Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:8 - ಕನ್ನಡ ಸತ್ಯವೇದವು C.L. Bible (BSI)

8 ಆಗ ಕೆಲವು ಮಂದಿ ಬಾಬಿಲೋನಿಯರು ಯೆಹೂದ್ಯರ ಮೇಲೆ ದೂರು ಹೊರಿಸಲು ರಾಜ ನೆಬೂಕದ್ನೆಚ್ಚರನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರುಹೊರಿಸುವದಕ್ಕೆ ಸನ್ನಿಧಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಕೆಲವು ಜನ ಕಲ್ದೀಯರು ಅರಸನ ಬಳಿಗೆ ಬಂದು ಅವರು ಯೆಹೂದ್ಯರ ವಿರುದ್ಧ ಮಾತನಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಸಮಯದಲ್ಲಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸಲು ಅರಸನ ಸನ್ನಿಧಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:8
14 ತಿಳಿವುಗಳ ಹೋಲಿಕೆ  

ಆದರೆ ನೀನು ಅನುಸರಿಸುವ ಪಂಥದ ವಿರುದ್ಧ ಎಲ್ಲೆಲ್ಲೂ ಜನರು ಮಾತನಾಡುತ್ತಿದ್ದಾರೆಂದು ಬಲ್ಲೆವು. ಆದುದರಿಂದ ನಿನ್ನ ಅಭಿಪ್ರಾಯವನ್ನು ನಿನ್ನ ಬಾಯಿಂದಲೇ ಕೇಳಬಯಸುತ್ತೇವೆ,” ಎಂದರು.


ಆಗ ಆ ಪಂಡಿತರು ಸನ್ನಿಧಿಯ ಮುಂದೆ, “ರಾಜರು ಕೇಳುವ ಸಂಗತಿಯನ್ನು ತಿಳಿಸಬಲ್ಲವನು ಈ ಲೋಕದಲ್ಲಿ ಯಾವನೂ ಇಲ್ಲ. ಎಷ್ಟೆಷ್ಟೋ ಬಲಿಷ್ಠರಾದ , ಪ್ರಬಲರಾದ ಯಾವ ಅರಸರೂ ಜೋಯಿಸನನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.


ಅವನು ಮೊರ್ದೆಕೈ ಒಬ್ಬನ ಮೇಲೆ ಕೈಮಾಡುವುದು ಸಾಲದೆಂದೆಣಿಸಿ ಇವನು ಯೆಹೂದ್ಯ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಇವನ ಬಂಧುಬಳಗದವರನ್ನೆಲ್ಲಾ, ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಲು ತೀರ್ಮಾನಿಸಿದನು.


ಅವರು ಅಂಗದೋಷವಿಲ್ಲದವರಾಗಿರಬೇಕು. ಸುಂದರರು, ಸಮಸ್ತ ಶಾಸ್ತ್ರಜ್ಞರು, ಪಂಡಿತರು, ವಿದ್ಯಾನಿಪುಣರು, ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆಗಿರಬೇಕು. ಅವರಿಗೆ ಬಾಬಿಲೋನ್ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕು,” ಎಂದು ಅಪ್ಪಣೆಕೊಟ್ಟನು.


ಆಗ ಆ ರಾಜನು ತನ್ನ ಕನಸಿನ ಅರ್ಥ ತಿಳಿಸಬೇಕೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಿದನು. ಅವರು ಆಸ್ಥಾನಕ್ಕೆ ಬಂದು ರಾಜನ ಮುಂದೆ ನಿಂತುಕೊಂಡರು.


ಅಂತೆಯೇ ಸಮಸ್ತ ಜನಾಂಗ-ಕುಲ-ಭಾಷೆಗಳವರು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರು ಅದೇ ಸಮಯದಲ್ಲಿ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಆ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.


ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರೆಲ್ಲರು ನನ್ನ ಸಮ್ಮುಖಕ್ಕೆ ಬಂದರು. ನಾನು ಕನಸನ್ನು ತಿಳಿಸಿದೆ. ಆದರೆ ಅದರ ಅರ್ಥವನ್ನು ಅವರಿಂದ ತಿಳಿಸಲಾಗಲಿಲ್ಲ.


ಹೀಗಿರಲು ಮುಖ್ಯಾಧಿಕಾರಿಗಳು ಮತ್ತು ಪ್ರಾಂತ್ಯಾಧಿಪತಿಗಳು ರಾಜ್ಯಾಡಳಿತದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವೂ ದೊರಕಲಿಲ್ಲ. ಅವನಲ್ಲಿ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ಅಷ್ಟು ನಂಬಿಕಸ್ತನಾಗಿದ್ದನು! ಅವನಲ್ಲಿ ಯಾವ ಅಕ್ರಮವಾಗಲಿ, ಆಲಸ್ಯವಾಗಲಿ ಕಾಣಸಿಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು