Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:11 - ಕನ್ನಡ ಸತ್ಯವೇದವು C.L. Bible (BSI)

11 ಅನುದಿನದ ಬಲಿ ನಿಂತುಹೋಗುವುದು. ‘ವಿನಾಶಕರ ವಿಕಟ ಮೂರ್ತಿ’ ಪ್ರತಿಷ್ಠಿತವಾದ ಮೇಲೆ 1290 ದಿನಗಳು ಕಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿತ್ಯಹೋಮವು ನೀಗಿಸಲ್ಪಟ್ಟು ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತೊಂಭತ್ತು ದಿನಗಳು ಕಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಿತ್ಯಹೋಮವು ನಿಲ್ಲಿಸಲ್ಪಟ್ಟು ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಒಂದು ಸಾವಿರದ ಇನ್ನೂರ ತೊಂಭತ್ತು ದಿನಗಳು ಕಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಪ್ರತಿದಿನದ ಯಜ್ಞವು ಸಕಾಲಕ್ಕೆ ನಿಂತುಹೋಗುವುದು. ಆ ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ, 1,290 ದಿನಗಳು ಕಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:11
14 ತಿಳಿವುಗಳ ಹೋಲಿಕೆ  

ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸುವುದು. ಅನುದಿನದ ಬಲಿಯನ್ನು ನಿಲ್ಲಿಸುವುದು. ವಿನಾಶಕರ ವಿಕಟ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.


“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.


“ವಿನಾಶಕಾರಿಯಾದ ವಿಕಟಮೂರ್ತಿಯು ಇರಬಾರದ ಸ್ಥಾನದಲ್ಲಿ ಇರುವುದನ್ನು ನೀವು ನೋಡುವಾಗ (ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ) ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ;


ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”


ಜಂಬದ ಹೇಳಿಕೆಗಳನ್ನೂ ದೇವದೂಷಣೆಯ ಮಾತುಗಳನ್ನೂ ಆಡುವುದಕ್ಕೆ ಆ ಮೃಗಕ್ಕೆ ಒಂದು ಬಾಯನ್ನು ಕೊಡಲಾಗಿತ್ತು. ನಲವತ್ತ ಎರಡು ತಿಂಗಳುಗಳವರೆಗೆ ತನ್ನ ಕಾರ್ಯ ಸಾಧಿಸಿಕೊಳ್ಳುವ ಅಧಿಕಾರವನ್ನೂ ಅದಕ್ಕೆ ನೀಡಲಾಗಿತ್ತು.


ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ಕನಸಿನಲ್ಲಿ ತಿಳಿಸಲಾದ ಉದಯಾಸ್ತಮಾನಗಳ ವಿಷಯ ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹುದೂರದ ಕಾಲದ್ದು,” ಎಂದು ಹೇಳಿದನು.


“ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಮ್ಮನ್ನು ಪರೀಕ್ಷಿಸಿನೋಡು. ಸೇವಕರಾದ ನಮಗೆ ಭೋಜನಕ್ಕೆ ಬದಲಾಗಿ ಕಾಯಿಪಲ್ಯ, ಪಾನಕ್ಕೆ ಬದಲಾಗಿ ನೀರು ಒದಗಿಸಿದರೆ ಸಾಕು.


ಆ ಮಹಿಳೆ ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಆಕೆಗೆ ಶುಶ್ರೂಷೆಯಾಗಬೇಕೆಂದು ದೇವರೇ ಆ ಸ್ಥಳವನ್ನು ಸಜ್ಜುಗೊಳಿಸಿದ್ದರು.


ಅಷ್ಟು ದಿವಸಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಅಧರ್ಮವನ್ನು ಹೊತ್ತುಕೊಳ್ಳಬೇಕು. ವರ್ಷ ಒಂದಕ್ಕೆ ಒಂದು ದಿವಸ ಮೇರೆಗೆ ನಲವತ್ತು ದಿನ ಅವರ ಅಧರ್ಮವನ್ನು ಹೊತ್ತುಕೊಳ್ಳಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ಬಲಿಪೀಠದ ಮೇಲೆ ಅನುದಿನವೂ ಸಮರ್ಪಿಸಬೇಕಾದುವುಗಳು ಇವು: ಒಂದು ವರ್ಷದ ಎರಡು ಕುರಿಗಳನ್ನು ದಿನಂಪ್ರತಿ ಬಲಿದಾನ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು