Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:26 - ಕನ್ನಡ ಸತ್ಯವೇದವು C.L. Bible (BSI)

26 ರಾಜನು ಬೇಲ್ತೆಶಚ್ಚರನೆಂದು ಹೆಸರು ಪಡೆದಿದ್ದ ದಾನಿಯೇಲನನ್ನು ನೋಡಿ, “ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ತಿಳಿಸಬಲ್ಲೆಯಾ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ರಾಜನು ಬೇಲ್ತೆಶಚ್ಚರನೆಂಬ ಅಡ್ಡ ಹೆಸರಿನ ದಾನಿಯೇಲನನ್ನು - ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅರಸನು ದಾನಿಯೇಲನಿಗೆ (ಬೇಲ್ತೆಶಚ್ಚರನಿಗೆ), “ನೀನು ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಬಲ್ಲೆಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:26
9 ತಿಳಿವುಗಳ ಹೋಲಿಕೆ  

ಕಂಚುಕಿಯರ ನಾಯಕನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ‘ಬೇಲ್ತೆಶಚ್ಚರ್’, ಹನನ್ಯನಿಗೆ ‘ಶದ್ರಕ್’, ಮಿಶಾಯೇಲನಿಗೆ ‘ಮೇಶಕ್’, ಹಾಗೂ ಅಜರ್ಯನಿಗೆ ‘ಅಬೇದ್‍ನೆಗೋ’, ಎಂಬ ಹೆಸರಿಟ್ಟನು.


ನೀನು ಗೂಡಾರ್ಥಗಳನ್ನು ವಿವರಿಸಬಲ್ಲವನೂ ಗುಂಜುಗಂಟುಗಳನ್ನು ಬಿಚ್ಚಬಲ್ಲವನೂ ಎಂಬ ಸಮಾಚಾರ ನನಗೆ ಮುಟ್ಟಿದೆ. ಈ ಬರಹವನ್ನು ಓದಿ, ಇದರ ಅಭಿಪ್ರಾಯವನ್ನು ನನಗೆ ತಿಳಿಸಿದೆಯಾದರೆ ನಿನಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಹೌದು, ‘ಬೇಲ್ತೆಶಚ್ಚರ’ನೆಂಬ ಹೆಸರನ್ನು ರಾಜನಿಂದ ಹೊಂದಿದ ಆ ದಾನಿಯೇಲನು ಪರಮ ಬುದ್ಧಿವಂತ, ಜ್ಞಾನಿ, ವಿವೇಕಿ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನ, ಒಗಟು ಬಿಡಿಸುವ ಚಮತ್ಕಾರ, ಗುಂಜುಗಂಟು ಬಿಚ್ಚುವ ಚಾತುರ್ಯ ಅವನಲ್ಲಿ ತೋರಿಬಂದವು. ಆದ್ದರಿಂದಲೇ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಯಿತು. ದಾನಿಯೇಲನನ್ನು ಈಗಲೇ ಕರೆಯಿಸಿರಿ. ಆತ ಬರಹದ ಅರ್ಥವನ್ನು ವಿವರಿಸುವನು,” ಎಂದಳು.


ನನ್ನ ದೇವರ ಹೆಸರು ಸೇರಿರುವ ‘ಬೇಲ್ತೆಶಚ್ಚರ’ ಎಂಬ ಅಡ್ಡಹೆಸರನ್ನು ಹೊಂದಿದ ದಾನಿಯೇಲನು ಕೊನೆಗೆ ನನ್ನ ಬಳಿಗೆ ಬಂದ. ಪರಿಶುದ್ಧ ದೇವರ ಆತ್ಮ ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.


ಅದಕ್ಕೆ ಸೌಲನು, “ಅವನೊಡನೆ ಕಾದಾಡಲು ನಿನ್ನಿಂದ ಆಗದು; ನೀನು ಇನ್ನೂ ಹುಡುಗ. ಅವನಾದರೋ ಚಿಕ್ಕಂದಿನಿಂದಲೆ ಯುದ್ಧವೀರ,” ಎಂದು ಹೇಳಿದನು.


ಫರೋಹನು ಅವನಿಗೆ, “ನಾನು ಒಂದು ಕನಸುಕಂಡೆ, ಅದರ ಅರ್ಥ ಹೇಳಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳಬಲ್ಲೆ ಎಂಬ ಸಮಾಚಾರ ಕೇಳಿದ್ದೇನೆ,” ಎಂದ.


ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಒಂದು ಕನಸು ಕಂಡನು. ಅವನ ಮನಸ್ಸಿಗೆ ಒಂದು ದೃಶ್ಯ ಕಾಣಿಸಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು