Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:9 - ಕನ್ನಡ ಸತ್ಯವೇದವು C.L. Bible (BSI)

9 ‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಾಮುಖ್ಯನೇ, ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಯಾಗಿದೆಯೆಂದು ತಿಳಿದಿದ್ದೇನೆ. ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂದು ನನಗೆ ಗೊತ್ತು. ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬದು ನನಗೆ ಗೊತ್ತು. ಆದದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು, “ಬೇಲ್ತೆಶಚ್ಚರನೇ, ಎಲ್ಲಾ ಮಂತ್ರವಾದಿಗಳಿಗಿಂತಲೂ ನೀನು ಬಹಳ ಶ್ರೇಷ್ಠನು. ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿದೆ ಎಂದು ನನಗೆ ಗೊತ್ತಿದೆ. ನಿನಗೆ ತಿಳಿದುಕೊಳ್ಳಲು ಕಷ್ಟವಾದ ಯಾವ ರಹಸ್ಯವೂ ಇಲ್ಲವೆಂದು ನಾನು ಬಲ್ಲೆನು. ನಾನು ಕನಸಿನಲ್ಲಿ ಕಂಡದ್ದು ಇಂತಿದೆ. ಅದರ ಅರ್ಥವನ್ನು ನನಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಮಂತ್ರಗಾರರಲ್ಲಿ ಪ್ರಾಮುಖ್ಯನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವಿರುವುದೆಂದು ನಾನು ಬಲ್ಲೆನು. ಯಾವುದೇ ರಹಸ್ಯವು ನಿನಗೆ ಅಸಾಧ್ಯವಾದದ್ದಲ್ಲ. ಆದ್ದರಿಂದ ನಾನು ಕಂಡ ಕನಸಿನ ದರ್ಶನ, ಅದರ ಅರ್ಥವನ್ನೂ ನೀನು ನನಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:9
18 ತಿಳಿವುಗಳ ಹೋಲಿಕೆ  

ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.


ಬಳಿಕ ರಾಜನು ದಾನಿಯೇಲನನ್ನು ದೊಡ್ಡ ಪದವಿಗೆ ಏರಿಸಿದನು. ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟನು. ಬಾಬಿಲೋನಿನ ಸಂಸ್ಥಾನವನ್ನೆಲ್ಲ ಅವನಿಗೆ ಅಧೀನಪಡಿಸಿ ಬಾಬಿಲೋನಿನ ಎಲ್ಲಾ ವಿದ್ವಾಂಸರಿಗೂ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಿದನು.


ನನ್ನ ದೇವರ ಹೆಸರು ಸೇರಿರುವ ‘ಬೇಲ್ತೆಶಚ್ಚರ’ ಎಂಬ ಅಡ್ಡಹೆಸರನ್ನು ಹೊಂದಿದ ದಾನಿಯೇಲನು ಕೊನೆಗೆ ನನ್ನ ಬಳಿಗೆ ಬಂದ. ಪರಿಶುದ್ಧ ದೇವರ ಆತ್ಮ ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.


ಹೀಗಿರುವಲ್ಲಿ ಭಯಂಕರವಾದ ಕನಸೊಂದನ್ನು ಕಂಡೆ. ನಿದ್ರೆಯಲ್ಲಿ ನನಗೆ ತೋಚಿದ ಆಲೋಚನೆಗಳು ಹಾಗು ಮನಸ್ಸಿಗೆ ಬಿದ್ದ ಸ್ವಪ್ನಗಳು ನನ್ನನ್ನು ಕಳವಳಕ್ಕೆ ಈಡುಮಾಡಿದವು.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ನೀನು ದಾನಿಯೇಲನಿಗಿಂತಲೂ ಬುದ್ಧಿವಂತನೋ? ಹಾಗಾದರೆ ನಿನಗೆ ಮರೆಯಾದ ರಹಸ್ಯ ಯಾವುದೂ ಇಲ್ಲ!


ಫರೋಹನು ತನ್ನ ಪರಿವಾರದವರಿಗೆ, “ಈತ ದೇವರಾತ್ಮ ಪಡೆದವನು,


‘ಇದೇ ನಾನು ಕಂಡ ಕನಸು. ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರಿಂದಲೂ ಇದರ ಅರ್ಥವನ್ನು ಹೇಳಲಾಗಲಿಲ್ಲ. ಅದನ್ನು ನೀನು ತಿಳಿಸು. ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಸಿರುವುದರಿಂದ ಇದು ನಿನ್ನಿಂದ ಸಾಧ್ಯ’,” ಎಂದನು ರಾಜ ನೆಬೂಕದ್ನೆಚ್ಚರನು.


ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ.


ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ - “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಗಣಿಸಿದವನು ಎಲ್ಲಿ?” ಎಂದು ಹೇಳಿಕೊಳ್ಳುವಿರಿ.


ಅಕಟಾ, ಪ್ರತಾಪವುಳ್ಳ ಈ ದೇವರುಗಳ ಕೈಯಿಂದ ನಮ್ಮನ್ನು ಬಿಡಿಸುವವರಾರು? ಈಜಿಪ್ಟರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೆ?


ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ಹೌದು, ನೆಡುವೆನು ಇಸ್ರಯೇಲಿನಾ ಪರ್ವತಾಗ್ರದಲ್ಲಿ. ಆಗುವುದದು ಸೊಂಪಾದ ದೇವದಾರು ಮರ, ರೆಂಬೆಗಳನದು ಹರಡಿಕೊಂಡು ಕೊಡುವುದು ಫಲ. ಸಕಲವಿಧ ಪಕ್ಷಿಗಳು ವಾಸಿಸುವುವು ಅದರಲ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು