ದಾನಿಯೇಲ 3:6 - ಕನ್ನಡ ಸತ್ಯವೇದವು C.L. Bible (BSI)6 ಯಾರು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವರನ್ನು ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು,” ಎಂದು ಸಾರಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾವನು ಅಡ್ಡಬಿದ್ದು ಪೂಜಿಸುವದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವನು ಎಂದು ಸಾರಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯಾರಾದರೂ ಈ ಬಂಗಾರದ ವಿಗ್ರಹಕ್ಕೆ ಅಡ್ಡಬೀಳದಿದ್ದರೆ ಮತ್ತು ಪೂಜಿಸದಿದ್ದರೆ ತಕ್ಷಣ ಅವರನ್ನು ಬೆಂಕಿಯ ಕೊಂಡಕ್ಕೆ ಎಸೆಯಲಾಗುವುದು” ಎಂದು ಸಾರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ,” ಎಂದನು. ಅಧ್ಯಾಯವನ್ನು ನೋಡಿ |
ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ಪ್ರಾಂತ್ಯಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರು ಇವರೆಲ್ಲರ ಅಭಿಪ್ರಾಯದ ಪ್ರಕಾರ ತಾವು ಒಂದು ಶಾಸನವನ್ನು ಹೊರಡಿಸಬೇಕು. ಯಾವನೂ ಮೂವತ್ತು ದಿನಗಳ ತನಕ ರಾಜರಾದ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಬಾರದು; ಮಾಡಿದರೆ ಸಿಂಹಗಳ ಗವಿಗೆ ಹಾಕಲಾಗುವುದು ಎಂದು ರಾಜಾಜ್ಞಾರೂಪವಾಗಿ ನಿಷೇಧಿಸುವುದು ಒಳ್ಳೆಯದು.