Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:21 - ಕನ್ನಡ ಸತ್ಯವೇದವು C.L. Bible (BSI)

21 ಕಾಲಗಳು ಋತುಗಳು ಆತನ ಕೈಯಲ್ಲಿವೆ ರಾಜರನ್ನು ಕೆಳಕ್ಕಿಳಿಸುವವನು, ಮೇಲೆ ನಿಲ್ಲಿಸುವವನು ಆತನೆ. ಜ್ಞಾನಿಗಳ ಜ್ಞಾನ, ವಿವೇಕಿಗಳ ವಿವೇಕ ಆತನ ಕೊಡುಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:21
40 ತಿಳಿವುಗಳ ಹೋಲಿಕೆ  

ಇದು ಕಾವಲುಗಾರ ದೂತನ ತೀರ್ಮಾನ; ಹಾಗು ದೇವರ ತೀರ್ಪು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದರ ಆಳ್ವಿಕೆಯನ್ನು ಅವರು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಕನಿಷ್ಠರನ್ನೂ ಆ ಪದವಿಗೆ ನೇಮಿಸುತ್ತಾರೆ. ಇದು ಎಲ್ಲಾ ಜನರಿಗೆ ತಿಳಿದಿರಬೇಕೆಂಬುದೇ ಈ ತೀರ್ಮಾನ,' ಎಂದು ಸಾರಿದನು.


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”


ಅರಸರು ಹಾಕಿದ ಬಂಧನವನ್ನು ಬಿಚ್ಚಿ ಬಿಗಿಯುತ್ತಾನೆ ಅವರ ಸೊಂಟಕ್ಕೆ ಚಿಂದಿ.


ದೇವರು ಸೊಲೊಮೋನನಿಗೆ ಸಮುದ್ರತೀರದ ಮರಳಿನಷ್ಟು ಅಪರಿಮಿತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದ್ದರು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಮತ್ತು ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು, ತಕ್ಕಜ್ಞಾನ, ವಿವೇಕ ವಿವಿಧ ಶಿಲ್ಪಶಾಸ್ತ್ರ ಕುಶಲತೆಯನ್ನು ಅನುಗ್ರಹಿಸಿದ್ದೇನೆ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಕಾಲ ಬದಲಾಗುತ್ತಿರುತ್ತದೆ ಎಂದುಕೊಂಡೇ ನನ್ನ ಮುಂದೆ ಇಲ್ಲಸಲ್ಲದ್ದನ್ನು ಆಡಲು ಒಪ್ಪಂದ ಮಾಡಿಕೊಂಡಿದ್ದೀರಿ. ಅಂತು ಆ ಕನಸನ್ನು ನೀವು ನನಗೆ ತಿಳಿಸಲೇಬೇಕು. ಆಗ ಅದರ ಉದ್ದೇಶವನ್ನು ವಿವರಿಸಬಲ್ಲಿರೆಂದು ನಾನು ತಿಳಿದುಕೊಳ್ಳುವೆನು,” ಎಂದು ಹೇಳಿದನು.


ನೀನು ನಿನ್ನ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಕೈಗೊಳ್ಳುವಂತೆ ಅವರು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಲಿ! ಇಸ್ರಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ!


ಭೂಲೋಕದವರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ್ದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಅವನ ದರ್ಶನಕ್ಕೆ ಬರುತ್ತಿದ್ದರು.


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಕೆಲವು ವರ್ಷಗಳಾದ ಮೇಲೆ ಅವರು ಒಪ್ಪಂದ ಮಾಡಿಕೊಳ್ಳುವರು. ಇದನ್ನು ದೃಢಪಡಿಸಿಕೊಳ್ಳಲು ಆ ದಕ್ಷಿಣ ರಾಜನ ಕುಮಾರಿ ಉತ್ತರ ದಿಕ್ಕಿನ ರಾಜನನ್ನು ಸೇರುವಳು. ಆದರೂ ತನ್ನ ಸಂಬಂಧವನ್ನು ಉಳಿಸಿಕೊಳ್ಳನು. ಅವನೂ ಅವನ ಸಂತಾನವೂ ನಿಲ್ಲವು. ಅವಳು, ಅವಳನ್ನು ಕರೆತಂದವರು, ಪಡೆದವನು, ಕರೆದುಕೊಂಡವನು ಇವರೆಲ್ಲರೂ ಅಂದು ನಾಶಕ್ಕೀಡಾಗುವರು.


ದರ್ಶಿ ಸಮುವೇಲ, ಪ್ರವಾದಿ ನಾತಾನ ಹಾಗೂ ದರ್ಶಿ ಗಾದ, ಇವರ ಚರಿತ್ರೆಗಳಲ್ಲಿ ಲಿಖಿತವಾಗಿವೆ.


ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ.


ವಿಧಿನಿಯಮಗಳನ್ನು ಬಲ್ಲ ಪಂಡಿತರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.


ಪ್ರತಿಯೊಬ್ಬನು ತನ್ನ ಮೇಲಿನ ಅಧಿಕಾರಿಗಳಿಗೆ ಅಧೀನನಾಗಿರಬೇಕು. ಅಧಿಕಾರವೆಲ್ಲವೂ ಬರುವುದು ದೇವರಿಂದಲೇ. ಈಗಿರುವ ಅಧಿಕಾರಿಗಳೂ ದೇವರಿಂದಲೇ ನೇಮಕಗೊಂಡವರು.


ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.


ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರ! ಏಕೆಂದರೆ ಜ್ಞಾನವೂ ಶಕ್ತಿಯೂ ಆತನಿಗೆ ಸ್ವಂತ.


ನನ್ನ ಪಿತೃಗಳ ದೇವಾ, ಮಾಡುವೆ ನಿನ್ನ ಗುಣಗಾನ, ನಿನಗೆ ನನ್ನ ಧನ್ಯವಾದ. ಏಕೆಂದರೆ ನೀನೇ ನನಗೆ ಜ್ಞಾನಶಕ್ತಿಗಳನ್ನು ದಯಪಾಲಿಸಿದಾತ. ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಾತ ನೀನೇ ಹೌದು, ರಾಜ ಬಯಸಿದ ಗುಟ್ಟನ್ನು ನಮಗೆ ವ್ಯಕ್ತಪಡಿಸಿದಾತ ನೀನೇ.


ಪರ್ಷಿಯದ ರಾಜನಾದ ಸೈರೆಷನ ಆಳ್ವಿಕೆಯ ಮೂರನೇ ವರ್ಷದಲ್ಲಿ ಬೇಲ್ತೆಶಚ್ಚೆರನೆಂಬ ದಾನಿಯೇಲನಿಗೆ ಒಂದು ಸಂಗತಿ ಪ್ರಕಟವಾಯಿತು. ಅದು ಮಹಾ ಹೋರಾಟದ ಸಂಗತಿ, ಸತ್ಯವಾದ ಸಂಗತಿ. ಅದರ ಅರ್ಥವನ್ನು ತಾನು ಕಂಡ ದರ್ಶನದಿಂದ ಮನದಟ್ಟು ಮಾಡಿಕೊಂಡನು.


ಆ ಮರವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿ, ಎಲೆಗಳನ್ನು ಉದುರಿಸಿ, ಹಣ್ಣುಗಳನ್ನು ಕಿತ್ತುಬಿಸಾಡಿ. ಮೃಗಗಳು ಅದರ ನೆರಳನ್ನು ಬಿಟ್ಟು ತೆರಳಲಿ, ಪಕ್ಷಿಗಳು ರೆಂಬೆಗಳನ್ನು ತೊರೆದುಹೋಗಲಿ.


“ರಾಜರೇ, ನೀವು ಬೆಳೆದು ಬಲಗೊಂಡಿದ್ದೀರಿ. ನಿಮ್ಮ ಕೀರ್ತಿ ವೃದ್ಧಿಯಾಗಿ ಗಗನಕ್ಕೇರಿದೆ. ನಿಮ್ಮ ಆಳ್ವಿಕೆ ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು