Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:36 - ಕನ್ನಡ ಸತ್ಯವೇದವು C.L. Bible (BSI)

36 ಅದೇ ಸಮಯದಲ್ಲಿ ನನ್ನ ಬುದ್ಧಿ ನನಗೆ ಮತ್ತೆ ಸ್ವಾಧೀನವಾಯಿತು. ಘನತೆ ಗೌರವಗಳು ನನಗೆ ಮತ್ತೆ ಲಭಿಸಿದವು. ನನ್ನ ರಾಜ್ಯದ ಕೀರ್ತಿ ಬೆಳಗತೊಡಗಿತು. ನನ್ನ ಮಂತ್ರಿಗಳೂ ಪದಾಧಿಕಾರಿಗಳೂ ನನ್ನನ್ನು ಸ್ವಾಗತಿಸಲು ಬಂದರು. ರಾಜ್ಯದಲ್ಲಿ ನಾನು ನೆಲೆಗೊಂಡೆ. ಹಿಂದೆ ಇದ್ದುದಕ್ಕಿಂತಲೂ ಹೆಚ್ಚಿನ ಪ್ರತಿಭೆ ನನ್ನದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಓಲೈಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಗ ದೇವರು ನನಗೆ ಸರಿಯಾದ ಬುದ್ಧಿಯನ್ನು ಕೊಟ್ಟನು. ನನಗೆ ರಾಜನ ಗೌರವ, ಪ್ರಭಾವ, ವೈಭವಗಳು ಮತ್ತೆ ಲಭಿಸಿದವು. ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸ್ವೀಕರಿಸಿದರು. ನಾನು ಮತ್ತೆ ಅರಸನಾದೆನು. ನಾನು ಮೊದಲಿಗಿಂತಲೂ ಅಧಿಕ ಶಕ್ತಿಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಇದೇ ಸಮಯದಲ್ಲಿ ನನ್ನ ಬುದ್ಧಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ, ನನ್ನ ತೇಜಸ್ಸೂ ತಿರುಗಿ ಬಂದವು. ನನ್ನ ಆಲೋಚನಾಗಾರರೂ, ನನ್ನ ಪ್ರಭುಗಳೂ ನನ್ನನ್ನು ಹುಡುಕಿ ಬಂದರು. ನಾನು ನನ್ನ ರಾಜ್ಯದಲ್ಲಿ ಪುನಃ ನೆಲೆಗೊಂಡೆನು. ಮೊದಲಿಗಿಂತಲೂ ನನಗೆ ಹೆಚ್ಚಿನ ಪ್ರತಿಭೆ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:36
11 ತಿಳಿವುಗಳ ಹೋಲಿಕೆ  

ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ಸರ್ವೇಶ್ವರನಲ್ಲಿ ಭಯಭಕ್ತಿ ದೀನಮನೋಭಾವ, ಇವು ನೀಡುವ ಫಲ-ಸಂಪತ್ತು, ಸನ್ಮಾನ, ಆಯುಸ್ಸು.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ನಿಮ್ಮ ಸ್ಮೃತಿಗಳು ಬೂದಿಯ ಸಾಮತಿಗಳು ನಿಮ್ಮ ವಾದಗಳು ಮಣ್ಣಿನ ಗೋಡೆಗಳು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


“ರಾಜರೇ ಕೇಳಿ, ತಾವು ಕಂಡದ್ದು ಒಂದು ಅದ್ಭುತ ಪ್ರತಿಮೆ. ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆ ನಿಮ್ಮೆದುರಿಗೆ ನಿಂತಿತ್ತು. ಭಯಂಕರವಾಗಿ ಕಾಣಿಸುತ್ತಿತ್ತು.


“ರಾಜರೇ, ನೀವು ಬೆಳೆದು ಬಲಗೊಂಡಿದ್ದೀರಿ. ನಿಮ್ಮ ಕೀರ್ತಿ ವೃದ್ಧಿಯಾಗಿ ಗಗನಕ್ಕೇರಿದೆ. ನಿಮ್ಮ ಆಳ್ವಿಕೆ ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು