Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:23 - ಕನ್ನಡ ಸತ್ಯವೇದವು C.L. Bible (BSI)

23 ರಾಜನು ಇದನ್ನು ಕೇಳಿ ಬಹಳ ಸಂತೋಷಪಟ್ಟನು. ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಿದನು. ಅಂತೆಯೇ ಅವನನ್ನು ಮೇಲಕ್ಕೆತ್ತಲಾಯಿತು. ಆತನು ತನ್ನ ದೇವರಲ್ಲಿ ದೃಢವಾದ ವಿಶ್ವಾಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದನ್ನು ಕೇಳಿ ರಾಜನು ಬಹು ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅರಸನಾದ ದಾರ್ಯಾವೆಷನಿಗೆ ಬಹಳ ಸಂತೋಷವಾಯಿತು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಮೇಲಕ್ಕೆ ಎತ್ತಿಸಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಹೊರತೆಗೆದು ನೋಡಲಾಗಿ ಸಿಂಹಗಳಿಂದ ಅವನಿಗೆ ಯಾವ ಗಾಯಗಳೂ ಆಗಿರಲಿಲ್ಲ. ದಾನಿಯೇಲನು ತನ್ನ ದೇವರಲ್ಲಿ ನಂಬಿಕೆಯಿಟ್ಟಿದ್ದರಿಂದ ಅವನಿಗೆ ಸಿಂಹಗಳಿಂದ ಯಾವ ನೋವೂ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:23
18 ತಿಳಿವುಗಳ ಹೋಲಿಕೆ  

ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.


ಅದಕ್ಕೆ ಅವರು, “ಆದರೆ, ಇಗೋ ಕಟ್ಟಿಲ್ಲದ ನಾಲ್ವರನ್ನು ನಾನು ನೋಡುತ್ತಿದ್ದೇನೆ. ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ; ಅವರಿಗೆ ಯಾವ ಹಾನಿಯೂ ಆಗುತ್ತಿಲ್ಲ.


ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು.


ಬಳಿಕ ರಾಜನು ಅರಮನೆಗೆ ಹಿಂದಿರುಗಿದನು. ಆ ರಾತ್ರಿಯೆಲ್ಲಾ ಉಪವಾಸವಿದ್ದನು. ವಾದ್ಯ ವಿನೋದಾವಳಿ ಯಾವುದನ್ನೂ ಹತ್ತಿರಬರಲು ಬಿಡಲಿಲ್ಲ. ನಿದ್ರೆ ಅವನ ಕಣ್ಣುಗಳಿಂದ ಮಾಯವಾಯಿತು.


ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ತನ್ನಾಶ್ರಿತರನು ಪ್ರಭು ಕೈ ನೀಡಿ ಕಾಪಾಡುವನು I ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು II


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.


ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡನು. ದಾನಿಯೇಲನನ್ನು ಈ ಇಕ್ಕಟ್ಟಿನಿಂದ ತಪ್ಪಿಸಲು ಮನಸ್ಸು ಮಾಡಿಕೊಂಡನು. ಆದರೆ ಹೇಗೆ ರಕ್ಷಿಸುವುದೆಂದು ಸೂರ್ಯಾಸ್ತಮದವರೆಗೂ ಆಲೋಚಿಸುತ್ತಾ ಇದ್ದನು.


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟನು. “ಈ ಮಹಾಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತ ಮಗನನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದು ನುಡಿದನು.


ಈಜಿಪ್ಟಿನವರ ಕೈಯಿಂದ ಇಸ್ರಯೇಲರನ್ನು ಬಿಡಿಸಿ ಸರ್ವೇಶ್ವರ ಅವರಿಗೆ ಇಷ್ಟೆಲ್ಲಾ ಉಪಕಾರ ಮಾಡಿದ್ದಕ್ಕಾಗಿ ಇತ್ರೋ ಸಂತೋಷಪಟ್ಟನು.


ನಾವು ಸೇವೆಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು.


ದೇವರನು ತೊರೆದು ದುರುಳನಾಗದೆ I ನಾನನುಸರಿಸಿದೆ ಪ್ರಭುವಿನ ಮಾರ್ಗವನೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು