Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:25 - ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಅವರು, “ಆದರೆ, ಇಗೋ ಕಟ್ಟಿಲ್ಲದ ನಾಲ್ವರನ್ನು ನಾನು ನೋಡುತ್ತಿದ್ದೇನೆ. ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ; ಅವರಿಗೆ ಯಾವ ಹಾನಿಯೂ ಆಗುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದಕ್ಕೆ ಅವನು - ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಅರಸನು, “ನೋಡಿರಿ, ನಾಲ್ಕು ಜನರು ಬೆಂಕಿಯಲ್ಲಿ ತಿರುಗಾಡುತ್ತಿರುವುದು ನನಗೆ ಕಾಣುತ್ತಿದೆ. ಅವರು ಕಟ್ಟಲ್ಪಟ್ಟಿಲ್ಲ. ಅವರನ್ನು ಬೆಂಕಿಯು ಸುಟ್ಟಿಲ್ಲ. ನಾಲ್ಕನೆಯವನು ದೇವಕುಮಾರನಂತೆ ಕಾಣುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅರಸನು ಅವರಿಗೆ ಉತ್ತರವಾಗಿ, “ಇಗೋ, ಕಟ್ಟಿಲ್ಲದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿರುವುದನ್ನು ನೋಡುತ್ತೇನೆ. ಅವರಿಗೆ ಯಾವ ಹಾನಿಯೂ ಇಲ್ಲ. ಅಲ್ಲದೆ ನಾಲ್ಕನೆಯವರ ರೂಪವು ದೇವಪುತ್ರನ ಹಾಗಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:25
20 ತಿಳಿವುಗಳ ಹೋಲಿಕೆ  

ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಆದರೆ ಪೌಲನು ಹಾವನ್ನು ಬೆಂಕಿಗೆ ಒದರಿಬಿಟ್ಟನು. ಅವನಿಗೆ ಯಾವ ಅಪಾಯವೂ ಆಗಲಿಲ್ಲ.


ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು.


ಒಮ್ಮೆ ಸ್ವರ್ಗನಿವಾಸಿಗಳು ಸರ್ವೇಶ್ವರಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನೂ ಅಲ್ಲಿಗೆ ಬಂದನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!


ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I ಕಾಯುವನು ಪ್ರಭುವಿನ ದೂತನೆ ಬಂದಿಳಿದು II


ನೀವು ಒಳ್ಳೆಯದನ್ನು ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಬಗೆಯುವವರು ಯಾರು?


ಒಂದು ವೇಳೆ ಬಿಡಿಸದಿದ್ದರೂ ರಾಜರೇ, ಇದು ನಿಮಗೆ ತಿಳಿದಿರಲಿ: ನಾವು ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ. ನೀವು ಸ್ಥಾಪಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಉತ್ತರಕೊಟ್ಟರು.


ಭೂಮಿಗೆ ಮೂಲೆಗಲ್ಲನು ಹಾಕಿದವನಾರು? ಅದರ ಅಡಿಗಲ್ಲು ಯಾವುದರ ಮೇಲೆ ನಿಂತಿದೆ?”


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?


ಅವರಿಗೆ ಅಂಜಬೇಡ; ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗೆ ಇರುತ್ತೇನೆ; ಇದು ಸರ್ವೇಶ್ವರನಾದ ನನ್ನ ಮಾತು,” ಎಂದು ಹೇಳಿದರು.


ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ".


ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಕ್ರೂರಿಗಳ ಕೈಯಿಂದ ರಕ್ಷಿಸುವೆನು.”


ಇತ್ತ ರಾಜ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳನ್ನು ಕರೆಸಿ, “ನಾವು ಮೂವರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿಸಿದೆವಲ್ಲವೆ?” ಎಂದು ಕೇಳಿದನು. ಅವರು ರಾಜನಿಗೆ, “ಹೌದು ಪ್ರಭೂ, ಅದು ಸತ್ಯ,” ಎಂದು ಉತ್ತರಕೊಟ್ಟರು.


ರಾಜನು ಇದನ್ನು ಕೇಳಿ ಬಹಳ ಸಂತೋಷಪಟ್ಟನು. ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಿದನು. ಅಂತೆಯೇ ಅವನನ್ನು ಮೇಲಕ್ಕೆತ್ತಲಾಯಿತು. ಆತನು ತನ್ನ ದೇವರಲ್ಲಿ ದೃಢವಾದ ವಿಶ್ವಾಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ಐದಾರು ಇಕ್ಕಟ್ಟುಗಳಿಂದ ನಿನ್ನನು ಬಿಡಿಸುವನು ಏಳನೆಯದು ಬಂದರೂ ನಿನ್ನನು ಕೇಡು ಮುಟ್ಟದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು