Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:27 - ಕನ್ನಡ ಸತ್ಯವೇದವು C.L. Bible (BSI)

27 ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ದಾನಿಯೇಲನಾದ ನಾನು ಬೆಂಡಾಗಿ ಕೆಲವು ದಿವಸ ಕಾಯಿಲೆಬಿದ್ದೆನು; ಆಮೇಲೆ ಎದ್ದು ರಾಜಕಾರ್ಯವನ್ನು ನಡಿಸಿದೆನು; ಆ ಕನಸಿಗೆ ಬೆಚ್ಚಿಬೆರಗಾದೆನು; ಅದು ಯಾರಿಗೂ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದಾನಿಯೇಲನೆಂಬ ನಾನು ಬಹಳ ಅಶಕ್ತನಾದೆನು. ಆ ದರ್ಶನದ ತರುವಾಯ ಹಲವಾರು ದಿವಸ ನಾನು ಕಾಯಿಲೆ ಬಿದ್ದೆನು. ಆಮೇಲೆ ನಾನು ಗುಣಹೊಂದಿ ರಾಜಕಾರ್ಯವನ್ನು ಪ್ರಾರಂಭಿಸಿದೆನು. ಆದರೆ ಆ ದರ್ಶನದಿಂದ ನನ್ನ ಮನಸ್ಸು ಕಲಕಿತು. ಆ ದರ್ಶನದ ಅರ್ಥವೇನೆಂಬುದು ನನಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದಾನಿಯೇಲನಾದ ನಾನು ಬಳಲಿ ಕೆಲವು ದಿನಗಳವರೆಗೂ ಅಸ್ವಸ್ಥನಾದೆನು. ಅನಂತರ ನಾನು ಎದ್ದು, ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು. ನಾನು ಆ ದರ್ಶನದ ಬಗ್ಗೆ ಬೆಚ್ಚಿಬೆರಗಾದೆನು. ಅದರ ಅರ್ಥವನ್ನೇ ಗ್ರಹಿಸಿಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:27
12 ತಿಳಿವುಗಳ ಹೋಲಿಕೆ  

ಇಲ್ಲಿಗೆ ಆ ಕನಸಿನ ವಿವರ ಮುಗಿಯಿತು. ದಾನಿಯೇಲನಾದ ನಾನು ನನ್ನ ಆಲೋಚನೆಗಳಿಂದ ಬಹಳ ಕಳವಳಗೊಂಡೆ. ನನ್ನ ಮುಖ ಬಾಡಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲೇ ಇಟ್ಟುಕೊಂಡೆ.


ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ.


ನಾನು ಒಂಟಿಯಾಗಿ ಉಳಿದು ಆ ಅದ್ಭುತವನ್ನು ಕಂಡೆ. ನನ್ನ ಶಕ್ತಿಯೆಲ್ಲಾ ಕರಗಿಹೋಯಿತು. ನನ್ನ ಗಾಂಭೀರ್ಯ ಅಳಿಯಿತು. ನಾನು ನಿತ್ರಾಣನಾದೆ.


ಆ ಟಗರನ್ನು ಸಮೀಪಿಸುವುದನ್ನು ನಾನು ಗಮನಿಸಿದೆ. ಟಗರಿನ ವಿರುದ್ಧ ಮಹಾರೌದ್ರದಿಂದ ಉರಿಯುತ್ತಾ ಅದರ ಮೇಲೆ ಎರಗಿ ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದನ್ನು ಎದುರಿಸುವ ಶಕ್ತಿ ಯಾವುದೂ ಆ ಟಗರಿಗೆ ಇರಲಿಲ್ಲ. ಹೋತ ಟಗರನ್ನು ನೆಲಕ್ಕೆ ಕೆಡವಿ ತುಳಿದುಹಾಕಿತು. ಅದರ ಕೈಯಿಂದ ಟಗರನ್ನು ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.


ಈ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿ ನಾನಿದ್ದೆ. ಊಲಾ ಕಾಲುವೆಯ ದಡದ ಮೇಲೆ ನಾನು ನಿಂತುಕೊಂಡಿದ್ದ ಹಾಗೆ ತೋರಿತು.


ದೇವರ ಆತ್ಮ ನಿನ್ನಲ್ಲಿ ನೆಲೆಸಿದೆಯೆಂದು ನಾನು ಕೇಳಿದ್ದೇನೆ. ನಿನಗೆ ಪರಮಜ್ಞಾನ, ವಿವೇಕ, ಬುದ್ಧಿ, ತೇಜಸ್ಸು ಇದೆಯೆಂದು ನನಗೆ ತಿಳಿದುಬಂದಿದೆ.


ಅನಂತರ ಸಮುವೇಲನು ಮಲಗಿ, ಮುಂಜಾನೆಯಲ್ಲೇ ಎದ್ದು, ಸರ್ವೇಶ್ವರನ ಮಂದಿರದ ಬಾಗಿಲುಗಳನ್ನು ತೆರೆದನು. ತಾನು ಕಂಡದ್ದನ್ನು ಏಲಿಗೆ ತಿಳಿಸಲು ಭಯಪಟ್ಟನು.


ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!


ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು