Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:28 - ಕನ್ನಡ ಸತ್ಯವೇದವು C.L. Bible (BSI)

28 ಆದರೆ ರಹಸ್ಯಗಳನ್ನು ವ್ಯಕ್ತಪಡಿಸಬಲ್ಲವರು ಒಬ್ಬರಿದ್ದಾರೆ. ಅವರೇ ಪರಲೋಕದಲ್ಲಿರುವ ದೇವರು. ಬರಲಿರುವ ಕಾಲದಲ್ಲಿ ನಡೆಯತಕ್ಕದ್ದನ್ನು ರಾಜ ನೆಬೂಕದ್ನೆಚ್ಚರರಾದ ನಿಮಗೆ ಅವರೇ ತಿಳಿಯಪಡಿಸಿದ್ದಾರೆ. ನೀವು ಕಂಡ ಕನಸು, ಹಾಸಿಗೆಯ ಮೇಲೆ ಮಲಗಿದ್ದಾಗ ನಿಮ್ಮ ಮನಸ್ಸಿಗೆ ತೋಚಿದ ಸ್ವಪ್ನಗಳು ಹೀಗಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೆ ರಹಸ್ಯಗಳನ್ನು ವ್ಯಕ್ತಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಪರಲೋಕದಲ್ಲಿದ್ದಾನೆ; ಉತ್ತರಕಾಲದಲ್ಲಿ ನಡೆಯತಕ್ಕದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ಪರಲೋಕದಲ್ಲಿ ಯೆಹೋವನು ಎಂಬಾತನಿದ್ದಾನೆ. ಆತನು ರಹಸ್ಯಗಳನ್ನು ಹೇಳುತ್ತಾನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ಅರಸನಾದ ನಿನಗೆ ಯೆಹೋವನು ತಿಳಿಯಪಡಿಸಿದ್ದಾನೆ. ಇದೇ ನೀನು ಕಂಡ ಕನಸು, ನೀನು ಹಾಸಿಗೆಯ ಮೇಲೆ ಮಲಗಿದ್ದಾಗ ಕಂಡ ಸಂಗತಿಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:28
32 ತಿಳಿವುಗಳ ಹೋಲಿಕೆ  

ಅವರು, “ನಮಗೆ ಸ್ವಪ್ನಬಿತ್ತು; ಅದರ ಅರ್ಥ ಹೇಳುವವರು ಯಾರೂ ಇಲ್ಲ,” ಎಂದರು. ಜೋಸೆಫನು ಅವರಿಗೆ, “ಸ್ವಪ್ನಗಳ ಅರ್ಥ ದೇವರಿಂದ ದೊರಕಬಹುದಲ್ಲವೆ? ದಯವಿಟ್ಟು ನಿಮ್ಮ ಸ್ವಪ್ನಗಳನ್ನು ನನಗೆ ತಿಳಿಸಿ,” ಎಂದ.


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.


ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


ಯಕೋಬನು ತನ್ನ ಮಕ್ಕಳನ್ನು ಕರೆಯಿಸಿ ಇಂತೆಂದನು: ಕೂಡಿಬನ್ನಿ ನೀವೆಲ್ಲರು, ನುಡಿವೆನು ನಿಮಗೆ ಮುಂದೆ ಸಂಭವಿಸುವುದನ್ನು;


ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


ಜೋಸೆಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು, ಫರೋಹ ಆದ ನಿಮಗೆ ತೃಪ್ತಿಕರವಾದ ಉತ್ತರಕೊಡಬಲ್ಲರು,” ಎಂದು ಹೇಳಿದ.


ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.


ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಹೀಗಿರುವಲ್ಲಿ ಭಯಂಕರವಾದ ಕನಸೊಂದನ್ನು ಕಂಡೆ. ನಿದ್ರೆಯಲ್ಲಿ ನನಗೆ ತೋಚಿದ ಆಲೋಚನೆಗಳು ಹಾಗು ಮನಸ್ಸಿಗೆ ಬಿದ್ದ ಸ್ವಪ್ನಗಳು ನನ್ನನ್ನು ಕಳವಳಕ್ಕೆ ಈಡುಮಾಡಿದವು.


“ನಾವು ಬಾಬಿಲೋನಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರುವಂತೆ ಬೇಡಿಕೊಳ್ಳೋಣ,” ಎಂದು ಹೇಳಿದನು.


ಪರದಲ್ಲಿಹನು ನಮ್ಮ ದೇವನು I ಗೈವನು ತನಗಿಷ್ಟ ಬಂದುದನು II


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


ಆತನ ಮನದಾಲೋಚನೆಗಳನ್ನು ನಡೆಸಿ ನೆರವೇರಿಸುವ ತನಕ ಹಿಂದಿರುಗದು ಆತನ ರೋಷವೆಂಬಾ ಬಿರುಗಾಳಿ, ಇದನ್ನು ನೀವು ಗ್ರಹಿಸುವಿರಿ ಕಟ್ಟಕಡೆಯ ದಿನಗಳಲ್ಲಿ.


“ಆದಕಾರಣ ನೀನು ಈ ಗೀತೆಯನ್ನು ಬರೆದು ಇಸ್ರಯೇಲರಿಗೆ ಕಲಿಸಿಕೊಡು; ಈ ಗೀತೆ ಇಸ್ರಯೇಲರಿಗೆ ವಿರೋಧವಾದ, ನನಗೆ ಪರವಾದ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠ ಮಾಡಿಸು.


ಮೇಲೆ ಹೇಳಿದ ಎಲ್ಲ ಕಷ್ಟಸಂಕಟಗಳು ನಿಮಗೆ ಸಂಭವಿಸಿ, ಕೊನೆಗೆ ನೀವು ಅವರಿಗೆ ಅಭಿಮುಖರಾಗಿ ಅವನ ಮಾತಿಗೆ ಕಿವಿಗೊಡುವಿರಿ.


ಅಂತಿಮ ದಿನಗಳು ಕಷ್ಟಕರವಾದ ಕಾಲವಾಗಿರುತ್ತದೆಂಬುದನ್ನು ಜ್ಞಾಪಕದಲ್ಲಿಡು.


ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.


ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.


ಆಗಲಿ, ನಾನು ನನ್ನ ಸ್ವಜನರ ಬಳಿಗೆ ತೆರಳುತ್ತೇನೆ. ಆದರೆ ಈ ಜನರು ನಿನ್ನ ಜನರಿಗೆ ಕೊನೆಗೆ ಏನು ಮಾಡುವರೋ ಅದನ್ನು ತಿಳಿಸುತ್ತೇನೆ ಕೇಳು,” ಎಂದು ಹೇಳಿ


ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.


ಜೋಸೆಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳ ವಿಷಯ ಒಂದೇ. ದೇವರು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾರೆ.


ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.


ನೀನು ದಾನಿಯೇಲನಿಗಿಂತಲೂ ಬುದ್ಧಿವಂತನೋ? ಹಾಗಾದರೆ ನಿನಗೆ ಮರೆಯಾದ ರಹಸ್ಯ ಯಾವುದೂ ಇಲ್ಲ!


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಬೆಟ್ಟದಿಂದ ಒಂದು ಗುಂಡುಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಕಬ್ಬಿಣ-ಕಂಚು-ಮಣ್ಣು-ಬೆಳ್ಳಿ-ಬಂಗಾರ ಇವುಗಳನ್ನು ಚೂರುಚೂರು ಮಾಡಿದ್ದನ್ನು ನೀವು ನೋಡಿದಿರಿ. ಇದರಿಂದ ಪರಲೋಕ ದೇವರು ಮುಂದೆ ನಡೆಯಲಿರುವ ವಿಷಯಗಳನ್ನು ರಾಜರಾದ ತಮಗೆ ತಿಳಿಯಪಡಿಸಿದ್ದಾರೆ. ಆ ಕನಸು ನಿಜವಾದುದು. ಅದರ ಅರ್ಥವೂ ನಂಬತಕ್ಕದ್ದು,” ಎಂದು ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು