Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:23 - ಕನ್ನಡ ಸತ್ಯವೇದವು C.L. Bible (BSI)

23 ಆ ರಾಜ್ಯಗಳ ಕಡೆಯಕಾಲ ಬಂದಾಗ, ಅಧರ್ಮಿಗಳ ಅಪರಾಧ ಭರ್ತಿಯಾದಾಗ, ಕ್ರೂರ ಮುಖನೂ ಕುತಂತ್ರ ವಚನ ನಿಪುಣನೂ ಆದ ಒಬ್ಬ ರಾಜನು ತಲೆದೋರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿನಮುಖನೂ ದ್ವಂದ್ವಾರ್ಥವಚನನಿಪುಣನು ಆದ ಒಬ್ಬ ರಾಜನು ತಲೆದೋರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಆ ರಾಜ್ಯಗಳ ಅಂತ್ಯಕಾಲ ಸಮೀಪಿಸಿದಾಗ ಒಬ್ಬ ಧೈರ್ಯಶಾಲಿಯಾದ ಮತ್ತು ಕ್ರೂರನಾದ ಅರಸನು ತಲೆದೋರುವನು. ಈ ಅರಸನು ಬಹಳ ಕುತಂತ್ರಿಯಾಗಿರುವನು. ಅಧರ್ಮಿಗಳ ಮತ್ತು ಪಾಪಿಗಳ ಸಂಖ್ಯೆ ಹೆಚ್ಚಾದಾಗ ಇದೆಲ್ಲ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಅವರ ರಾಜ್ಯದ ಕಡೆಯ ಕಾಲದಲ್ಲಿ ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ, ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:23
23 ತಿಳಿವುಗಳ ಹೋಲಿಕೆ  

ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ.


ಅದರ ತಲೆಯ ಮೇಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ,


ನಾನು ನೋಡುತ್ತಾ ಇದ್ದೆ: ಆ ಕಿರುಕೊಂಬು ಬಡಾಯಿಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.


ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಾಗಲೆ ಅವುಗಳ ನಡುವೆ ಇಗೋ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದಕ್ಕೆ ಎಡೆಮಾಡಿಕೊಡಲು ಮುಂಚಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಆಶ್ಚರ್ಯವೆಂದರೆ, ಆ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳಿದ್ದವು. ಬಡಾಯಿ ಕೊಚ್ಚಿಕೊಳ್ಳುವ ಬಾಯೂ ಇತ್ತು.


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ಯುಕ್ತಿಯಿಂದಲೆ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಮನದಲ್ಲೆ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸುವನು. ರಾಜಾಧಿರಾಜನಿಗೂ ವಿರುದ್ಧವಾಗಿ ಏಳುವನು. ಆದರೂ ಯಾರ ಕೈಯೂ ಸೋಕದೆ ಹಾಳಾಗುವನು.


ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.


ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ದಾಳಿಮಾಡುವನು. ತಂದೆತಾತಂದಿರು ಮಾಡದಂಥ ಕಾರ್ಯಗಳನ್ನು ಮಾಡುವನು. ಸೂರೆ-ಸುಲಿಗೆ-ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.


“ಅವನ ಸ್ಥಾನದಲ್ಲಿ ನೀಚನೊಬ್ಬನು ಏಳುವನು. ಅವನು ರಾಜಪದವಿಗೆ ಹಕ್ಕುದಾರನಲ್ಲ. ಆದರೂ ನೆಮ್ಮದಿಯ ಕಾಲದಲ್ಲಿ ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಒಳ್ಳೆಯದು, ನಿಮ್ಮ ಪೂರ್ವಜರು ಪ್ರಾರಂಭಿಸಿದ್ದನ್ನು ನೀವು ಹೋಗಿ ಪೂರ್ಣಗೊಳಿಸಿರಿ.


ಆ ಜನಾಂಗದವರು ಕ್ರೂರಮುಖವುಳ್ಳವರು; ನೀವು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ, ಚಿಕ್ಕವರೆಂದು ಕನಿಕರಿಸುವುದಿಲ್ಲ.


‘ಸೈಪ್ರಸ್’ ಎಂಬ ಸ್ಥಳದಿಂದ ಹಡಗುಗಳಲ್ಲಿ ಬರುವರು ಜನರು ಸೋಲಿಸುವರವರು ಅಶ್ಯೂರ್ಯರನ್ನೂ ಏಬೆರ್ ಜರನ್ನೂ; ಅವರಿಗೂ ನಾಶವುಂಟಾಗುವುದು.”


ಗಾದೆಗಳನ್ನೂ ಗೂಢಾರ್ಥಗಳನ್ನೂ ಜ್ಞಾನಿಯ ನುಡಿ ಹಾಗು ಒಗಟುಗಳನ್ನೂ ತಿಳಿದುಕೊಳ್ಳಲು ಸಹ ಇವು ಸಾಧನಗಳು.


ಆ ಕೊಂಬು ಮುರಿದುಹೋದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದಂತೆಯೆ ಆ ಜನಾಂಗದಿಂದ ನಾಲ್ಕು ರಾಜ್ಯಗಳು ಏಳುವುವು. ಆದರೆ ಮೊದಲನೇ ರಾಜನಿಗೆ ಇದ್ದಷ್ಟು ಶಕ್ತಿ ಅವುಗಳಿಗೆ ಇರುವುದಿಲ್ಲ.


ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ, ಅಭಿವೃದ್ಧಿಯಾಗುವನು. ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ ದೇವಜನರನ್ನೂ ಧ್ವಂಸಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು