಾಡು; ನನ್ನನ್ನು ಬಲಗೊಳಿಸಿದ್ದೀ ಎಂದರಿಕೆಮಾಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಆತನು “ದಾನಿಯೇಲನೇ, ಭಯಪಡಬೇಡ. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ಸಮಾಧಾನ ತಂದುಕೊ. ಈಗ ನೀನು ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಆತನು ನನ್ನೊಂದಿಗೆ ಮಾತನಾಡಿದ ಮೇಲೆ ನನಗೆ ಬಲಬಂದಿತು. ಆಗ ನಾನು, “ಸ್ವಾಮೀ, ನೀವು ನನಗೆ ಬಲವನ್ನು ನೀಡಿದಿರಿ. ಈಗ ನೀವು ಮಾತನಾಡಬಹುದು” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:19
29 ತಿಳಿವುಗಳ ಹೋಲಿಕೆ  

ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಆದರೆ ಸರ್ವೇಶ್ವರನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ,” ಎಂದನು.


ನಿನ್ನ ವಿಜ್ಞಾಪನೆಯ ಆರಂಭದಲ್ಲೇ ದೇವರ ಅಪ್ಪಣೆಯಾಯಿತು. ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ. ನೀನು ದೇವರಿಗೆ ಅತಿ ಪ್ರಿಯನು. ಈ ದೈವೋಕ್ತಿಯನ್ನು ಆಲೋಚಿಸು; ಈ ದರ್ಶನವನ್ನು ಗ್ರಹಿಸಿಕೊ:


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಪ್ರಿಯ ಪುತ್ರನೇ, ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅನುಗ್ರಹದಲ್ಲಿ ನೀನು ದೃಢನಾಗಿರು.


ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು.


ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.)


ಇದನ್ನು ಕಂಡ ಯೆಹೂದ್ಯರು, “ಅವನ ಮೇಲೆ ಈತನಿಗೆಷ್ಟು ಪ್ರೀತಿಯಿತ್ತು, ನೋಡಿದಿರಾ!” ಎಂದುಕೊಂಡರು.


ಮಾರ್ತ, ಅವಳ ಸಹೋದರಿ ಮರಿಯ ಮತ್ತು ಲಾಸರ, ಇವರು ಯೇಸುವಿಗೆ ಅಚ್ಚುಮೆಚ್ಚಿನವರು.


ಈ ಸಹೋದರಿಯರು, ಯೇಸು ಸ್ವಾಮಿಗೆ, “ಪ್ರಭುವೇ, ನಿಮ್ಮ ಆಪ್ತಮಿತ್ರನು ಅಸ್ವಸ್ಥನಾಗಿದ್ದಾನೆ,” ಎಂದು ಹೇಳಿಕಳುಹಿಸಿದರು.


ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.


ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ. ಇದು ಸೇನಾಧೀಶ್ವರ ಸರ್ವೇಶ್ವರ ಆದ ನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಸೇನಾಧೀಶ್ವರ ಸರ್ವೇಶ್ವರ ಹೀಗೆಂದಿದ್ದಾರೆ: “ನಿಮ್ಮ ಕೈ ಮುಂದಾಗಲಿ. ಈಗ ನೀವು ಕೇಳುತ್ತಿರುವ ಮಾತುಗಳು ಮಹಾದೇವಾಲಯಕ್ಕೆ ಅಸ್ತಿಭಾರವನ್ನು ಹಾಕಿದ ಕಾಲದಲ್ಲಿ ಪ್ರವಾದಿಗಳು ಆಡಿದ ಮಾತುಗಳೇ.


ಮನುಷ್ಯರೂಪ ಹೊಂದಿದ್ದ ಆ ವ್ಯಕ್ತಿ ಪುನಃ ನನ್ನನ್ನು ಮುಟ್ಟಿ ಬಲಪಡಿಸಿದ.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು