Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:3 - ಕನ್ನಡ ಸತ್ಯವೇದವು C.L. Bible (BSI)

3 ಆ ಮೂರು ವಾರ ಮುಗಿಯುವ ತನಕ ನಾನು ಯಾವ ರುಚಿಪದಾರ್ಥವನ್ನೂ ತಿನ್ನಲಿಲ್ಲ. ಮಾಂಸವನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಬಾಯಲ್ಲಿ ಇಡಲಿಲ್ಲ. ಎಣ್ಣೆಯನ್ನೂ ಹಚ್ಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ, ಮಾಂಸವನ್ನೂ ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ, ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಮೂರು ವಾರಗಳಲ್ಲಿ ನಾನು ಇಷ್ಟಪಡುತ್ತಿದ್ದ ಆಹಾರವನ್ನು ತಿನ್ನಲಿಲ್ಲ; ಮಾಂಸಾಹಾರವನ್ನು ಸೇವಿಸಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ; ತಲೆಗೆ ಎಣ್ಣೆಯನ್ನು ಹಾಕಿಕೊಳ್ಳಲಿಲ್ಲ. ಮೂರು ವಾರಗಳವರೆಗೆ ಇದೆಲ್ಲವನ್ನು ನಾನು ನಿಲ್ಲಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:3
11 ತಿಳಿವುಗಳ ಹೋಲಿಕೆ  

ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ.


ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.


ಅವರ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಈಜಿಪ್ಟಿಗೆ ಹಿಂದಿರುಗುವನು. ಕೆಲವು ವರ್ಷಗಳ ತನಕ ಉತ್ತರರಾಜನ ಗೊಡವೆಗೆ ಹೋಗನು.


ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.


ಸೂರೆ ಮಾಡಿರಿ ಅದರ ಬೆಳ್ಳಿಯನು, ಕೊಳ್ಳೆಹೊಡೆಯಿರಿ ಬಂಗಾರವನು. ಮಿತಿಯಿಲ್ಲ ಅದರ ಧನಕನಕಕೆ, ಎಲ್ಲೆಯಿಲ್ಲ ಅದರ ಅಮೂಲ್ಯ ಆಸ್ತಿಪಾಸ್ತಿಗೆ.


ಬಳಿಕ ರಾಜನು ಅರಮನೆಗೆ ಹಿಂದಿರುಗಿದನು. ಆ ರಾತ್ರಿಯೆಲ್ಲಾ ಉಪವಾಸವಿದ್ದನು. ವಾದ್ಯ ವಿನೋದಾವಳಿ ಯಾವುದನ್ನೂ ಹತ್ತಿರಬರಲು ಬಿಡಲಿಲ್ಲ. ನಿದ್ರೆ ಅವನ ಕಣ್ಣುಗಳಿಂದ ಮಾಯವಾಯಿತು.


ಅವನಿಗೆ ಆಹಾರವೂ ಬೇಸರವಾಗುವುದು ಮೃಷ್ಟಾನ್ನವೂ ಅಸಹ್ಯವಾಗುವುದು.


ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನ ದರ್ಶನಕ್ಕೆ ಬಂದನು. ಅರಸನು ಜೆರುಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಪಾದಗಳನ್ನು ತೊಳೆದುಕೊಂಡಿರಲಿಲ್ಲ; ಮೀಸೆಯನ್ನು ಕತ್ತರಿಸಿರಲಿಲ್ಲ; ಬಟ್ಟೆಗಳನ್ನು ಒಗೆಸಿಕೊಂಡಿರಲಿಲ್ಲ.


ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು.


ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು