Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:2 - ಕನ್ನಡ ಸತ್ಯವೇದವು C.L. Bible (BSI)

2 ಪರಾತ್ಪರ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸುವುದು ನನಗೆ ವಿಹಿತವೆಂದು ತೋರಿಬಂದಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಪರಾತ್ಪರದೇವರು ನನ್ನ ವಿಷಯದಲ್ಲಿ ನಡಿಸಿರುವ ಮಹತ್ತುಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮಹೋನ್ನತನಾದ ದೇವರು ನನಗೋಸ್ಕರ ಮಾಡಿದ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ನಿಮಗೆ ತಿಳಿಸಲು ನನಗೆ ಬಹಳ ಸಂತೋಷವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:2
19 ತಿಳಿವುಗಳ ಹೋಲಿಕೆ  

ನಾಲ್ಕನೆಯವನ ರೂಪ ದೇವಪುತ್ರನ ರೂಪದಂತಿದೆ!” ಎಂದು ಹೇಳಿ ಧಗಧಗನೆ ಉರಿಯುತ್ತಿದ್ದ ಆವಿಗೆಯ ಬಾಯಿಯ ಬಳಿಗೆಹೋಗಿ, “ಪರಾತ್ಪರ ದೇವರ ದಾಸರಾದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರೇ, ಬನ್ನಿ, ಹೊರಗೆ ಬನ್ನಿ,” ಎಂದು ಕೂಗಿಕೊಂಡನು. ಅಂತೆಯೇ ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಅವರು ಬೆಂಕಿಯಿಂದ ಹೊರಟುಬಂದರು.


ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II


ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II


ತಪ್ಪಿಸೆನ್ನನು ಸ್ವಾಮಿ ದೇವಾ, ರಕ್ತಾಪರಾಧದಿಂದ I ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತಕಂಠದಿಂದ II


ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು


ಯೇಸು ಅವನಿಗೆ, “ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಕಂಡ ಹೊರತು ನೀವು ನಂಬುವುದಿಲ್ಲವಲ್ಲಾ,” ಎಂದರು.


ಇದು ಕಾವಲುಗಾರ ದೂತನ ತೀರ್ಮಾನ; ಹಾಗು ದೇವರ ತೀರ್ಪು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದರ ಆಳ್ವಿಕೆಯನ್ನು ಅವರು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಕನಿಷ್ಠರನ್ನೂ ಆ ಪದವಿಗೆ ನೇಮಿಸುತ್ತಾರೆ. ಇದು ಎಲ್ಲಾ ಜನರಿಗೆ ತಿಳಿದಿರಬೇಕೆಂಬುದೇ ಈ ತೀರ್ಮಾನ,' ಎಂದು ಸಾರಿದನು.


“ರಾಜರೇ, ಕನಸಿನ ತಾತ್ಪರ್ಯ ಇದು: ನನ್ನೊಡೆಯರಾದ ಅರಸರಿಗೆ ಉಂಟಾಗಲಿರುವ ಪರಾತ್ಪರ ದೇವರ ತೀರ್ಪು ಹೀಗಿದೆ -


ತಾವು ಮಾನವ ಸಮಾಜದಿಂದ ಬಹಿಷ್ಕೃತರಾಗುವಿರಿ. ಕಾಡುಮೃಗಗಳ ನಡುವೆ ವಾಸಮಾಡುವಿರಿ. ದನಕರುಗಳಂತೆ ಹುಲ್ಲು ಮೇಯುವ ಗತಿ ನಿಮ್ಮದಾಗುವುದು. ಆಕಾಶದ ಇಬ್ಬನಿ ನಿಮ್ಮನ್ನು ತೋಯಿಸುವುದು. ಪರಾತ್ಪರ ದೇವರಿಗೆ ಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದು ತಮಗೆ ತಿಳಿದುಬರುವುದರೊಳಗೆ ಏಳು ವರ್ಷ ಕಳೆದಿರುತ್ತದೆ.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


ಆತ ಉದ್ಧರಿಸುವಂಥವನು, ರಕ್ಷಿಸುವಂಥವನು ಭೂಮ್ಯಾಕಾಶಗಳಲ್ಲಿ ಅದ್ಭುತ ಮಹತ್ವಗಳನ್ನು ನಡೆಸುವಂಥವನು! ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದವನು!


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ಆದರೂ ನೀನು ಬೆದರಿಸುತ್ತೀಯೆ ಸ್ವಪ್ನಗಳಿಂದ ಭಯಪಡಿಸುತ್ತೀಯೆ ನನ್ನನು ಕೆಟ್ಟ ಕನಸುಗಳಿಂದ.


ಇಳೆಯನು ಸಂಧಿಸಿ, ಮಳೆಯನು ಸುರಿಸಿ, ನೆಲವನು ನೀ ಸಿರಿಗೊಳಿಸುವಾತ I ನಾಲೆ ತುಂಬ ನೀರಹರಿಸಿ, ಹೊಲ ತುಂಬ ನೀ ಧಾನ್ಯನೀಡುವಾತ II


ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಒಂದು ಕನಸು ಕಂಡು ತತ್ತರಗೊಂಡನು. ಅವನಿಗೆ ನಿದ್ರೆ ತಪ್ಪಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು