Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:7 - ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಅವಳು ಹುಟ್ಟಿದ ಬುಡದಿಂದ ಒಡೆದ ಸಸಿಯೊಂದು ಅದರ ಸ್ಥಾನದಲ್ಲಿ ನಿಲ್ಲುವುದು. ಉತ್ತರರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು, ಅವನ ದುರ್ಗದೊಳಗೆ ನುಗ್ಗಿ, ಅಲ್ಲಿನವರಿಗೆ ಮಾಡುವಷ್ಟೂ ಮಾಡಿ ಗೆಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅನಂತರ ಅವಳು ಹುಟ್ಟಿದ ವಂಶವೃಕ್ಷದಲ್ಲಿ ಹುಟ್ಟಿದವರು ಅದರ ಸ್ಥಾನದಲ್ಲಿ ನಿಂತು ಉತ್ತರ ದಿಕ್ಕಿನ ರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ, ಅವರೊಡನೆ ಯುದ್ಧಮಾಡಿ, ಅವರನ್ನು ಗೆಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅನಂತರ ಅವಳು ಹುಟ್ಟಿದ ಬುಡದಿಂದ ಒಡೆದ ಸಸಿಯು ಅದರ ಸ್ಥಾನದಲ್ಲಿ ನಿಂತು ಉತ್ತರರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ ಅಲ್ಲಿನವರಿಗೆ ಮಾಡುವಷ್ಟು ಮಾಡಿ ಗೆದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಆದರೆ ಅವಳ ಕುಟುಂಬದ ಒಬ್ಬ ವ್ಯಕ್ತಿಯು ದಕ್ಷಿಣದ ರಾಜನ ಸ್ಥಳವನ್ನು ತೆಗೆದುಕೊಳ್ಳಲು ಬರುವನು. ಅವನು ಉತ್ತರದ ರಾಜನ ಸೈನ್ಯದ ಮೇಲೆ ಧಾಳಿ ಮಾಡುವನು. ಅವನು ಆ ಅರಸನ ಭದ್ರವಾದ ಕೋಟೆಗೆ ನುಗ್ಗುವನು. ಅವನು ಯುದ್ಧಮಾಡಿ ಗೆಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವಳ ವಂಶದಲ್ಲಿಯ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು, ಸೈನ್ಯದೊಂದಿಗೆ ಬಂದು, ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ, ಅವರ ವಿರುದ್ಧ ಹೋರಾಡಿ ಗೆಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:7
14 ತಿಳಿವುಗಳ ಹೋಲಿಕೆ  

ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಪ್ಪಂದವನ್ನೂ ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಭಾಷೆಮಾಡಿ ಪ್ರಯೋಜನವೇನು? ಅದನ್ನೆಲ್ಲಾ ಮುರಿದುಬಿಟ್ಟನಲ್ಲವೇ? ಇವನು ನನ್ನಿಂದ ಪಾರಾಗನು.


ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ.


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ಆದಕಾರಣ, ಇಸ್ರಯೇಲಿನ ತಲೆಬಾಲಗಳನ್ನೂ ತುದಿಬುಡವನ್ನೂ ಹುಲ್ಲಿನಂತೆ ಸ್ವಾಮಿ ಒಂದೇ ದಿನದಲ್ಲಿ ಕಡಿದುಬಿಡುವರು; ಅಂದರೆ ಸನ್ಮಾನ್ಯ ಹಿರಿಯರನ್ನು, ಸುಳ್ಳುಬೋಧನೆ ಮಾಡುವ ಪ್ರವಾದಿಗಳನ್ನು ಸಂಹರಿಸಿಬಿಡುವರು.


ಅಲ್ಪವಾಗಿರಲಿ ಅವನ ಜೀವನಾವಧಿ I ಮತ್ತೊಬ್ಬನದಾಗಲಿ ಅವನಾಸ್ತಿಪಾಸ್ತಿ II


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಮತ್ತೆ ಮೊಳೆಯುವೆನೆಂಬ, ಮರಳಿ ಚಿಗುರುವೆನೆಂಬ ನಂಬಿಕೆಯಿಂದಿದೆ ಅಲ್ಲವೆ ಕಡಿದ ವಟವೃಕ್ಷ?


ಕೆಲವು ವರ್ಷಗಳಾದ ಮೇಲೆ ಅವರು ಒಪ್ಪಂದ ಮಾಡಿಕೊಳ್ಳುವರು. ಇದನ್ನು ದೃಢಪಡಿಸಿಕೊಳ್ಳಲು ಆ ದಕ್ಷಿಣ ರಾಜನ ಕುಮಾರಿ ಉತ್ತರ ದಿಕ್ಕಿನ ರಾಜನನ್ನು ಸೇರುವಳು. ಆದರೂ ತನ್ನ ಸಂಬಂಧವನ್ನು ಉಳಿಸಿಕೊಳ್ಳನು. ಅವನೂ ಅವನ ಸಂತಾನವೂ ನಿಲ್ಲವು. ಅವಳು, ಅವಳನ್ನು ಕರೆತಂದವರು, ಪಡೆದವನು, ಕರೆದುಕೊಂಡವನು ಇವರೆಲ್ಲರೂ ಅಂದು ನಾಶಕ್ಕೀಡಾಗುವರು.


“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು