Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:12 - ಕನ್ನಡ ಸತ್ಯವೇದವು C.L. Bible (BSI)

12 ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದರಿಂದ ಅವನ ಮನಸ್ಸು ಉಬ್ಬಿಕೊಳ್ಳುವದು; ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಉತ್ತರದ ಸೈನ್ಯವು ಸೋತು ಸೆರೆಯಾಗುವುದು. ದಕ್ಷಿಣ ರಾಜನು ತುಂಬ ಜಂಬಪಡುವನು ಮತ್ತು ಉತ್ತರದ ರಾಜನ ಸಾವಿರಾರು ಜನ ಸೈನಿಕರ ವಧೆ ಮಾಡುವನು. ಆದರೆ ಅವನು ಜಯಶೀಲನಾಗಿ ಮುಂದುವರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ಮಹಾ ಸೈನ್ಯವನ್ನು ಅವನು ತೆಗೆದುಹಾಕಿದ ಮೇಲೆ, ಅವನ ಹೃದಯವು ಹೆಚ್ಚಳ ಪಡುವುದು. ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ, ಪ್ರಾಬಲ್ಯಕ್ಕೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:12
19 ತಿಳಿವುಗಳ ಹೋಲಿಕೆ  

ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಆತನು ಹೊಸದಾಗಿ ಕ್ರೈಸ್ತಧರ್ಮವನ್ನು ಅಂಗೀಕರಿಸಿದವನಾಗಿರಬಾರದು; ಇಲ್ಲದಿದ್ದರೆ ಅಹಂಕಾರದಿಂದ ಉಬ್ಬಿಕೊಂಡು ಸೈತಾನನಂತೆಯೇ ದಂಡನೆಗೆ ಗುರಿಯಾದಾನು.


ಯುಕ್ತಿಯಿಂದಲೆ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಮನದಲ್ಲೆ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸುವನು. ರಾಜಾಧಿರಾಜನಿಗೂ ವಿರುದ್ಧವಾಗಿ ಏಳುವನು. ಆದರೂ ಯಾರ ಕೈಯೂ ಸೋಕದೆ ಹಾಳಾಗುವನು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.


ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದ್ದರಿಂದ ಜುದೇಯದ ಮೇಲೂ ಜೆರುಸಲೇಮಿನವರ ಮೇಲೂ ದೇವರ ಕೋಪವೆರಗಿತು.


ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.


ಅಹಹ! ಎದೋಮ್ಯರನ್ನು ಸೋಲಿಸಿ ಬಹುಕೀರ್ತಿ ಪಡೆದುಕೊಂಡೆ ಎಂದು ನೀನು ಹೆಮ್ಮೆಗೊಂಡಿರುವೆ! ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೆ? ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ,” ಎಂದು ಉತ್ತರಕೊಟ್ಟನು.


ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಬಹಳವಾಗಿ ಉಬ್ಬಿಕೊಂಡಿರುವೆ; ಆ ಕೀರ್ತಿ ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲೇ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಏಕೆ ಕೇಡನ್ನು ಬರಮಾಡಿಕೊಳ್ಳುವೆ?” ಎಂದು ಉತ್ತರಕೊಟ್ಟು ಕಳುಹಿಸಿದನು.


ನೀವು ಗರ್ವಗೊಂಡು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟೀರಿ!


ಆಗ ದಕ್ಷಿಣರಾಜನು ಕ್ರೋಧದಿಂದುರಿಯುತ್ತಾ ಹೊರಟುಬಂದು ಉತ್ತರರಾಜನ ಸಂಗಡ ಯುದ್ಧಮಾಡುವನು. ಉತ್ತರರಾಜನು ಮಹಾವ್ಯೂಹವನ್ನು ಕಟ್ಟಿದರೂ ಅದೆಲ್ಲವು ದಕ್ಷಿಣರಾಜನ ಕೈವಶವಾಗುವುದು.


“ತರುವಾಯ ಉತ್ತರರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿಕೊಂಡು ಬಹಳ ವರ್ಷಗಳು ಕಳೆದನಂತರ ಮಹಾಸೈನ್ಯ ಸಮೇತ ಅಧಿಕ ಸನ್ನಾಹದಿಂದ ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು