Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:24 - ಕನ್ನಡ ಸತ್ಯವೇದವು C.L. Bible (BSI)

24 ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ, ಅಭಿವೃದ್ಧಿಯಾಗುವನು. ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ ದೇವಜನರನ್ನೂ ಧ್ವಂಸಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು ಪ್ರಬಲನಾಗುವನು, ಆದರೆ ಬಲದಿಂದಲ್ಲ; ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು ಇಷ್ಟಾರ್ಥವನ್ನು ತೀರಿಸಿಕೊಳ್ಳುವನು; ಬಲಿಷ್ಠರನ್ನೂ ದೇವರ ಜನರನ್ನೂ ಧ್ವಂಸಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಈ ಅರಸನು ಬಹಳ ಪ್ರಬಲನಾಗಿರುವನು. ಆದರೆ ಆ ಪ್ರಾಬಲ್ಯ ಸ್ವಶಕ್ತಿಯಿಂದ ಬಂದುದಲ್ಲ. ಈ ಅರಸನು ಅಪಾರ ವಿನಾಶವನ್ನುಂಟು ಮಾಡುವನು. ಅವನು ಕೈಕೊಂಡ ಪ್ರತಿಯೊಂದು ಕೆಲಸದಲ್ಲಿ ಅವನಿಗೆ ಜಯ ಲಭಿಸುವುದು. ಅವನು ಬಲಿಷ್ಠರನ್ನೂ ದೇವಭಕ್ತರನ್ನೂ ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನ ಶಕ್ತಿಯು ಬಲವಾಗಿರುವುದು. ಆದರೆ ಅದು ಸ್ವಂತ ಶಕ್ತಿಯಲ್ಲ. ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ಅಭಿವೃದ್ಧಿಯಾಗುವನು. ಅವನು ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲವಾದ, ಪರಿಶುದ್ಧ ಜನರನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:24
15 ತಿಳಿವುಗಳ ಹೋಲಿಕೆ  

ಆತನ ಪವಿತ್ರಾಲಯವನ್ನು ಕೆಡವಿತು. ಅನುದಿನದ ಬಲಿಯರ್ಪಣೆಯನ್ನು ಅಡಗಿಸುವುದಕ್ಕಾಗಿ ನೀಚತನದಿಂದ ಒಂದು ಸೈನ್ಯವನ್ನೆಬ್ಬಿಸಿತು. ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿತು. ತನ್ನ ಇಷ್ಟಾರ್ಥವನ್ನು ಈಡೇರಿಸಿಕೊಂಡು ವೃದ್ಧಿಗೆ ಬಂದಿತು.


ಹೀಗೆ ದೈವಸಂಕಲ್ಪವು ನೆರವೇರಬೇಕೆಂದು ದೇವರೇ ಆ ಜನರನ್ನು ಪ್ರೇರೇಪಿಸುವರು. ಇದೇ ಪ್ರೇರಣೆಯಿಂದಾಗಿ ದೇವರ ವಾಕ್ಯ ನೆರವೇರುವವರೆಗೆ ಅವರು ಒಮ್ಮನಸ್ಸಿನಿಂದ ರಾಜ್ಯಾಧಿಕಾರವನ್ನು ಆ ಮೃಗಕ್ಕೆ ಒಪ್ಪಿಸಿಬಿಡುವರು.


ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ ಆ ಗಣದ ಕೆಲವು ನಕ್ಷತ್ರಗಳನ್ನೂ ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ಅದು ಮಾತ್ರವಲ್ಲ, ಆ ನಕ್ಷತ್ರಗಣದ ಅಧಿಪತಿಯನ್ನೇ ಎದುರಿಸುವಷ್ಟು ಉಬ್ಬಿಹೋಗಿ ಅನುದಿನದ ಬಲಿಯರ್ಪಣೆ ಆತನಿಗೆ ಸಲ್ಲದಂತೆ ಮಾಡಿತು.


ಆ ರಾಜ್ಯಗಳ ಕಡೆಯಕಾಲ ಬಂದಾಗ, ಅಧರ್ಮಿಗಳ ಅಪರಾಧ ಭರ್ತಿಯಾದಾಗ, ಕ್ರೂರ ಮುಖನೂ ಕುತಂತ್ರ ವಚನ ನಿಪುಣನೂ ಆದ ಒಬ್ಬ ರಾಜನು ತಲೆದೋರುವನು.


ದುರುಳನೋರ್ವ ಮಹಾಗರ್ವದಿಂದ ಬಾಳುತ್ತಿದ್ದ I ಹುಲುಸಾಗಿ ಬೆಳೆದ ದೇವದಾರು ಮರದಂತಿದ್ದ II


ಅವನ ಸಂಗಡ ಒಪ್ಪಂದ ಮಾಡಿಕೊಂಡವನಿಗೆ ಕೂಡಲೆ ಮೋಸಮಾಡುವನು. ಕೊಂಚ ಜನರ ಸಹಾಯದಿಂದಲೆ ಏಳಿಗೆಯಾಗಿ ಬಲಗೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು