Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:19 - ಕನ್ನಡ ಸತ್ಯವೇದವು C.L. Bible (BSI)

19 ಇಂಥ ಮಹತ್ವ ವರದ ನಿಮಿತ್ತ ಸಕಲ ದೇಶ-ಕುಲ-ಭಾಷೆಗಳವರು ಅವರ ಮುಂದೆ ಭಯದಿಂದ ನಡುಗುತ್ತಿದ್ದರು. ತಮಗೆ ಇಷ್ಟಬಂದ ಹಾಗೆ ಒಬ್ಬನನ್ನು ಬದುಕಿಸಿದರು, ಇನ್ನೊಬ್ಬನನ್ನು ಕೊಲ್ಲಿಸಿದರು. ಮನಸ್ಸಿಗೆ ಬಂದಹಾಗೆ ಒಬ್ಬನನ್ನು ಮೇಲೇರಿಸಿದರು, ಇನ್ನೊಬ್ಬನನ್ನು ಕೆಳಕ್ಕಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಈ ಮಹತ್ವ ವರದ ನಿವಿುತ್ತ ಸಕಲ ಜನಾಂಗಕುಲಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ಬೇಕುಬೇಕಾದವರನ್ನು ಕೊಲ್ಲಿಸಿದನು, ಬೇಕುಬೇಕಾದವರನ್ನು ಉಳಿಸಿದನು, ಮನಸ್ಸುಬಂದವರನ್ನು ಏರಿಸಿದನು, ಮನಸ್ಸುಬಂದವರನ್ನು ಇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:19
22 ತಿಳಿವುಗಳ ಹೋಲಿಕೆ  

ಯಾರು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವರನ್ನು ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು,” ಎಂದು ಸಾರಿದನು.


ಆಗ, ಸಾರುವವರು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ-ಕುಲ-ಭಾಷೆಗಳವರೇ, ನಿಮಗೆ ಹೀಗೆಂದು ರಾಜಾಜ್ಞೆಯಾಗಿದೆ:


ಪ್ರತಿಯೊಬ್ಬನು ತನ್ನ ಮೇಲಿನ ಅಧಿಕಾರಿಗಳಿಗೆ ಅಧೀನನಾಗಿರಬೇಕು. ಅಧಿಕಾರವೆಲ್ಲವೂ ಬರುವುದು ದೇವರಿಂದಲೇ. ಈಗಿರುವ ಅಧಿಕಾರಿಗಳೂ ದೇವರಿಂದಲೇ ನೇಮಕಗೊಂಡವರು.


ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ, ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು.


ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


“ರಾಜರೇ, ನೀವು ಬೆಳೆದು ಬಲಗೊಂಡಿದ್ದೀರಿ. ನಿಮ್ಮ ಕೀರ್ತಿ ವೃದ್ಧಿಯಾಗಿ ಗಗನಕ್ಕೇರಿದೆ. ನಿಮ್ಮ ಆಳ್ವಿಕೆ ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ಸಕಲ ದೇಶ-ಕುಲ-ಭಾಷೆಗಳವರಲ್ಲಿ ಯಾರಾದರು ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರ ವಿಷಯದಲ್ಲಿ ಅಲ್ಲಸಲ್ಲದ ಮಾತನಾಡಿದರೆ ಅಂಥವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸಬೇಕೆಂದು ಆಜ್ಞೆ ವಿಧಿಸುತ್ತೇನೆ. ಹೀಗೆ ರಕ್ಷಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವೇ ಇಲ್ಲ,” ಎಂದು ಹೇಳಿದನು.


ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಅದು ಮಾತ್ರವಲ್ಲ, ಅವನೊಡನೆ ಪ್ರೀತಿಯಿಂದ ಮಾತಾಡಿ, ತನ್ನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲ ಅರಸುಗಳಲ್ಲಿ ಅವನಿಗೇ ಉನ್ನತ ಸ್ಥಾನವನ್ನು ಕೊಟ್ಟನು.


ಅದುದರಿಂದ ನಾನು ಅದನ್ನು ರಾಷ್ಟ್ರಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ತೀರುವನು; ನಾನು ಅದನ್ನು ತಳ್ಳಿಹಾಕಿದ್ದೆ.


ಇದು ಕಾವಲುಗಾರ ದೂತನ ತೀರ್ಮಾನ; ಹಾಗು ದೇವರ ತೀರ್ಪು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದರ ಆಳ್ವಿಕೆಯನ್ನು ಅವರು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಕನಿಷ್ಠರನ್ನೂ ಆ ಪದವಿಗೆ ನೇಮಿಸುತ್ತಾರೆ. ಇದು ಎಲ್ಲಾ ಜನರಿಗೆ ತಿಳಿದಿರಬೇಕೆಂಬುದೇ ಈ ತೀರ್ಮಾನ,' ಎಂದು ಸಾರಿದನು.


“ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾಪ್ರಭುತ್ವದಿಂದ ಆಳುತ್ತಾ ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.


ದಕ್ಷಿಣದರಾಜನಿಗೆ ವಿರುದ್ಧ ಬರುವವನು ಇಚ್ಛಾನುಸಾರ ವರ್ತಿಸುವನು. ಅವನನ್ನು ಎದುರಿಸಬಲ್ಲವನು ಒಬ್ಬನೂ ಇರನು. ಆ ‘ಚೆಲುವಿನ ನಾಡನ್ನೂ’ ಗೆದ್ದು ಅದನ್ನು ಪೂರ್ತಿಯಾಗಿ ತನ್ನ ಕೈಹಿಡಿತದಲ್ಲಿ ಇಟ್ಟುಕೊಳ್ಳುವನು.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ದುಡುಕುತನದಿಂದ ಅರಸನಿಗೆ ಬೆನ್ನು ತೋರಿಸಬೇಡ; ಕೆಟ್ಟ ವಿಷಯದಲ್ಲಿ ಹಟಮಾಡಬೇಡ. ಆತನು ತನಗಿಷ್ಟಬಂದಂತೆ ಮಾಡಬಲ್ಲನು.


ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!


ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು