Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:28 - ಕನ್ನಡ ಸತ್ಯವೇದವು C.L. Bible (BSI)

28 ‘ಫರ್ಸಿನ್’ ಎಂದರೆ ನಿನ್ನ ರಾಜ್ಯವನ್ನು ವಿಭಾಗಮಾಡಿ ಮೇದ್ಯರಿಗೂ ಪರ್ಷಿಯದವರಿಗೂ ಕೊಡಲಾಗಿದೆ,” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಫೆರೇಸ್ ಅಂದರೆ ನಿನ್ನ ರಾಜ್ಯವು ಭಿನ್ನವಾಗಿ ಮೇದ್ಯಯರಿಗೂ ಪಾರಸಿಯರಿಗೂ ಕೊಡಲ್ಪಟ್ಟಿದೆ ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಉಪರ್ಸಿನ್ ಎಂದರೆ: ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:28
16 ತಿಳಿವುಗಳ ಹೋಲಿಕೆ  

ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲೂ ಪರ್ಷಿಯನಾದ ಸೈರೆಷನ ಆಳ್ವಿಕೆಯಲ್ಲೂ ಪ್ರವರ್ಧಿಸುತ್ತಾ ಬಾಳಿದನು.


“ಇಗೋ, ಬಾಬಿಲೋನಿಯದ ಜನರಿಗೆ ವಿರುದ್ಧವಾಗಿ ಮೇದ್ಯರನ್ನು ಎತ್ತಿಕಟ್ಟುವೆನು. ಇವರು ಬೆಳ್ಳಿಬಂಗಾರಕ್ಕೆ ಮಾರುಹೋಗರು.


ಸುಮಾರು 62 ವಯಸ್ಸಿನ ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ವಹಿಸಿಕೊಂಡನು.


ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು ! ಮೇದ್ಯವೇ, ಮುತ್ತಿಗೆ ಹಾಕು ! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.


ಅದು, ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ. ಈತನು ಅಹಷ್ವೇರೋಷನ ಮಗ, ಮೇದ್ಯ ವಂಶದವನು ಹಾಗು ಬಾಬಿಲೋನಿನ ರಾಜ್ಯದ ದೊರೆ.


“ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯದ ಮತ್ತು ಪರ್ಷಿಯದ ರಾಜ್ಯ.


ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದಾರೆ. ಪೊಂತ ಮತ್ತು ಏಷ್ಯದವರೂ,


ರಾಜರೇ, ಈ ಶಾಸನಕ್ಕೆ ನೀವು ಇದೀಗಲೇ ಹಸ್ತಾಕ್ಷರಗಳಿಂದ ರುಜುಹಾಕಬೇಕು. ಆಗ ಅದು ಮೇದ್ಯದ ಮತ್ತು ಪರ್ಷಿಯದ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದೆ ಊರ್ಜಿತವಾಗುವುದು,” ಎಂದು ವಿನಂತಿಸಿದರು.


"ಪರ್ಷಿಯದ ರಾಜ ಸೈರಸ್ ಎಂಬ ನನ್ನ ಮಾತಿಗೆ ಕಿವಿಗೊಡಿ; ಪರಲೋಕ ದೇವರಾದ ಸರ್ವೇಶ್ವರ ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿದ್ದಾರೆ; ತಮಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾರೆ; ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅವರು ಸ್ವಂತನಾಡಿಗೆ ಹೋಗಬಹುದು; ಅವರ ದೇವರಾದ ಸರ್ವೇಶ್ವರ ಅವರೊಂದಿಗೆ ಇರುತ್ತಾರೆ!” ಎಂದು ಪ್ರಕಟಿಸಿದನು.


ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.


ನಾನು ಈ ನಾಡಿನ ವಿಷಯದಲ್ಲಿ ನುಡಿದುದೆಲ್ಲವನ್ನು, ಅಂದರೆ ಯೆರೆಮೀಯನ ಮುಖಾಂತರ ಸಕಲ ರಾಷ್ಟ್ರಗಳ ವಿರುದ್ಧ ನುಡಿದಿರುವ ಹಾಗು ಪ್ರವಾದನೆಗಳ ಗ್ರಂಥದಲ್ಲಿ ಬರೆದುದೆಲ್ಲವನ್ನು ಅದರ ಮೇಲೆ ಬರಮಾಡುವೆನು.


ರಾಷ್ಟ್ರಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಕೈಕೆಳಗಿರುವ ಎಲ್ಲ ನಾಡಿನವರು, ಇವರೆಲ್ಲರನ್ನು ಬಾಬಿಲೋನಿಗೆ ವಿರುದ್ಧ ಸಜ್ಜುಗೊಳಿಸಿರಿ.


ಆ ಪ್ರತಿಮೆಯ ತಲೆ ಅಪ್ಪಟ ಬಂಗಾರದ್ದು. ಎದೆ ತೋಳುಗಳು ಬೆಳ್ಳಿಯವು. ಹೊಟ್ಟೆ ಸೊಂಟಗಳು ಕಂಚಿನವು.


ನಿಮ್ಮ ಕಾಲವಾದ ಮೇಲೆ ನಿಮಗಿಂತ ಬೀಳಾದ ಮತ್ತೊಂದು ರಾಜ್ಯ ತಲೆಯೆತ್ತಿಕೊಳ್ಳುವುದು. ಅನಂತರ ಬೇರೊಂದು ರಾಜ್ಯ ಕಂಚಿನದಾಗಿ ಕಾಣಿಸಿಕೊಂಡು ಭೂಮಂಡಲವನ್ನೆಲ್ಲ ಆಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು