15 ಇದನ್ನು ಅರಿತುಕೊಂಡ ಆ ಅಧಿಕಾರಿಗಳು ರಾಜಸನ್ನಿಧಿಗೆ ಮತ್ತೆ ಕೂಡಿಬಂದು, “ಪ್ರಭೂ, ರಾಜರು ವಿಧಿಸಿದ ಯಾವ ನಿಬಂಧನೆಯಾಗಲಿ, ಶಾಸನವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರ ಮೇದ್ಯರಲ್ಲೂ ಪರ್ಷಿಯರಲ್ಲೂ ಉಂಟೆಂಬುದು ತಮಗೆ ತಿಳಿದಿರಬೇಕು,” ಎಂದರು.
15 ಇದನ್ನು ತಿಳಿದು ಆ ಜನರು ರಾಜನ ಬಳಿಗೆ ಕೂಡಿಬಂದು, “ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ, ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ, ಪಾರಸಿಯರಲ್ಲಿಯೂ ಉಂಟೆಂಬುದು ನಿನಗೆ ಗೊತ್ತಿರಲಿ” ಎಂದು ಹೇಳಿದರು. ಇದರಿಂದ ಅನಿವಾರ್ಯವಾಗಿ ರಾಜನು ಅಪ್ಪಣೆ ಕೊಡಲೇ ಬೇಕಾಯಿತು.
15 ಇದನ್ನು ತಿಳಿದು ಆ ಜನರು ಸನ್ನಿಧಿಗೆ ಕೂಡಿಬಂದು - ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ ಪಾರಸಿಯರಲ್ಲಿಯೂ ಉಂಟೆಂಬದು ನಿನಗೆ ಗೊತ್ತಿರಲಿ ಎಂದು ಹೇಳಲು ರಾಜನ ಅಪ್ಪಣೆಯಾಯಿತು;
15 ಆಗ ಅವರು ಗುಂಪಾಗಿ ಅರಸನ ಬಳಿಗೆ ಹೋಗಿ, “ಅರಸನೇ, ನೆನಪಿಡು, ಮೇದ್ಯಯರ ಮತ್ತು ಪಾರಸಿಯರ ಶಾಸನದ ಪ್ರಕಾರ ಅರಸನ ಹಸ್ತಾಕ್ಷರದೊಂದಿಗೆ ಹೊರಡಿಸಿದ ರಾಜಾಜ್ಞೆಯನ್ನು ಎಂದಿಗೂ ರದ್ದುಗೊಳಿಸಲಾಗುವುದಿಲ್ಲ; ಅದರಲ್ಲಿ ಬದಲಾವಣೆ ಮಾಡಲಾಗುವುದಿಲ್ಲ” ಎಂದರು.
15 ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿಬಂದು ಅರಸನಿಗೆ, “ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ, ಆಜ್ಞೆಯಾದರೂ ರದ್ದಾಗಬಾರದು ಎಂಬ ಮೇದ್ಯ ಮತ್ತು ಪಾರಸಿಯರ ನಿಯಮದಲ್ಲಿದೆ ಎಂದು ನಿನಗೆ ತಿಳಿದಿರಬೇಕು,” ಎಂದರು.
ಕೂಡಲೆ ಆಸ್ಥಾನಕ್ಕೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜರೇ, ಯಾರೂ ಮೂವತ್ತು ದಿನಗಳ ತನಕ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಕೂಡದು. ಮಾಡಿದರೆ ಅಂಥವನನ್ನು ಸಿಂಹಗಳ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀವು ರುಜುಹಾಕಿದಿರಲ್ಲವೆ?” ಎಂದು ಕೇಳಿದರು. ಅದಕ್ಕೆ ರಾಜನು, “ಹೌದು, ಮೇದ್ಯರ ಹಾಗು ಪರ್ಷಿಯರ ಧರ್ಮವಿಧಿಗಳಂತೆ ಅದು ಸ್ಥಿರವಾದ ನಿಬಂಧನೆ,” ಎಂದು ಉತ್ತರಕೊಟ್ಟನು.
ಅರಸನ ಹೆಸರಿನಲ್ಲಿ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ರದ್ದುಮಾಡಲಾಗದು. ಆದ್ದರಿಂದ ಯೆಹೂದ್ಯರ ವಿಷಯದಲ್ಲಿ ನಿಮಗೆ ಸರಿತೋರಿದಂತೆ ಅರಸನ ಹೆಸರಿನಲ್ಲಿ ನೀವೂ ಪತ್ರ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ,” ಎಂದು ಹೇಳಿದನು.