Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:18 - ಕನ್ನಡ ಸತ್ಯವೇದವು C.L. Bible (BSI)

18 ‘ಇದೇ ನಾನು ಕಂಡ ಕನಸು. ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರಿಂದಲೂ ಇದರ ಅರ್ಥವನ್ನು ಹೇಳಲಾಗಲಿಲ್ಲ. ಅದನ್ನು ನೀನು ತಿಳಿಸು. ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಸಿರುವುದರಿಂದ ಇದು ನಿನ್ನಿಂದ ಸಾಧ್ಯ’,” ಎಂದನು ರಾಜ ನೆಬೂಕದ್ನೆಚ್ಚರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದರಿಂದ ನೀನು ಶಕ್ತನೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಅರಸನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು. ಈಗ ನೀನು, ಬೇಲ್ತೆಶಚ್ಚರನೇ (ದಾನಿಯೇಲನೇ), ಇದರ ಅರ್ಥವನ್ನು ನನಗೆ ತಿಳಿಸು. ನನ್ನ ರಾಜ್ಯದಲ್ಲಿರುವ ವಿದ್ವಾಂಸರಲ್ಲಿ ಯಾರೂ ಇದರ ಅರ್ಥವನ್ನು ನನಗೆ ಹೇಳಲಾರರು. ಆದರೆ ನೀನು ಈ ಕನಸಿನ ಅರ್ಥವನ್ನು ತಿಳಿಸಬಲ್ಲೆ. ಏಕೆಂದರೆ ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದು ನನಗೆ ತಿಳಿದದೆ” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೇಲ್ತೆಶಚ್ಚರನೆಂಬ ನೀನು ಅದರ ಅರ್ಥವನ್ನು ಹೇಳು. ಏಕೆಂದರೆ ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವು ಇರುವುದರಿಂದ ನೀನು ಹೇಳಲು ಶಕ್ತನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:18
14 ತಿಳಿವುಗಳ ಹೋಲಿಕೆ  

ಈಗ ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಿದೆ. ಅವರು ಇದರ ಅರ್ಥವನ್ನು ವಿವರಿಸಲಾರದೆಹೋದರು.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.


ಆಸ್ಥಾನದ ವಿದ್ವಾಂಸರೆಲ್ಲರು ಬಂದು ಸೇರಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕಾಗಲಿ ಅವರಿಂದ ಆಗಲಿಲ್ಲ.


ಫರೋಹನು ಅವನಿಗೆ, “ನಾನು ಒಂದು ಕನಸುಕಂಡೆ, ಅದರ ಅರ್ಥ ಹೇಳಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳಬಲ್ಲೆ ಎಂಬ ಸಮಾಚಾರ ಕೇಳಿದ್ದೇನೆ,” ಎಂದ.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಪಂಡಿತರು, “ರಾಜರು ತಮ್ಮ ದಾಸರಿಗೆ ಕನಸನ್ನು ತಿಳಿಸೋಣವಾಗಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು,” ಎಂದು ಮತ್ತೊಮ್ಮೆ ಉತ್ತರಕೊಟ್ಟರು.


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


ಅದಕ್ಕೆ ಜೋಸೆಫನು, “ಆ ಕನಸಿನ ಅರ್ಥ ಇದು: ಆ ಮೂರು ಕೊಂಬೆಗಳು ಮೂರು ದಿನಗಳು;


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ನರಮಾನವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿಮ್ಮ ಕೈಗೆ ಒಪ್ಪಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು