Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:5 - ಕನ್ನಡ ಸತ್ಯವೇದವು C.L. Bible (BSI)

5 ಹೀಗಿರುವಲ್ಲಿ ಭಯಂಕರವಾದ ಕನಸೊಂದನ್ನು ಕಂಡೆ. ನಿದ್ರೆಯಲ್ಲಿ ನನಗೆ ತೋಚಿದ ಆಲೋಚನೆಗಳು ಹಾಗು ಮನಸ್ಸಿಗೆ ಬಿದ್ದ ಸ್ವಪ್ನಗಳು ನನ್ನನ್ನು ಕಳವಳಕ್ಕೆ ಈಡುಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟುಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟುಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:5
15 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಒಂದು ಕನಸು ಕಂಡು ತತ್ತರಗೊಂಡನು. ಅವನಿಗೆ ನಿದ್ರೆ ತಪ್ಪಿತು.


ಇಲ್ಲಿಗೆ ಆ ಕನಸಿನ ವಿವರ ಮುಗಿಯಿತು. ದಾನಿಯೇಲನಾದ ನಾನು ನನ್ನ ಆಲೋಚನೆಗಳಿಂದ ಬಹಳ ಕಳವಳಗೊಂಡೆ. ನನ್ನ ಮುಖ ಬಾಡಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲೇ ಇಟ್ಟುಕೊಂಡೆ.


ರಾಜನೂ ಅವನ ಸಾಮಂತರೂ ಆಡಿದ ಮಾತು ರಾಣಿಗೆ ಮುಟ್ಟಿತು. ಆಕೆ ಔತಣ ಶಾಲೆಗೆ ಬಂದು, “ರಾಜರೇ, ಚಿರಂಜೀವಿಯಾಗಿರಿ! ನಿಮ್ಮ ಮನಸ್ಸು ಕಳವಳಗೊಳ್ಳದಿರಲಿ, ನಿಮ್ಮ ಮುಖ ಕಳೆಗುಂದದಿರಲಿ! ಪರಿಶುದ್ಧ ದೇವರ ಆತ್ಮ ನೆಲೆಸಿರುವ ಒಬ್ಬ ವ್ಯಕ್ತಿ ನಿಮ್ಮ ರಾಜ್ಯದಲ್ಲಿದ್ದಾನೆ.


ಎರಡು ವರ್ಷಗಳಾದ ಮೇಲೆ ಫರೋಹನಿಗೆ ಒಂದು ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.


ರಾಜನು ಅವರಿಗೆ, “ನಾನು ಒಂದು ಕನಸು ಕಂಡೆ. ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು.


‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವು: ಇಗೋ ಭೂಮಧ್ಯದಲ್ಲಿ ಬಹು ಎತ್ತರವಾದ ಒಂದು ಮರವನ್ನು ಕಂಡೆ.


‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ, ಇಗೋ, ಕಾವಲುಗಾರನಾದ ದೇವದೂತನೊಬ್ಬನು ಆಕಾಶದಿಂದ ಇಳಿದು, ಗಟ್ಟಿಯಾಗಿ ಕೂಗಿ:


ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!


ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಒಂದು ಕನಸು ಕಂಡನು. ಅವನ ಮನಸ್ಸಿಗೆ ಒಂದು ದೃಶ್ಯ ಕಾಣಿಸಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದಿಟ್ಟನು.


ಕಂಚುಕಿಯರ ನಾಯಕನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ‘ಬೇಲ್ತೆಶಚ್ಚರ್’, ಹನನ್ಯನಿಗೆ ‘ಶದ್ರಕ್’, ಮಿಶಾಯೇಲನಿಗೆ ‘ಮೇಶಕ್’, ಹಾಗೂ ಅಜರ್ಯನಿಗೆ ‘ಅಬೇದ್‍ನೆಗೋ’, ಎಂಬ ಹೆಸರಿಟ್ಟನು.


ಆದರೆ ಅದರ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಹಿತ್ತಾಳೆ ಕಬ್ಬಿಣಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ. ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ.’ ‘ಆಕಾಶದ ಇಬ್ಬನಿ ಅದನ್ನು ತೋಯಿಸಲಿ, ಹುಲ್ಲುಗಿಡಗಳ ಹಾಗು ಕಾಡುಮೃಗಗಳ ನಡುವೆ ಅದಿರಲಿ.


ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು