Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:12 - ಕನ್ನಡ ಸತ್ಯವೇದವು C.L. Bible (BSI)

12 ಮಿಕ್ಕ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವಾವಧಿಯನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ವಿುಕ್ಕ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು, ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ ಅವುಗಳ ಜೀವವನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮಿಕ್ಕ ಮೃಗಗಳ ಅಧಿಕಾರವನ್ನು ಮತ್ತು ಆಡಳಿತವನ್ನು ಅವುಗಳಿಂದ ತೆಗೆದುಕೊಳ್ಳಲಾಯಿತು. ಆದರೆ ತಕ್ಕ ಸಮಯ ಬರುವ ತನಕ ಅವುಗಳಿಗೆ ಜೀವದಿಂದ ಇರಲು ಅವಕಾಶಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮಿಕ್ಕ ಮೃಗಗಳನ್ನು ಅವುಗಳ ಅಧಿಕಾರದಿಂದ ಹೊರಹಾಕಲಾಯಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವವರೆಗೂ ಅವುಗಳ ಜೀವವನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:12
4 ತಿಳಿವುಗಳ ಹೋಲಿಕೆ  

ಆ ಟಗರನ್ನು ಸಮೀಪಿಸುವುದನ್ನು ನಾನು ಗಮನಿಸಿದೆ. ಟಗರಿನ ವಿರುದ್ಧ ಮಹಾರೌದ್ರದಿಂದ ಉರಿಯುತ್ತಾ ಅದರ ಮೇಲೆ ಎರಗಿ ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದನ್ನು ಎದುರಿಸುವ ಶಕ್ತಿ ಯಾವುದೂ ಆ ಟಗರಿಗೆ ಇರಲಿಲ್ಲ. ಹೋತ ಟಗರನ್ನು ನೆಲಕ್ಕೆ ಕೆಡವಿ ತುಳಿದುಹಾಕಿತು. ಅದರ ಕೈಯಿಂದ ಟಗರನ್ನು ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.


ನಾನು ನೋಡುತ್ತಾ ಇದ್ದೆ: ಆ ಕಿರುಕೊಂಬು ಬಡಾಯಿಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.


ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು