Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:31 - ಕನ್ನಡ ಸತ್ಯವೇದವು C.L. Bible (BSI)

31 “ರಾಜರೇ ಕೇಳಿ, ತಾವು ಕಂಡದ್ದು ಒಂದು ಅದ್ಭುತ ಪ್ರತಿಮೆ. ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆ ನಿಮ್ಮೆದುರಿಗೆ ನಿಂತಿತ್ತು. ಭಯಂಕರವಾಗಿ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ರಾಜನೇ, ನೀನು ಕಂಡದು ಆಹಾ, ಅದ್ಭುತ ಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಅರಸನೇ, ನಿನ್ನ ಕನಸಿನಲ್ಲಿ ನಿನ್ನ ಎದುರಿಗೆ ಒಂದು ದೊಡ್ಡ ಪ್ರತಿಮೆಯನ್ನು ಕಂಡೆ. ಅದು ಬಹಳ ದೊಡ್ಡದಾಗಿಯೂ ಪ್ರಕಾಶಮಾನವಾಗಿಯೂ ಪ್ರಭಾವಶಾಲಿಯಾಗಿಯೂ ಇತ್ತು. ನೋಡಿದವರು ಆಶ್ಚರ್ಯಚಕಿತರಾಗಿ ಕಣ್ಣರಳಿಸುವಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ರಾಜನೇ, ನೀನು ನೋಡಲಾಗಿ, ಇಗೋ ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನವಾದ ಆ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು. ಅದರ ಆಕಾರವು ಭಯಂಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:31
11 ತಿಳಿವುಗಳ ಹೋಲಿಕೆ  

ಅವರು ಕ್ರೂರಿಗಳು, ಭಯಂಕರರು. ತಮ್ಮದೇ ಆದ ನ್ಯಾಯನೀತಿಯನ್ನು ರೂಪಿಸಿಕೊಳ್ಳುವಂಥವರು; ತಮ್ಮನ್ನು ತಾವೇ ಗೌರವಿಸಿಕೊಳ್ಳುವ ಅಹಂಭಾವಿಗಳು.


‘ಆದುದರಿಂದ ನಾನು ಅತಿಭಯಂಕರ ಜನಾಂಗದವರಾದ ಮ್ಲೇಚ್ಛರನ್ನು ನಿನ್ನ ಮೇಲೆ ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿ ಹಿರಿದು, ನಿನ್ನ ಹೊಳಪನ್ನು ಹೊಲಸುಮಾಡುವರು.


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.


ಬಳಿಕ ಪಿಶಾಚಿ ಯೇಸುವನ್ನು ಎತ್ತರಕ್ಕೆ ಕರೆದೊಯ್ದು ಪ್ರಪಂಚದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ತೋರಿಸಿ,


ಅನಂತರ ಪಿಶಾಚಿ ಯೇಸುವನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದು, ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ತೋರಿಸಿತು.


ರಾಜ ನೆಬೂಕದ್ನೆಚ್ಚರನು 27 ಮೀಟರ್ ಎತ್ತರದ 3 ಮೀಟರ್ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬಿಲೋನ್ ಸಂಸ್ಥಾನದ ‘ದೂರಾ’ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ಅದೇ ಸಮಯದಲ್ಲಿ ನನ್ನ ಬುದ್ಧಿ ನನಗೆ ಮತ್ತೆ ಸ್ವಾಧೀನವಾಯಿತು. ಘನತೆ ಗೌರವಗಳು ನನಗೆ ಮತ್ತೆ ಲಭಿಸಿದವು. ನನ್ನ ರಾಜ್ಯದ ಕೀರ್ತಿ ಬೆಳಗತೊಡಗಿತು. ನನ್ನ ಮಂತ್ರಿಗಳೂ ಪದಾಧಿಕಾರಿಗಳೂ ನನ್ನನ್ನು ಸ್ವಾಗತಿಸಲು ಬಂದರು. ರಾಜ್ಯದಲ್ಲಿ ನಾನು ನೆಲೆಗೊಂಡೆ. ಹಿಂದೆ ಇದ್ದುದಕ್ಕಿಂತಲೂ ಹೆಚ್ಚಿನ ಪ್ರತಿಭೆ ನನ್ನದಾಯಿತು.


“ಅರಸರೇ, ಇದೇ ನೀವು ಕಂಡ ಕನಸು. ಇದರ ಅರ್ಥವನ್ನೂ ತಮ್ಮ ಸನ್ನಿಧಿಯಲ್ಲಿ ಅರಿಕೆಮಾಡುತ್ತೇವೆ.


ನೀವು ರಾಜಾಧಿರಾಜರು, ಪರಲೋಕ ದೇವರು ನಿಮಗೆ ರಾಜ್ಯಬಲ, ಪರಾಕ್ರಮ ಹಾಗು ವೈಭವಗಳನ್ನು ದಯಪಾಲಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು