Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:45 - ಕನ್ನಡ ಸತ್ಯವೇದವು C.L. Bible (BSI)

45 ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಸಮುದ್ರಕ್ಕೂ ಅಂದಚಂದದ ಪರಿಶುದ್ಧಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು; ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯಮಾಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಸಮುದ್ರಕ್ಕೂ ಸುಂದರವಾದ ಪರಿಶುದ್ಧ ಪರ್ವತಕ್ಕೂ ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಆ ಕೆಟ್ಟ ಅರಸನು ಸತ್ತುಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:45
29 ತಿಳಿವುಗಳ ಹೋಲಿಕೆ  

ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ಯುಕ್ತಿಯಿಂದಲೆ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಮನದಲ್ಲೆ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸುವನು. ರಾಜಾಧಿರಾಜನಿಗೂ ವಿರುದ್ಧವಾಗಿ ಏಳುವನು. ಆದರೂ ಯಾರ ಕೈಯೂ ಸೋಕದೆ ಹಾಳಾಗುವನು.


ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ದೇವರ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಸ್ವರ್ಗದಿಂದ ಬೆಂಕಿ ಇಳಿದುಬಂದು ಅವರನ್ನು ದಹಿಸಿಬಿಟ್ಟಿತು.


ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು.


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


“ಉತ್ತರದಿಂದ ಬಂದ ಮಿಡತೆಗಳ ಸೈನ್ಯವನ್ನು ನಿಮ್ಮಿಂದ ತೊಲಗಿಸುವೆನು; ಹಾಳುಬಿದ್ದ ಬಂಜರುಭೂಮಿಗೆ ಅದನ್ನು ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಹಿಂಭಾಗವನ್ನು ಪಶ್ಚಿಮದ ಸಮುದ್ರಕ್ಕೂ ತಳ್ಳಿಬಿಡುವೆನು. ಅದು ನಿಮಗೆ ಮಾಡಿದ ಘೋರದುಷ್ಕೃತ್ಯಗಳಿಗಾಗಿ ದಂಡಿಸುವೆನು. ಅದರ ಹೆಣಗಳ ದುರ್ವಾಸನೆ ಏರುವುದು; ಗಬ್ಬು ನಾರುವುದು.”


ಆ ‘ಚೆಲುವಿನ ನಾಡಿಗೂ’ ನುಗ್ಗುವನು. ಅನೇಕ ಸೀಮೆಗಳು ಅವನಿಂದ ನಾಶವಾಗುವುವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ದಕ್ಷಿಣದರಾಜನಿಗೆ ವಿರುದ್ಧ ಬರುವವನು ಇಚ್ಛಾನುಸಾರ ವರ್ತಿಸುವನು. ಅವನನ್ನು ಎದುರಿಸಬಲ್ಲವನು ಒಬ್ಬನೂ ಇರನು. ಆ ‘ಚೆಲುವಿನ ನಾಡನ್ನೂ’ ಗೆದ್ದು ಅದನ್ನು ಪೂರ್ತಿಯಾಗಿ ತನ್ನ ಕೈಹಿಡಿತದಲ್ಲಿ ಇಟ್ಟುಕೊಳ್ಳುವನು.


ಆದರೆ (ದೇವರ) ನ್ಯಾಯಸಭೆ ತೀರ್ಪಿತ್ತು, ಅವನ ದೊರೆತನವನ್ನು ಕಿತ್ತು, ವಿನಾಶಮಾಡಿ, ಕೊನೆಗಾಣಿಸಿಬಿಡುವುದು.


ಆಗ ಕಬ್ಬಿಣ-ಮಣ್ಣು-ಕಂಚು-ಬೆಳ್ಳಿ-ಬಂಗಾರ ಇವುಗಳೆಲ್ಲವೂ ಪುಡಿಪುಡಿಯಾದವು; ಸುಗ್ಗಿಯ ಕಣಗಳ ಹೊಟ್ಟಿನಂತಾದವು. ಗಾಳಿ ಅವುಗಳನ್ನು ತೂರಿಕೊಂಡುಹೋಯಿತು. ಅವುಗಳಿಗೆ ನೆಲೆಯೇ ಇಲ್ಲವಾಯಿತು. ಪ್ರತಿಮೆಗೆ ಬಡಿದ ಆ ಬಂಡೆ ಮಹಾ ಪರ್ವತವಾಗಿ ಭೂಲೋಕದಲ್ಲೆಲ್ಲಾ ತುಂಬಿಕೊಂಡಿತು.


ಇಗೋ, ನಾನು ನಿನಗೆ ವಿರುದ್ಧನಾಗಿ, ನಿನ್ನನ್ನು ತಿರುಗಿಸಿ ಮುನ್ನಡೆಸಿ, ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,


‘ಹತ್ತಿಹೋಗುವೆನು ನಾನು ಆಕಾಶಮಂಡಲಕೆ ಉತ್ತರದಿಕ್ಕಿನ ಕೊನೆಗಿರುವ ಸುರಗಣ ಪರ್ವತಕ್ಕೆ ಎತ್ತುವೆ ಸಿಂಹಾಸನವನ್ನು ದೇವ ನಕ್ಷತ್ರಗಳ ಮೇಲಕೆ ‘ಕುಳಿತಲ್ಲಿ ರಾಜ್ಯವಾಳುವೆ’ ಎಂದುಕೊಂಡೆ ನಿನ್ನೊಳಗೆ.


ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ I ಆನಂದದಾಯಕ ರಾಜಾಧಿರಾಜನ ಆ ನಗರ II


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ನಾನು ಬಾಯಿಬಿಟ್ಟು ಬೇಡಿಕೊಂಡೆ. ನನ್ನ ಮತ್ತು ನನ್ನ ಜನರಾದ ಇಸ್ರಯೇಲರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ದೇವರಾದ ಸರ್ವೇಶ್ವರನಿಗೆ ಬಿನ್ನವಿಸಿದೆ.


ಹೀಗಿರಲು ಪೂರ್ವದಿಂದ ಮತ್ತು ಉತ್ತರದಿಂದ ಬರುವ ಸುದ್ದಿ ಅವನನ್ನು ಬಾಧಿಸುವುದು. ಅವನು ಅತಿರೋಷಗೊಂಡು ಬಹುಜನರನ್ನು ಧ್ವಂಸಿಸಿ ನಿರ್ನಾಮಮಾಡಲು ಹೊರಡುವನು.


ಈಜಿಪ್ಟ್ ದೇಶದ ಮುಂದೆ ಇರುವ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯುವುದು.


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು