Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:13 - ಕನ್ನಡ ಸತ್ಯವೇದವು C.L. Bible (BSI)

13 ‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ, ಇಗೋ, ಕಾವಲುಗಾರನಾದ ದೇವದೂತನೊಬ್ಬನು ಆಕಾಶದಿಂದ ಇಳಿದು, ಗಟ್ಟಿಯಾಗಿ ಕೂಗಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ಅನಿವಿುಷನಾದ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡು ನನ್ನ ದರ್ಶನದಲ್ಲಿ ಅದೆಲ್ಲವನ್ನು ನೋಡುತ್ತಿದ್ದೆ. ಆಗ ಪವಿತ್ರ ದೇವದೂತನೊಬ್ಬನು ಆಕಾಶದಿಂದ ಕೆಳಗಿಳಿದು ಬರುವುದನ್ನು ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ದರ್ಶನಗಳನ್ನು ನಾನು ನೋಡಲಾಗಿ, ಒಬ್ಬ ದೂತನಾದ ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:13
18 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.


ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.


ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಒಂದು ಕನಸು ಕಂಡನು. ಅವನ ಮನಸ್ಸಿಗೆ ಒಂದು ದೃಶ್ಯ ಕಾಣಿಸಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದಿಟ್ಟನು.


ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.


ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.


ಕಾವಲುಗಾರನಾದ ದೂತನು ಆಕಾಶದಿಂದ ಇಳಿದುಬಂದು: ‘ಈ ಮರವನ್ನು ಕಡಿದು ಹಾಳುಮಾಡಿ. ಅದರ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಹಿತ್ತಾಳೆ ಕಬ್ಬಿಣಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ. ಅಡವಿಯ ಹುಲ್ಲು ಅದರ ಸುತ್ತಲು ಬೆಳೆದಿರಲಿ, ಆಕಾಶದ ಇಬ್ಬನಿ ಅದನ್ನು ತೋಯಿಸಲಿ. ಏಳು ವರ್ಷಕಾಲ ಕಳೆಯುವ ತನಕ ಕಾಡುಮೃಗಗಳ ಸಹವಾಸದ ಗತಿ ಬರಲಿ’ ಎಂದು ಸಾರುವುದನ್ನು ರಾಜರಾದ ನೀವೇ ನೋಡಿದ್ದೀರಿ.”


ಹೀಗಿರುವಲ್ಲಿ ಭಯಂಕರವಾದ ಕನಸೊಂದನ್ನು ಕಂಡೆ. ನಿದ್ರೆಯಲ್ಲಿ ನನಗೆ ತೋಚಿದ ಆಲೋಚನೆಗಳು ಹಾಗು ಮನಸ್ಸಿಗೆ ಬಿದ್ದ ಸ್ವಪ್ನಗಳು ನನ್ನನ್ನು ಕಳವಳಕ್ಕೆ ಈಡುಮಾಡಿದವು.


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಗಟ್ಟಿಯಾಗಿ ಕಿರುಚಿದನು.


ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಆಗ ಅವನು ನನಗೆ ಕೊಟ್ಟ ವಿವರ ಇದು: “ಆ ನಾಲ್ಕನೆಯ ಮೃಗ ಲೋಕದಲ್ಲಿ ತಲೆಯೆತ್ತುವ ನಾಲ್ಕನೆಯ ರಾಜ್ಯ. ಅದು ಮಿಕ್ಕ ರಾಜ್ಯಗಳಿಗಿಂತ ವಿಲಕ್ಷಣವಾದುದು. ಲೋಕವನ್ನೇ ಕಾಲಿನಿಂದ ತುಳಿದು ಚೂರುಚೂರು ಮಾಡಿ ಕಬಳಿಸುವುದು.


ಅವನು ನನಗೆ: “ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರಗಳಿಂದ ಏರತಕ್ಕ ನಾಲ್ಕು ರಾಜ್ಯಗಳು.


‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವು: ಇಗೋ ಭೂಮಧ್ಯದಲ್ಲಿ ಬಹು ಎತ್ತರವಾದ ಒಂದು ಮರವನ್ನು ಕಂಡೆ.


ಭಜಿಸಿರಿ ಪ್ರಭುವನು ದೇವದೂತರುಗಳೇ I ಆತನ ಆಣತಿ ಪಾಲಿಪ ಪರಾಕ್ರಮಿಗಳೇ I ಆತನ ನುಡಿಯಂತೆಯೇ ನಡೆಯುವ ಜನಾಂಗಗಳೇ II


ಇದು ಕಾವಲುಗಾರ ದೂತನ ತೀರ್ಮಾನ; ಹಾಗು ದೇವರ ತೀರ್ಪು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದರ ಆಳ್ವಿಕೆಯನ್ನು ಅವರು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಕನಿಷ್ಠರನ್ನೂ ಆ ಪದವಿಗೆ ನೇಮಿಸುತ್ತಾರೆ. ಇದು ಎಲ್ಲಾ ಜನರಿಗೆ ತಿಳಿದಿರಬೇಕೆಂಬುದೇ ಈ ತೀರ್ಮಾನ,' ಎಂದು ಸಾರಿದನು.


ಭೂಪತಿಗಳನ್ನು ಬುದ್ಧಿಹೀನರನ್ನಾಗಿಸುತ್ತಾನೆ ದಾರಿಕಾಣದ ಅರಣ್ಯದಲಿ ಅಲೆದಾಡಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು