Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:27 - ಕನ್ನಡ ಸತ್ಯವೇದವು C.L. Bible (BSI)

27 ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ, “ರಾಜರು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ತಿಳಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ - ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ ಮಾಟಗಾರರಾಗಲಿ ಜೋಯಿಸರಾಗಲಿ ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದಾನಿಯೇಲನು, “ಅರಸನಾದ ನೆಬೂಕದ್ನೆಚ್ಚರನೇ, ಯಾವ ವಿದ್ವಾಂಸರಾಗಲಿ ಮಾಟಗಾರರಾಗಲಿ ಜೋಯಿಸರಾಗಲಿ ಶಕುನದವರಾಗಲಿ ಅರಸನಾದ ನಿನಗೆ ರಹಸ್ಯವನ್ನು ಹೇಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, “ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:27
12 ತಿಳಿವುಗಳ ಹೋಲಿಕೆ  

ಆಗ ಆ ರಾಜನು ತನ್ನ ಕನಸಿನ ಅರ್ಥ ತಿಳಿಸಬೇಕೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಿದನು. ಅವರು ಆಸ್ಥಾನಕ್ಕೆ ಬಂದು ರಾಜನ ಮುಂದೆ ನಿಂತುಕೊಂಡರು.


ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


ಅವರು, “ನಮಗೆ ಸ್ವಪ್ನಬಿತ್ತು; ಅದರ ಅರ್ಥ ಹೇಳುವವರು ಯಾರೂ ಇಲ್ಲ,” ಎಂದರು. ಜೋಸೆಫನು ಅವರಿಗೆ, “ಸ್ವಪ್ನಗಳ ಅರ್ಥ ದೇವರಿಂದ ದೊರಕಬಹುದಲ್ಲವೆ? ದಯವಿಟ್ಟು ನಿಮ್ಮ ಸ್ವಪ್ನಗಳನ್ನು ನನಗೆ ತಿಳಿಸಿ,” ಎಂದ.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.


ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರೆಲ್ಲರು ನನ್ನ ಸಮ್ಮುಖಕ್ಕೆ ಬಂದರು. ನಾನು ಕನಸನ್ನು ತಿಳಿಸಿದೆ. ಆದರೆ ಅದರ ಅರ್ಥವನ್ನು ಅವರಿಂದ ತಿಳಿಸಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು