Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:12 - ಕನ್ನಡ ಸತ್ಯವೇದವು C.L. Bible (BSI)

12 ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 [ಆಹಾ, ನಮ್ಮ ದೇವರು] ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇವಿುಗೆ ಆದಂಥ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:12
31 ತಿಳಿವುಗಳ ಹೋಲಿಕೆ  

ನೀನು ಬಹಳ ಅಸಹ್ಯಕೃತ್ಯಗಳಲ್ಲಿ ತೊಡಗಿದ್ದರಿಂದ ನಾನು ಈವರೆಗೂ ಇನ್ನು ಮುಂದಕ್ಕೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.


ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


ಮಂತ್ರಿಗಳನು ಬರಿಬತ್ತಲೆಯಾಗಿ ನಡೆಸುತ್ತಾನೆ ನ್ಯಾಯಾಧಿಪತಿಗಳನು ಮೂರ್ಖರನ್ನಾಗಿಸುತ್ತಾನೆ.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ


ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ್ರಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರವೇರಬೇಕು.


ಆಗ ಬರಲಿರುವ ಸಂಕಷ್ಟಗಳು ದೈವಸೃಷ್ಟಿಯ ಆದಿಯಿಂದ ಇರಲಿಲ್ಲ. ಇನ್ನು ಮುಂದಕ್ಕೂ ಇರುವುದಿಲ್ಲ.


ಏಕೆಂದರೆ ಆಗ ಬರಲಿರುವ ಸಂಕಷ್ಟಗಳು ಸೃಷ್ಟಿಯ ಆದಿಯಿಂದ ಇಂದಿನವರೆಗೂ ಇರಲಿಲ್ಲ; ಇನ್ನು ಮುಂದಕ್ಕೂ ಇರುವುದಿಲ್ಲ.


ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ರಾತ್ರಿಯಲ್ಲಿ ನನಗೆ ಈ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನೇರಿದ್ದ ಒಬ್ಬ ವ್ಯಕ್ತಿ ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದಾನೆ. ಅವನ ಹಿಂದೆ ಕೆಂಪು, ನಸುಗೆಂಪು ಮತ್ತು ಬಿಳಿಯ ಕುದುರೆಗಳಿವೆ.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


ಸರ್ವೇಶ್ವರ ಇಂತೆನ್ನುತ್ತಾರೆಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ; ಕೇಳಿಸಿದ ವಾಣಿ ಸುಳ್ಳು; ಸರ್ವೇಶ್ವರ ಅವರನ್ನು ಕಳುಹಿಸಲಿಲ್ಲ. ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ನನ್ನ ಮೂಲಕ ಭೂಪತಿಗಳು ರಾಜ್ಯ ಆಳುವರು ನಾಯಕರು ಭೂಮಿಯ ಮೇಲೆ ದೊರೆತನ ಮಾಡುವರು.


ಭೂರಾಜರು, ಎಲ್ಲ ಜನಾಂಗಗಳು I ಅಧಿಕಾರಿಗಳು, ದೇಶಾಧಿಪತಿಗಳು II


ಎಂತಲೇ ವಿವೇಕಿಗಳಾಗಿರಿ, ರಾಜರುಗಳೇ, I ಬುದ್ಧಿವಾದಕೆ ಕಿವಿಗೊಡಿ, ದೇಶಾಧಿಪತಿಗಳೇ II


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ನೀನು ಹೋಗಿ ಸುಡಾನಿನ ಎಬೆದ್ಮೆಲೆಕನಿಗೆ ಹೀಗೆ ತಿಳಿಸು: “ಈ ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ನಾನು ನುಡಿದ ಮೇಲನ್ನು ಅಲ್ಲ, ಕೇಡನ್ನೇ ಈ ನಗರದ ಮೇಲೆ ಬರಮಾಡುವೆನು. ಅದು ನಿನ್ನ ಕಣ್ಣೆದುರಿಗೇ ಆ ದಿನದಂದು ನಡೆಯುವುದು.


ನೀವು ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳದೆ, ಅವರ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ, ಪಾಪಮಾಡಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದರಿಂದಲೇ ಇಂಥಾ ವಿಪತ್ತು ನಿಮಗೆ ಸಂಭವಿಸಿದೆ.”


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮುಖಾಂತರ, ಸೇನಾಧಿಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮಪ್ರೇರಿತ ಮಾತುಗಳನ್ನಾಗಲೀ ಕೇಳದೆಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು.


‘ಈ ನಾಡಿನ ಮೇಲೆ ಹಾಗು ಜನರ ಮೇಲೆ ಜುದೇಯದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಿಕ್ಷೆಯನ್ನು ಬರಮಾಡುವೆನು.


ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು