Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:6 - ಕನ್ನಡ ಸತ್ಯವೇದವು C.L. Bible (BSI)

6 ನೀವು ಆ ಕನಸನ್ನೂ ಅದರ ಉದ್ದೇಶವನ್ನೂ ತಿಳಿಸಿದ್ದೇ ಆದರೆ ನನ್ನಿಂದ ನಿಮಗೆ ದಾನ ಬಹುಮಾನಗಳೂ ವಿಶೇಷ ಸನ್ಮಾನಗಳೂ ದೊರಕುವುವು. ಆದಕಾರಣ ಆ ಕನಸನ್ನೂ ಅದರ ಉದ್ದೇಶವನ್ನೂ ನನಗೆ ತಿಳಿಸಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಆ ಕನಸನ್ನೂ ಅದರ ಅಭಿಪ್ರಾಯವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನಬಹುಮಾನಗಳೂ ವಿಶೇಷಸನ್ಮಾನಗಳೂ ಲಭಿಸುವವು; ಆದಕಾರಣ ಆ ಕನಸನ್ನೂ ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಲು ಪಂಡಿತರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಿದರೆ ಕಾಣಿಕೆಗಳನ್ನೂ ಬಹುಮಾನಗಳನ್ನೂ ಕೊಡುತ್ತೇನೆ ಮತ್ತು ಮಹಾಸನ್ಮಾನವನ್ನು ಮಾಡುತ್ತೇನೆ. ಆದ್ದರಿಂದ ನೀವು ನನಗೆ ಕನಸನ್ನೂ ಅದರ ಅರ್ಥವನ್ನೂ ಹೇಳಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:6
8 ತಿಳಿವುಗಳ ಹೋಲಿಕೆ  

ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಬಳಿಕ ರಾಜನು ದಾನಿಯೇಲನನ್ನು ದೊಡ್ಡ ಪದವಿಗೆ ಏರಿಸಿದನು. ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟನು. ಬಾಬಿಲೋನಿನ ಸಂಸ್ಥಾನವನ್ನೆಲ್ಲ ಅವನಿಗೆ ಅಧೀನಪಡಿಸಿ ಬಾಬಿಲೋನಿನ ಎಲ್ಲಾ ವಿದ್ವಾಂಸರಿಗೂ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಿದನು.


ತಕ್ಷಣವೇ ಬೇಲ್ಶಚ್ಚರನ ಆಜ್ಞೆಯ ಮೇರೆಗೆ ದಾನಿಯೇಲನಿಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿದರು. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿದರು. ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನಾದನು ಎಂದು ಪ್ರಕಟಿಸಿದರು.


ಆದುದರಿಂದ ನಿನ್ನ ಊರಿಗೆ ತೆರಳು. ನಿನ್ನನ್ನು ಬಹಳವಾಗಿಸನ್ಮಾನಿಸಬೇಕೆಂದಿದ್ದೆ. ಆದರೆ ನಿನಗೆ ಸನ್ಮಾನ ಕೂಡದೆಂದು ಸರ್ವೇಶ್ವರ ಆಜ್ಞೆಮಾಡಿದ್ದಾನೆ,” ಎಂದನು.


ಅಲ್ಲಿ ಬಿಳಾಮನನ್ನು ಕಂಡು, “ತಮ್ಮನ್ನು ತುರ್ತಾಗಿ ಕರೆದುತರಲು ನಾನು ದೂತರನ್ನು ಕಳಿಸಿದೆನಲ್ಲವೆ? ತಾವೇಕೆ ಆಗಲೇ ಬರಲಿಲ್ಲ? ತಮಗೆ ಯೋಗ್ಯವಾದ ಸತ್ಕಾರ್ಯ ನೀಡಲು ನಾನು ಅಸಮರ್ಥನೇ?” ಎಂದನು.


ನಾನು ತಮ್ಮನ್ನು ಬಹಳವಾಗಿ ಸನ್ಮಾನಿಸುವೆನು; ತಾವು ಏನು ಹೇಳಿದರೂ ಅದರಂತೆಯೇ ಮಾಡುವೆನು; ತಾವು ಅಗತ್ಯವಾಗಿ ಬಂದು ಈ ಜನಾಂಗದವರನ್ನು ಶಪಿಸಿ ನನಗೆ ನೆರವಾಗಬೇಕು’ ಎಂದು ಹೇಳಿಕಳಿಸಿದ್ದಾರೆ,” ಎಂದರು.


ಮೋವಾಬ್ಯರ ಹಾಗೂ ಮಿದ್ಯಾನ್ಯರ ಮುಖ್ಯಸ್ಥರು ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಯನ್ನು ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದರು. ಬಾಲಾಕನು ಹೇಳಿಕಳಿಸಿದ್ದ ಮಾತುಗಳನ್ನು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು