Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:9 - ಕನ್ನಡ ಸತ್ಯವೇದವು C.L. Bible (BSI)

9 ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು, ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು; ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಾನು ನೋಡುತ್ತಿದ್ದಂತೆಯೇ, ಆಸನಗಳನ್ನು ಅವುಗಳ ಸ್ಥಳದಲ್ಲಿ ಹಾಕಲಾಯಿತು. ಪುರಾತನ ರಾಜನು ತನ್ನ ಆಸನದ ಮೇಲೆ ಕುಳಿತುಕೊಂಡನು. ಆತನ ಉಡುಪು ಬಹಳ ಶುಭ್ರವಾಗಿತ್ತು. ಅದು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಕೂದಲು ಶುಭ್ರವಾಗಿತ್ತು. ಅದು ಬಿಳಿಯ ಉಣ್ಣೆಯಂತೆ ಶುಭ್ರವಾಗಿತ್ತು. ಆತನ ಆಸನವು ಬೆಂಕಿಯಿಂದ ಮಾಡಲಾಗಿತ್ತು. ಅದರ ಚಕ್ರಗಳು ಬೆಂಕಿಯ ಜ್ವಾಲೆಗಳಿಂದ ಮಾಡಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನಾನು ನೋಡುತ್ತಿದ್ದ ಹಾಗೆಯೇ, “ಸಿಂಹಾಸನಗಳನ್ನು ಜೋಡಿಸಿದರು. ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ, ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ, ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ, ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:9
34 ತಿಳಿವುಗಳ ಹೋಲಿಕೆ  

ಅವರ ತಲೆಗೂದಲು ಹಿಮದಂತೆಯೂ ಬಿಳಿಯ ಉಣ್ಣೆಯಂತೆಯೂ ಬಿಳುಪಾಗಿತ್ತು. ಕಣ್ಣುಗಳು ಪ್ರಜ್ವಲಿಸುವ ಬೆಂಕಿಯ ಕೆಂಡದಂತಿದ್ದವು.


ಆಗ ಅವರ ಉಡುಪು ಅತ್ಯಂತ ಶುಭ್ರವಾಗಿ ಹೊಳೆಯಿತು. ಜಗದ ಯಾವ ಅಗಸನಿಂದಲೂ ಮಡಿಮಾಡಲಾಗದಷ್ಟು ಅದು ಬಿಳುಪಾಯಿತು.


ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.


ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.


ರಾಜರುಗಳ ಮಾಂಸವನ್ನು, ಸೇನಾಧಿಪತಿಗಳ ಮಾಂಸವನ್ನು ಮತ್ತು ಪರಾಕ್ರಮಶಾಲಿಗಳ ಮಾಂಸವನ್ನು ತಿನ್ನ ಬನ್ನಿ; ಕುದುರೆಗಳ ಮಾಂಸವನ್ನೂ ರಾವುತರ ಮಾಂಸವನ್ನೂ ಉಣ ಬನ್ನಿ; ಯಜಮಾನರ, ಗುಲಾಮರ, ಚಿಕ್ಕವರ, ದೊಡ್ಡವರ ಈ ಎಲ್ಲಾ ನರಮಾನವರ ಮಾಂಸವನ್ನು ರುಚಿಸ ಬನ್ನಿ,” ಎಂದನು.


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ.


ಸರ್ವೇಶ್ವರಾ, ನನ್ನ ದೇವರೇ, ಪರಮಪಾವನ ಸ್ವಾಮಿಯೇ, ಅನಾದಿಯಿಂದ ಇರುವಂಥವರು ನೀವು. ನಾವು ಖಂಡಿತ ಸಾಯುವುದಿಲ್ಲ. ನಮ್ಮನ್ನು ದಂಡಿಸುವಂತೆ ಆ ಬಾಬಿಲೋನಿನವರನ್ನು ನೇಮಿಸಿದವರು ನೀವು; ಅವರನ್ನು ಪ್ರಬಲಗೊಳಿಸಿದವರು ನೀವು. ನಮಗೆ ಪೊರೆಬಂಡೆ ನೀವೇ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ಘಮಘಮಿಸುತಿದೆ ನಿನ್ನುಡಿಗೆ ರಸಗಂಧ, ಅಗರು, ಚಂದನಗಳಿಂದ I ಮನರಂಜನೆಗೊಳ್ಳುತಿರುವೆ ದಂತ ಮಂದಿರದುನ್ನತ ವಾದ್ಯಗಳಿಂದ II


ದೇವರೇ ಬೆಳಕು. ಅವರಲ್ಲಿ ಕತ್ತಲು ಎಂಬುದೇ ಇಲ್ಲ. ಅವರ ಪುತ್ರನಿಂದಲೇ ನಾವು ಕೇಳಿದ ಈ ಸಂದೇಶವನ್ನು ನಿಮಗೆ ಸಾರುತ್ತಿದ್ದೇವೆ.


ಆತನ ರೂಪ ಮಿಂಚಿನಂತೆ ಹೊಳೆಯುತ್ತಿತ್ತು; ಉಡುಪು ಹಿಮದಂತೆ ಬೆಳ್ಳಗಿತ್ತು.


ಕೂಡಲೇ, ನಾನು ದೇವರಾತ್ಮವಶನಾದೆ. ಆಗ ಸ್ವರ್ಗದಲ್ಲಿ ಒಂದು ಸಿಂಹಾಸನ ಇರುವುದನ್ನೂ ಅದರಲ್ಲಿ ಒಬ್ಬರು ಆಸೀನರಾಗಿರುವುದನ್ನೂ ಕಂಡೆ.


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.


ನಿನ್ನ ಸಿಂಹಾಸನ ಸ್ಥಿರ ಆದಿಯಿಂದ I ನೀನಿರುವೆ ಪ್ರಭು ಅನಾದಿಯಿಂದ II


ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.


ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ನಾಡಿನ ಅರಸನನ್ನೂ ಅಧಿಕಾರಿಗಳನ್ನೂ ಅಳಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು