Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:20 - ಕನ್ನಡ ಸತ್ಯವೇದವು C.L. Bible (BSI)

20 “ಅವನ ಸ್ಥಾನದಲ್ಲಿ ಮತ್ತೊಬ್ಬನು ರಾಜ್ಯವಾಳುವನು. ಇವನು ರಾಜ್ಯದಲ್ಲಿನ ಶಿರೋಮಣಿಯಂಥ ನಾಡನ್ನೆಲ್ಲ ದೋಚಿಕೊಳ್ಳಬಲ್ಲ ಉದ್ಯೋಗಿಯನ್ನು ನೇಮಿಸುವನು. ಆದರೆ ಕೆಲವೇ ದಿನಗಳಲ್ಲಿ ಅವನು ಕದನದಿಂದ ಅಲ್ಲ, ಕೋಪದಿಂದ ಅಲ್ಲ, ಹಾಗೆಯೇ ಮಡಿದುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು, ರಾಜ್ಯದಲ್ಲಿ ಶಿರೋಮಣಿಯಾದ ದೇಶವನ್ನೆಲ್ಲ ದೋಚಿಕೊಳ್ಳತಕ್ಕವನನ್ನು ನೇಮಿಸುವನು. ಅವನು ಕೆಲವು ದಿನಗಳೊಳಗೆ ನಾಶವಾಗುವನು. ಅವನ ನಾಶ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು ರಾಜ್ಯದಲ್ಲಿ ಶಿರೋಮಣಿಯಾದ ದೇಶವನ್ನೆಲ್ಲ ದೋಚಿಕೊಳ್ಳತಕ್ಕವನನ್ನು ನೇವಿುಸುವನು; ಆಹಾ, ಕೆಲವು ದಿನಗಳೊಳಗೆ ನಾಶವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಉತ್ತರದ ರಾಜನ ತರುವಾಯ ಒಬ್ಬ ಹೊಸ ರಾಜನು ಬರುವನು. ಅವನು ಬಹು ವೈಭವಯುಕ್ತವಾದ ಜೀವನವನ್ನು ನಡೆಸಲಿಚ್ಛಿಸಿ ಅದಕ್ಕೆ ಬೇಕಾಗುವ ಹಣವನ್ನು ಸಂಗ್ರಹಿಸಲು ಒಬ್ಬ ತೆರಿಗೆ ಅಧಿಕಾರಿಯನ್ನು ಕಳುಹಿಸುವನು. ಆದರೆ ಕೆಲವು ವರ್ಷಗಳಲ್ಲಿ ಆ ರಾಜನು ನಾಶವಾಗುವನು. ಆದರೆ ಅವನು ಯುದ್ಧದಲ್ಲಿ ಮಡಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನ ಉತ್ತರಾಧಿಕಾರಿಯು ಅರಸೊತ್ತಿಗೆಯ ಸೊಗಸನ್ನು ಕಾದುಕೊಳ್ಳುವುದಕ್ಕಾಗಿ ಸುಂಕ ವಸೂಲಿ ಮಾಡುವವನನ್ನು ಕಳುಹಿಸುವನು. ಆದರೂ ಕೆಲವೇ ವರ್ಷಗಳಲ್ಲಿ ಅವನು ನಾಶ ಹೊಂದುವನು. ಇದು ಕೋಪದಿಂದಾಗಲಿ ಇಲ್ಲವೆ ಯುದ್ಧದಿಂದಾಗಲಿ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:20
7 ತಿಳಿವುಗಳ ಹೋಲಿಕೆ  

ಒದಗಿಸುವೆ ನಿನಗೆ ಮರವಿದ್ದಲ್ಲಿ ತಾಮ್ರವನು ಹಿತ್ತಾಳೆಗೆ ಬದಲಾಗಿ ಬಂಗಾರವನು ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನು ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನು ಮಾಡುವೆ ಶಾಂತಿಯನ್ನೇ ನಿನಗೆ ಅಧಿಪತಿಯನ್ನಾಗಿ ಸದ್ಧರ್ಮವನ್ನೇ ನಿನಗೆ ಅಧಿಕಾರಿಯನ್ನಾಗಿ.


“ಅವನ ಸ್ಥಾನದಲ್ಲಿ ನೀಚನೊಬ್ಬನು ಏಳುವನು. ಅವನು ರಾಜಪದವಿಗೆ ಹಕ್ಕುದಾರನಲ್ಲ. ಆದರೂ ನೆಮ್ಮದಿಯ ಕಾಲದಲ್ಲಿ ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ಅನಂತರ ಅವಳು ಹುಟ್ಟಿದ ಬುಡದಿಂದ ಒಡೆದ ಸಸಿಯೊಂದು ಅದರ ಸ್ಥಾನದಲ್ಲಿ ನಿಲ್ಲುವುದು. ಉತ್ತರರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು, ಅವನ ದುರ್ಗದೊಳಗೆ ನುಗ್ಗಿ, ಅಲ್ಲಿನವರಿಗೆ ಮಾಡುವಷ್ಟೂ ಮಾಡಿ ಗೆಲ್ಲುವನು.


ಹಾಲು ಕಡೆಯುವುದರಿಂದ ಬೆಣ್ಣೆ; ಮೂಗು ಹಿಂಡುವುದರಿಂದ ರಕ್ತ; ಕೋಪ ಎಬ್ಬಿಸುವುದರಿಂದ ಜಗಳ.


ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ನಾಡಿನಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆ ಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿಬಂಗಾರವನ್ನು ನಾಡಿನ ಜನರಿಂದ ಕೂಡಿಸಿ ಫರೋಹನಿಗೆ ತಂದೊಪ್ಪಿಸಿದನು.


ಪ್ರವಾದಿ ಹಬಕ್ಕೂಕನಿಗೆ ಪ್ರಕಟಿಸಲಾದ ದೈವೋಕ್ತಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು