Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:7 - ಕನ್ನಡ ಸತ್ಯವೇದವು C.L. Bible (BSI)

7 ಅಂತೆಯೇ ಸಮಸ್ತ ಜನಾಂಗ-ಕುಲ-ಭಾಷೆಗಳವರು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರು ಅದೇ ಸಮಯದಲ್ಲಿ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಆ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ ಕುಲಭಾಷೆಗಳವರು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅವರು ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಿದರು. ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹವನ್ನು ಎಲ್ಲ ಜನಾಂಗಗಳ, ಭಾಷೆಗಳ ಜನರು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಜನರೆಲ್ಲರು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ಶಬ್ದವನ್ನು ಕೇಳಿದ ಕೂಡಲೇ, ಎಲ್ಲಾ ಪ್ರಜೆಗಳು ಜನಾಂಗಗಳು ವಿವಿಧ ಭಾಷೆಯವರು ಅಡ್ಡಬಿದ್ದು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:7
15 ತಿಳಿವುಗಳ ಹೋಲಿಕೆ  

ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಮೊದಲನೆಯ ಮೃಗದ ಎದುರಿನಲ್ಲಿ ಪವಾಡಗಳನ್ನೆಸಗುವ ಅನುಮತಿ ಇದ್ದುದರಿಂದ ಅದು ಭೂನಿವಾಸಿಗಳನ್ನು ಮರುಳುಗೊಳಿಸಿತು. ಖಡ್ಗದಿಂದ ಗಾಯಗೊಂಡಿದ್ದರೂ ಸಾಯದೆ ಬದುಕಿದ್ದ ಮೃಗದ ಗೌರವಾರ್ಥ ಒಂದು ವಿಗ್ರಹವನ್ನು ನಿರ್ಮಿಸಬೇಕೆಂದು ಭೂನಿವಾಸಿಗಳಿಗೆ ಅದು ವಿಧಿಸಿತು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಅದರ ತಲೆಗಳಲ್ಲಿ ಒಂದು ತಲೆ ಗಾಯಗೊಂಡು ಅದು ಸಾಯುವ ಸ್ಥಿತಿಯಲ್ಲಿತ್ತು. ಆದರೆ ಮಾರಕವಾದ ಆ ಗಾಯವು ಗುಣವಾಯಿತು. ಇದನ್ನು ಕಂಡ ಭೂಲೋಕದವರೆಲ್ಲರೂ ವಿಸ್ಮಯಗೊಂಡು ಆ ಮೃಗವನ್ನು ಹಿಂಬಾಲಿಸಿದರು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.


ಬಾಬಿಲೋನ್ ನನ್ನ ಕೈಯಲ್ಲಿರುವ ಹೊನ್ನಿನ ಪಾನಪಾತ್ರೆ. ಲೋಕದವರೆಲ್ಲರು ಅದರಿಂದ ಕುಡಿದು ಮತ್ತರಾದರು. ರಾಷ್ಟ್ರಗಳು ಅದರಿಂದ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಹಿಂದಿನ ಕಾಲದಲ್ಲಿ ಸಮಸ್ತ ಜನಾಂಗಗಳು ತಮಗೆ ಇಷ್ಟಬಂದಂತೆ ನಡೆಯಲೆಂದು ದೇವರು ಬಿಟ್ಟುಬಿಟ್ಟರು.


ಇದನ್ನು ಆಲಿಸಿದ ರಾಜ ನೆಬೂಕದ್ನೆಚ್ಚರನು ಎದ್ದು ಅಡ್ಡಬಿದ್ದನು. ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ, ಧೂಪಾರತಿ ಎತ್ತಬೇಕೆಂದು ಆಜ್ಞಾಪಿಸಿದನು.


ಆಗ, ಸಾರುವವರು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ-ಕುಲ-ಭಾಷೆಗಳವರೇ, ನಿಮಗೆ ಹೀಗೆಂದು ರಾಜಾಜ್ಞೆಯಾಗಿದೆ:


ನೀವು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರರು ನಿಲ್ಲಿಸಿರುವ ಈ ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕು.


ಯಾರು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವರನ್ನು ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು,” ಎಂದು ಸಾರಿದನು.


ಆಗ ಕೆಲವು ಮಂದಿ ಬಾಬಿಲೋನಿಯರು ಯೆಹೂದ್ಯರ ಮೇಲೆ ದೂರು ಹೊರಿಸಲು ರಾಜ ನೆಬೂಕದ್ನೆಚ್ಚರನ ಬಳಿಗೆ ಬಂದರು.


ಪ್ರಭುವೇ, ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು