Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:29 - ಕನ್ನಡ ಸತ್ಯವೇದವು C.L. Bible (BSI)

29 “ರಾಜರೇ, ನೀವು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನು ಸಂಭವಿಸುವುದೋ ಎಂಬ ಯೋಚನೆ ನಿಮ್ಮಲ್ಲಿ ಹುಟ್ಟಿತ್ತು. ಗುಟ್ಟುಗಳನ್ನು ಬಟ್ಟಬಯಲಾಗಿಸುವಾತ ಮುಂದೆ ಸಂಭವಿಸುವುದನ್ನು ನಿಮಗೆ ಗೋಚರಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದಾಗುವದನ್ನು ನಿನಗೆ ಗೋಚರಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅರಸನೇ, ನೀನು ನಿನ್ನ ಹಾಸಿಗೆಯ ಮೇಲೆ ಮಲಗಿಕೊಂಡಿದ್ದೆ. ಭವಿಷ್ಯದಲ್ಲಿ ಸಂಭವಿಸುವುದರ ಬಗ್ಗೆ ಆಲೋಚಿಸತೊಡಗಿದ್ದೆ. ದೇವರು ಜನರಿಗೆ ರಹಸ್ಯವನ್ನು ತಿಳಿಸಬಲ್ಲನು. ಭವಿಷ್ಯದಲ್ಲಿ ನಡೆಯಲಿರುವುದನ್ನು ಆತನೇ ನಿನಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ, ಇನ್ನು ಮುಂದೆ ಏನು ಸಂಭವಿಸುವುದೋ, ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತ್ತು. ಆ ರಹಸ್ಯಗಳನ್ನು ವ್ಯಕ್ತಪಡಿಸುವವರು, ಮುಂದೆ ಸಂಭವಿಸುವುದು ಏನೆಂಬುದನ್ನು ನಿನಗೆ ಗೋಚರಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:29
8 ತಿಳಿವುಗಳ ಹೋಲಿಕೆ  

ಆದರೆ ರಹಸ್ಯಗಳನ್ನು ವ್ಯಕ್ತಪಡಿಸಬಲ್ಲವರು ಒಬ್ಬರಿದ್ದಾರೆ. ಅವರೇ ಪರಲೋಕದಲ್ಲಿರುವ ದೇವರು. ಬರಲಿರುವ ಕಾಲದಲ್ಲಿ ನಡೆಯತಕ್ಕದ್ದನ್ನು ರಾಜ ನೆಬೂಕದ್ನೆಚ್ಚರರಾದ ನಿಮಗೆ ಅವರೇ ತಿಳಿಯಪಡಿಸಿದ್ದಾರೆ. ನೀವು ಕಂಡ ಕನಸು, ಹಾಸಿಗೆಯ ಮೇಲೆ ಮಲಗಿದ್ದಾಗ ನಿಮ್ಮ ಮನಸ್ಸಿಗೆ ತೋಚಿದ ಸ್ವಪ್ನಗಳು ಹೀಗಿವೆ:


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:


ಜೋಸೆಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳ ವಿಷಯ ಒಂದೇ. ದೇವರು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾರೆ.


ನನ್ನ ಪಿತೃಗಳ ದೇವಾ, ಮಾಡುವೆ ನಿನ್ನ ಗುಣಗಾನ, ನಿನಗೆ ನನ್ನ ಧನ್ಯವಾದ. ಏಕೆಂದರೆ ನೀನೇ ನನಗೆ ಜ್ಞಾನಶಕ್ತಿಗಳನ್ನು ದಯಪಾಲಿಸಿದಾತ. ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಾತ ನೀನೇ ಹೌದು, ರಾಜ ಬಯಸಿದ ಗುಟ್ಟನ್ನು ನಮಗೆ ವ್ಯಕ್ತಪಡಿಸಿದಾತ ನೀನೇ.


ಬೆಟ್ಟದಿಂದ ಒಂದು ಗುಂಡುಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಕಬ್ಬಿಣ-ಕಂಚು-ಮಣ್ಣು-ಬೆಳ್ಳಿ-ಬಂಗಾರ ಇವುಗಳನ್ನು ಚೂರುಚೂರು ಮಾಡಿದ್ದನ್ನು ನೀವು ನೋಡಿದಿರಿ. ಇದರಿಂದ ಪರಲೋಕ ದೇವರು ಮುಂದೆ ನಡೆಯಲಿರುವ ವಿಷಯಗಳನ್ನು ರಾಜರಾದ ತಮಗೆ ತಿಳಿಯಪಡಿಸಿದ್ದಾರೆ. ಆ ಕನಸು ನಿಜವಾದುದು. ಅದರ ಅರ್ಥವೂ ನಂಬತಕ್ಕದ್ದು,” ಎಂದು ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು