Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:20 - ಕನ್ನಡ ಸತ್ಯವೇದವು C.L. Bible (BSI)

20 ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ದಾಸನೇ, ನೀನು ದಿನನಿತ್ಯವೂ ಆರಾಧಿಸುವ ನಿನ್ನ ದೇವರಿಗೆ ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಸಾಧ್ಯವಾಯಿತೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ರಾಜನಿಗೆ ಬಹಳ ಚಿಂತೆಯಾಗಿತ್ತು. ರಾಜನು ಸಿಂಹಗಳ ಗುಹೆಗೆ ಹೋಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಸೇವೆ ಮಾಡುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉಳಿಸಲು ಶಕ್ತನಾದನೇ?” ಎಂದು ಕೂಗಿ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ಗವಿಯ ಹತ್ತಿರ ಬಂದಾಗ, ದುಃಖದ ಧ್ವನಿಯಲ್ಲಿ ದಾನಿಯೇಲನನ್ನು ಕೂಗಿದನು. ಅರಸನು ಮಾತನಾಡಿ ದಾನಿಯೇಲನಿಗೆ, “ಜೀವಸ್ವರೂಪರಾದ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಿ ಕಾಪಾಡಲು ಸಮರ್ಥರಾಗಿದ್ದಾರೆಯೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:20
30 ತಿಳಿವುಗಳ ಹೋಲಿಕೆ  

ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಆತ ಉದ್ಧರಿಸುವಂಥವನು, ರಕ್ಷಿಸುವಂಥವನು ಭೂಮ್ಯಾಕಾಶಗಳಲ್ಲಿ ಅದ್ಭುತ ಮಹತ್ವಗಳನ್ನು ನಡೆಸುವಂಥವನು! ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದವನು!


ಆಶ್ರಯಿಸಿರಿ ಸರ್ವೇಶನನೂ ಆತನ ಶಕ್ತಿಯನೂ I ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II


ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು.


ನಾವು ಸೇವೆಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು.


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು.


ಆದುದರಿಂದ ಇಸ್ರಯೇಲ್, ನೀನು ದೇವರ ಕಡೆ ತಿರುಗಿಕೋ, ನೀತಿ ಪ್ರೀತಿಗಳಿಗೆ ಅನುಗುಣವಾಗಿ ನಡೆ. ನಿರಂತರವಾಗಿ ದೇವರನ್ನು ನಿರೀಕ್ಷಿಸಿಕೊಂಡಿರು.


ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಆದರೂ ನಾನಿರುವೆ ನಿನ್ನ ಸನ್ನಿಧಿಯಲಿ I ನೀ ಹಿಡಿದಿರುವೆ ನನ್ನ ಬಲಗೈಯನು ಭದ್ರವಾಗಿ II


ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.


ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಪ್ರಾರ್ಥನಾ ಜೀವನ ನಡೆಸಿರಿ. ಪ್ರಾರ್ಥಿಸುವಾಗಲೆಲ್ಲಾ ಎಚ್ಚರವಾಗಿದ್ದು ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು.


ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು I ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು II


ಮನಸ್ಸುಮಾಡಿರುವೆ ಸದಾ ಕೈಗೊಂಡು ನಡೆಯಲು I ಜೀವಮಾನವೆಲ್ಲ ನಿನ್ನ ನಿಬಂಧನೆಗಳನು II


ಮಾರನೆಯ ದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ವೇಗವಾಗಿ ಹೋದನು.


ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು