Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:18 - ಕನ್ನಡ ಸತ್ಯವೇದವು C.L. Bible (BSI)

18 ಅವನು ನನ್ನೊಡನೆ ಮಾತಾಡುತ್ತಿರುವಾಗ ನಾನು ಮೈಮರೆತು ಅಧೋಮುಖವಾಗಿ ಬಿದ್ದಿದ್ದೆ. ಆಗ ಅವನು ನನ್ನನ್ನು ಮುಟ್ಟಿ, ನಿಲ್ಲಿಸಿ ನನಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ನನ್ನೊಡನೆ ಮಾತಾಡುತ್ತಿರುವಲ್ಲಿ ನಾನು ಮೈಮರೆತು ಅಡಿಮೊಗವಾಗಿ ಬಿದ್ದಿದ್ದೆನು; ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಗಬ್ರಿಯೇಲನು ನನ್ನೊಂದಿಗೆ ಮಾತನಾಡುತ್ತಿದ್ದಾಗ ನಾನು ನಿದ್ರಾವಶನಾದೆನು. ಅದು ಬಹಳ ಗಾಢವಾದ ನಿದ್ರೆಯಾಗಿತ್ತು. ನನ್ನ ಮುಖವು ನೆಲದ ಮೇಲೆ ಇತ್ತು. ಆಗ ಗಬ್ರಿಯೇಲನು ನನ್ನನ್ನು ಮುಟ್ಟಿ ಎಬ್ಬಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ, ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢನಿದ್ರೆಯಲ್ಲಿ ಬಿದ್ದಿದ್ದೆನು. ಆದರೆ ಅವನು ನನ್ನನ್ನು ಮುಟ್ಟಿ, ಎದ್ದು ನಿಲ್ಲುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:18
13 ತಿಳಿವುಗಳ ಹೋಲಿಕೆ  

ಮನುಷ್ಯರೂಪ ಹೊಂದಿದ್ದ ಆ ವ್ಯಕ್ತಿ ಪುನಃ ನನ್ನನ್ನು ಮುಟ್ಟಿ ಬಲಪಡಿಸಿದ.


ಗಾಢ ನಿದ್ರೆಯಲ್ಲಿದ್ದ ಪೇತ್ರ ಮತ್ತು ಸಂಗಡಿಗರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರೊಡನೆ ನಿಂತಿದ್ದ ಆ ಇಬ್ಬರನ್ನೂ ಕಂಡರು.


ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ.


ಅವರು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮ ನನ್ನೊಳಗೆ ಸೇರಿ ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆ.


ನಮ್ಮ ಪೂರ್ವಜರಿಗೆ ದೇವರು ಮಾಡಿದ ವಾಗ್ದಾನದಲ್ಲಿ ನಂಬಿಕೆಯಿಟ್ಟುದಕ್ಕಾಗಿಯೇ ನಾನು ಇಂದು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ.


ಯೇಸು ಪ್ರಾರ್ಥನೆಯಿಂದ ಎದ್ದು ಶಿಷ್ಯರ ಬಳಿಗೆ ಬಂದರು. ಶಿಷ್ಯರಾದರೋ ದುಃಖದಿಂದ ಬಳಲಿ ನಿದ್ರಿಸುತ್ತಿದ್ದರು.


ಅನಂತರ ಸೂತ್ರಧಾರಿಯಾದ ದೂತನು ಮತ್ತೆ ಬಂದು ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಚ್ಚರಗೊಳಿಸಿದನು.


ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.


ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.


ಜನರಿಗೆ ಗಾಢನಿದ್ರೆ ಹತ್ತುವ ಹೊತ್ತಿನಲಿ ರಾತ್ರಿಕಾಲದ ಸ್ವಪ್ನಯೋಚನೆಗಳ ಸುಳಿಯಲಿ


ಹೊತ್ತು ಮುಳುಗುತ್ತಿದ್ದಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಭೀಕರವಾದ ಕಾರ್ಗತ್ತಲು ಅವನನ್ನು ಕವಿಯಿತು.


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು