Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:33 - ಕನ್ನಡ ಸತ್ಯವೇದವು C.L. Bible (BSI)

33 ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದ. ದನಗಳಂತೆ ಹುಲ್ಲು ಮೇಯುತ್ತಾ ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದ. ಅವನ ಕೂದಲು ಹದ್ದುಗಳ ರೆಕ್ಕೆಗಳಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನಂತೆಯೂ ಬೆಳೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ದನಗಳಂತೆ ಹುಲ್ಲು ಮೇಯುತ್ತಾ ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆ ಮಾತುಗಳು ತಕ್ಷಣ ನೆರವೇರಿದವು. ನೆಬೂಕದ್ನೆಚ್ಚರನು ಜನರನ್ನು ಬಿಟ್ಟುಹೋಗಬೇಕಾಯಿತು. ಅವನು ಹಸುಗಳಂತೆ ಹುಲ್ಲು ತಿನ್ನತೊಡಗಿದನು. ಅವನು ಇಬ್ಬನಿಯಿಂದ ನೆನೆದನು. ಅವನ ಕೂದಲುಗಳು ಹದ್ದಿನ ಗರಿಗಳಂತೆ ಬೆಳೆದವು. ಅವನ ಉಗುರುಗಳು ಪಕ್ಷಿಗಳ ಉಗುರುಗಳಂತೆ ಬೆಳೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದನು. ದನಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ, ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೆ ಬೆಳೆಯುವವರೆಗೆ ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:33
7 ತಿಳಿವುಗಳ ಹೋಲಿಕೆ  

‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”


ತಾವು ಮಾನವ ಸಮಾಜದಿಂದ ಬಹಿಷ್ಕೃತರಾಗುವಿರಿ. ಕಾಡುಮೃಗಗಳ ನಡುವೆ ವಾಸಮಾಡುವಿರಿ. ದನಕರುಗಳಂತೆ ಹುಲ್ಲು ಮೇಯುವ ಗತಿ ನಿಮ್ಮದಾಗುವುದು. ಆಕಾಶದ ಇಬ್ಬನಿ ನಿಮ್ಮನ್ನು ತೋಯಿಸುವುದು. ಪರಾತ್ಪರ ದೇವರಿಗೆ ಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದು ತಮಗೆ ತಿಳಿದುಬರುವುದರೊಳಗೆ ಏಳು ವರ್ಷ ಕಳೆದಿರುತ್ತದೆ.


ಸಮಾಜದಿಂದ ಬಹಿಷ್ಕೃತರಾಗಿ, ಮೃಗಬುದ್ಧಿಯುಳ್ಳವರಾಗಿ, ಕಾಡುಕತ್ತೆಗಳ ನಡುವೆ ವಾಸಮಾಡಬೇಕಾಯಿತು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಅದನ್ನು ತಮಗೆ ಇಷ್ಟಬಂದವರಿಗೆ ಒಪ್ಪಿಸುತ್ತಾರೆ ಎಂಬುದನ್ನು ಅವರು ಗ್ರಹಿಸುವ ತನಕ ದನಗಳಂತೆ ಹುಲ್ಲುಮೇಯುವ ಗತಿ ಅವರದಾಯಿತು. ಆಕಾಶದ ಇಬ್ಬನಿ ಅವರ ಮೈಯನ್ನು ತೋಯಿಸುತ್ತಿತ್ತು.”


ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಕೈಬೆರಳುಗಳು ಕಾಣಿಸಿಕೊಂಡು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು. ಬರೆಯುತ್ತಿದ್ದ ಆ ಕೈಯನ್ನು ರಾಜನು ನೋಡಿದನು.


ಆ ಗೋಡೆಯೆಂಬ ಕುಂಬಾರನ ಮಡಕೆಯ ಚೂರಿನಿಂದ, ಬೆಂಕಿಯ ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲೀ ತೊಟ್ಟಿಯ ನೀರನ್ನು ತೋಡಿಕೊಳ್ಳುವುದಕ್ಕಾಗಲೀ ಸಾಧ್ಯವಾಗದು.”


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು