Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:4 - ಕನ್ನಡ ಸತ್ಯವೇದವು C.L. Bible (BSI)

4 ಆದರೆ ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯ ಒಡೆದು ನಾಲ್ಕು ದಿಕ್ಕುಗಳಿಗೂ ಸೀಳಿಹೋಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ಪ್ರಬಲವಾಗಿ ಇದ್ದಂತೆ ಅದು ಇನ್ನು ಪ್ರಬಲವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ ನಾಲ್ಕು ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು. ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ [ನಾಲ್ಕು] ಪಾಲಾಗುವದು; ಅದು ಅವನ ಸಂತತಿಗೆ ಭಾಗವಾಗದು, ಅವನ ಆಳಿಕೆಯಲ್ಲಿ ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು; ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ರಾಜನು ಬಂದ ಮೇಲೆ ಅವನ ರಾಜ್ಯವು ಒಡೆಯುವದು. ಅವನ ರಾಜ್ಯವು ನಾಲ್ಕು ಹೋಳಾಗಿ ಜಗತ್ತಿನ ನಾಲ್ಕು ದಿಕ್ಕುಗಳಲ್ಲಿ ಹಂಚಿಹೋಗುವುದು. ಅವನ ರಾಜ್ಯವು ಅವನ ಮಕ್ಕಳಲ್ಲಿ ಅಥವಾ ಮೊಮ್ಮಕ್ಕಳಲ್ಲಿ ಹಂಚಲ್ಪಡುವದಿಲ್ಲ. ಅವನ ರಾಜ್ಯಕ್ಕೆ ಅವನು ಮೊದಲು ಹೊಂದಿದ್ದ ಅಧಿಕಾರವು ಇರುವದಿಲ್ಲ. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಸಿದುಕೊಂಡು ಬೇರೆ ಜನರಿಗೆ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಉದಯಿಸಿದ ನಂತರ, ಅವನ ರಾಜ್ಯ ಒಡೆದು ಆಕಾಶದ ನಾಲ್ಕು ದಿಕ್ಕುಗಳಿಗೂ ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಅದು ಇನ್ನು ಪ್ರಬಲವಾಗದು. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಿತ್ತುಕೊಂಡು ಇತರರಿಗೆ ನೀಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:4
24 ತಿಳಿವುಗಳ ಹೋಲಿಕೆ  

ಆ ಕೊಂಬು ಮುರಿದುಹೋದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದಂತೆಯೆ ಆ ಜನಾಂಗದಿಂದ ನಾಲ್ಕು ರಾಜ್ಯಗಳು ಏಳುವುವು. ಆದರೆ ಮೊದಲನೇ ರಾಜನಿಗೆ ಇದ್ದಷ್ಟು ಶಕ್ತಿ ಅವುಗಳಿಗೆ ಇರುವುದಿಲ್ಲ.


ಆ ಹೋತಕ್ಕೆ ಅತ್ಯಧಿಕ ಹುಮ್ಮಸ್ಸು ಬಂದಿತು. ಆದರೆ ಅದು ಪ್ರಾಬಲ್ಯಕ್ಕೆ ಬರುವಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಪ್ರಸಿದ್ಧ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೂ ಚಾಚಿಕೊಂಡವು.


ಆದರೆ ಯಾವ ಜನಾಂಗ ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು. ಹೌದು, ಬೇರುಸಹಿತ ಕಿತ್ತುಹಾಕಿ ನಾಶಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಾಗಲೆ ಅವುಗಳ ನಡುವೆ ಇಗೋ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದಕ್ಕೆ ಎಡೆಮಾಡಿಕೊಡಲು ಮುಂಚಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಆಶ್ಚರ್ಯವೆಂದರೆ, ಆ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳಿದ್ದವು. ಬಡಾಯಿ ಕೊಚ್ಚಿಕೊಳ್ಳುವ ಬಾಯೂ ಇತ್ತು.


ಅದರ ಸಾರಾಂಶ ಇದು: ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿತ್ತು.


ಒಂದು ಜನಾಂಗವನ್ನು ಅಥವಾ ಒಂದು ರಾಜ್ಯವನ್ನು ಕಿತ್ತು, ಕೆಡವಿ, ನಾಶಪಡಿಸಿ ಎಂದು ನಾನು ಎಂದಾದರೂ ಅಪ್ಪಣೆ ಕೊಡಲು ಸಾಧ್ಯ.


ಆದರೆ ಅವರನ್ನು ಕಿತ್ತುಹಾಕಿದ ಮೇಲೆ ಮತ್ತೆ ಅವರಿಗೆ ಕನಿಕರಿಸುವೆನು. ಪ್ರತಿಯೊಬ್ಬನನ್ನು ಅವನವನ ಆಸ್ತಿಪಾಸ್ತಿಗೆ ಅವನವನ ನಾಡಿಗೆ ಮರಳಿ ಬರಮಾಡುವೆನು.


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು ಇಂತೆಂದರು: “ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವೂ ನಾಶವಾಗುವುದು; ಅದರಂತೆಯೇ ತಮ್ಮತಮ್ಮೊಳಗೆ ಕಾದಾಡುವ ಊರುಗಳೂ ಕುಟುಂಬಗಳೂ ಹಾಳಾಗುವುವು.


ಅನಂತರ ನಾನು ನೋಡುತ್ತಿರುವಾಗಲೆ ಚಿರತೆಯ ಹಾಗಿದ್ದ ಮತ್ತೊಂದು ಮೃಗ ಕಾಣಿಸಿತು. ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಗಳಂತಿರುವ ನಾಲ್ಕು ರೆಕ್ಕೆಗಳಿದ್ದವು. ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನ ಕೊಡಲಾಯಿತು.


“ಸರ್ವೇಶ್ವರನ ಈ ವಾಣಿಯನ್ನು ಕೇಳು: ‘ನೋಡು, ನಾನು ಕಟ್ಟಿದ್ದನ್ನು ನಾನೇ ಕೆಡವುತ್ತೇನೆ. ನಾನು ನೆಟ್ಟಿದ್ದನ್ನು ನಾನೇ ಕಿತ್ತುಹಾಕುತ್ತೇನೆ. ಹೌದು ಜಗದಲ್ಲೆಲ್ಲ ಹಾಗೆ ಮಾಡುತ್ತೇನೆ.


ಹೆಣ ಹೂಣುವ, ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲ ಸರ್ವೇಶ್ವರನಿಗೆ ಪರಿಶುದ್ಧ ಸ್ಥಾನವಾಗುವುದು. ಈ ನಗರ ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ; ನಾಲ್ಕುಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿದ್ದರು. ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ, ಮರಗಳ ಮೇಲಾಗಲಿ ಗಾಳಿಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ಅವರು ತಡೆಹಿಡಿದಿದ್ದರು.


ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ ಅವರನ್ನು ಆಯಾ ಗಾಳಿಗೆ ತೂರಿಬಿಡುವೆನು. ಏಲಾಮಿನಿಂದ ದೇಶಭ್ರಷ್ಟರಾದವರು ಆಶ್ರಯ ಹುಡುಕದ ರಾಜ್ಯವೇ ಇರದು.


ಆಗ ಸರ್ವೇಶ್ವರ ನನಗೆ - “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ; ಶ್ವಾಸವೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತ ಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ, ಎಂಬುದಾಗಿ ಶ್ವಾಸಕ್ಕೆ ನುಡಿ,” ಎಂದು ಅಪ್ಪಣೆಕೊಟ್ಟರು.


ಸರ್ವೇಶ್ವರ ತಮ್ಮ ಜನರಿಗೆ ಇಂತೆನ್ನುತ್ತಾರೆ: “ಚತುರ್ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದವನು ನಾನೇ. ಆದರೆ ಈಗ ಎಚ್ಚೆತ್ತುಕೊಳ್ಳಿ, ಹೊರನಾಡುಗಳಿಂದ ಓಡಿಬನ್ನಿ, ಇದು ಸರ್ವೇಶ್ವರನ ನುಡಿ. ಬಾಬಿಲೋನಿಗೆ ಸೆರೆಹೋದ ಸಿಯೋನಿನವರೇ, ಅಲ್ಲಿಂದ ತಪ್ಪಿಸಿಕೊಂಡು ಬನ್ನಿ.


ಅದಕ್ಕೆ ದೂತನು, “ಇವು ಆಕಾಶದ ನಾಲ್ಕು ಮಾರುತಗಳು; ಭೂಲೋಕದೊಡೆಯನ ಸಾನ್ನಿಧ್ಯದಿಂದ ಇದೀಗಲೆ ಹೊರಟುಬಂದಿವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು