Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:22 - ಕನ್ನಡ ಸತ್ಯವೇದವು C.L. Bible (BSI)

22 ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನು ಅಗಾಧವಿಷಯಗಳನ್ನೂ ಗೂಡಾರ್ಥಗಳನ್ನೂ ಬೈಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವದೂ ಆತನಿಗೆ ಗೋಚರ; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಳದಲ್ಲಿ ಅಡಗಿರುವ ರಹಸ್ಯಗಳನ್ನು ಬಲ್ಲವನು ಆತನೇ. ಬೆಳಕು ಆತನಲ್ಲಿಯೇ ಇದೆ. ಆದ್ದರಿಂದ ಕಗ್ಗತ್ತಲೆಯಲ್ಲಿ ಅಡಗಿರುವುದು ಆತನಿಗೆ ಗೋಚರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:22
37 ತಿಳಿವುಗಳ ಹೋಲಿಕೆ  

ಇರುಳಿನ ಆಳದಲ್ಲಿರುವವುಗಳನ್ನು ಬೆಳಗಿಸುತ್ತಾನೆ ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾನೆ.


ದೇವರೇ ಬೆಳಕು. ಅವರಲ್ಲಿ ಕತ್ತಲು ಎಂಬುದೇ ಇಲ್ಲ. ಅವರ ಪುತ್ರನಿಂದಲೇ ನಾವು ಕೇಳಿದ ಈ ಸಂದೇಶವನ್ನು ನಿಮಗೆ ಸಾರುತ್ತಿದ್ದೇವೆ.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.


ನಿನ್ನಲ್ಲಿದೆ ಜೀವದ ಬುಗ್ಗೆ I ನಿನ್ನ ಬೆಳಕಿನಿಂದ ಬೆಳಕೆಮಗೆ II


ರಾಜರು ಕೇಳುತ್ತಿರುವ ಸಂಗತಿ ಅತಿಕಷ್ಟವಾದುದು. ನರಮಾನವರ ನಡುವೆ ವಾಸಮಾಡದ ದೇವರುಗಳೇ ಹೊರತು ಇನ್ನಾರೂ ರಾಜರ ಸಮ್ಮುಖದಲ್ಲಿ ಇದನ್ನು ತಿಳಿಸಲಾರರು,” ಎಂದು ಉತ್ತರಕೊಟ್ಟರು.


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಬನ್ನಿರಿ ಮುಂದಕ್ಕೆ ತಿಳಿಸಿ ಭವಿಷ್ಯತ್ತನು ನಮಗೆ. ವಿವರಿಸಿ ಗತಿಸಿದ ಘಟನೆಗಳು ಏನೇನೆಂದು; ಗ್ರಹಿಸುವೆವು ಅವುಗಳ ಪರಿಣಾಮವನ್ನು ಮನಸ್ಸಿಗೆ ತಂದು, ಇಲ್ಲವಾದರೆ ತಿಳಿಸಿ ನಮಗೆ ಸಂಭವಿಸಲಿರುವುದೇನೆಂದು.


ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I ಹರಡಿಸಿರುವೆ ಆಗಸವನು ಗುಡಾರದಂತೆ II


ಪಾತಾಳ ತೆರೆದಿದೆ ದೇವರ ದೃಷ್ಟಿಗೆ ಅಧೋಲೋಕ ಮರೆಯಾಗಿಲ್ಲ ಆತನಿಗೆ.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.


ಅವರೊಡನೆ ಸಾಮತಿ ರೂಪದಲ್ಲಿ ಮಾತನಾಡುವುದಕ್ಕೆ ಕಾರಣ ಇದು: ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ; ಗ್ರಹಿಸುವುದೂ ಇಲ್ಲ.


ದೇವರ ಆತ್ಮ ನಿನ್ನಲ್ಲಿ ನೆಲೆಸಿದೆಯೆಂದು ನಾನು ಕೇಳಿದ್ದೇನೆ. ನಿನಗೆ ಪರಮಜ್ಞಾನ, ವಿವೇಕ, ಬುದ್ಧಿ, ತೇಜಸ್ಸು ಇದೆಯೆಂದು ನನಗೆ ತಿಳಿದುಬಂದಿದೆ.


ಮುಂತಿಳಿಸಿದ ಸಂಗತಿಗಳಿದೋ ಈಡೇರಿವೆ ಹೊಸ ಸಂಗತಿಗಳನಿದೋ ಪ್ರಕಟಿಸುವೆ ಅವು ತಲೆದೋರುವುದಕ್ಕೆ ಮುಂಚೆಯೇ ನಿಮಗೆ ತಿಳಿಸುವೆ.”


ಈ ಘಟನೆಯನ್ನು ಅರುಹಿದವನಾರು ಅದು ನೆರವೇರುವ ಮುಂದೆ? ಇದನ್ನು ಮುನ್ನ ತಿಳಿಸಿದವನಾರು ನಮಗೆ ಗೊತ್ತಾಗುವಂತೆ? ತಿಳಿಸಿದ್ದರೆ ಹೇಳುತ್ತಿದ್ದೆವು ಅವನು ಸತ್ಯವಂತನೆಂದೆ. ಆದರೆ ಇದನ್ನು ತಿಳಿಸಿದವನಿಲ್ಲ ಮುನ್ನ ತಿಳಿಸಬಲ್ಲವನಾರೂ ಇಲ್ಲ ನಿಮ್ಮಿಂದ ಮಾತೊಂದನ್ನು ಕೇಳಿದವನಾರೂ ಇಲ್ಲ.


ಜೋಸೆಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು, ಫರೋಹ ಆದ ನಿಮಗೆ ತೃಪ್ತಿಕರವಾದ ಉತ್ತರಕೊಡಬಲ್ಲರು,” ಎಂದು ಹೇಳಿದ.


ಆ ರಾತ್ರಿಯೇ ಸ್ವಪ್ನದಲ್ಲಿ ಕನಸಿನ ಗುಟ್ಟು ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ಆತನು ಪರಲೋಕ ದೇವರನ್ನು ಹೀಗೆಂದು ಸ್ತುತಿಸಿದನು:


ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.


ಜ್ಞಾನಿಗೆ ಸಮಾನರು ಯಾರು? ಅವನಲ್ಲದೆ ಬಗೆಹರಿಸಬಲ್ಲವರು ಯಾರು? ಜ್ಞಾನವು ಮನುಷ್ಯನ ಮುಖವನ್ನು ವಿಕಾಸಗೊಳಿಸುತ್ತದೆ; ಗಂಟುಮೋರೆಯನ್ನು ಮಾರ್ಪಡಿಸುತ್ತದೆ.


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು