Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:20 - ಕನ್ನಡ ಸತ್ಯವೇದವು C.L. Bible (BSI)

20 ನಾನು ಬಾಯಿಬಿಟ್ಟು ಬೇಡಿಕೊಂಡೆ. ನನ್ನ ಮತ್ತು ನನ್ನ ಜನರಾದ ಇಸ್ರಯೇಲರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ದೇವರಾದ ಸರ್ವೇಶ್ವರನಿಗೆ ಬಿನ್ನವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ಬಾಯಿಬಿಟ್ಟು, ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿ ಪ್ರಾರ್ಥಿಸುತ್ತಿರುವಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಪ್ರಾರ್ಥನೆಯಲ್ಲಿ ನನ್ನ ಪಾಪಗಳ ಬಗ್ಗೆ ಮತ್ತು ಇಸ್ರೇಲರ ಪಾಪಗಳ ಬಗ್ಗೆ ಹೇಳಿಕೊಂಡೆ. ನಾನು ನನ್ನ ದೇವರಾದ ಯೆಹೋವನ ಪವಿತ್ರ ಪರ್ವತಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ಮಾತಾಡುತ್ತಾ, ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ, ನನ್ನ ಜನರಾದ ಇಸ್ರಾಯೇಲರ ಪಾಪವನ್ನೂ ಅರಿಕೆಮಾಡುತ್ತಾ, ನನ್ನ ದೇವರಾದ ಯೆಹೋವ ದೇವರ ಮುಂದೆ ಅವರ ಪರಿಶುದ್ಧ ಪರ್ವತಕ್ಕೋಸ್ಕರವಾಗಿ, ವಿಜ್ಞಾಪಿಸುತ್ತಿರಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:20
24 ತಿಳಿವುಗಳ ಹೋಲಿಕೆ  

ಪ್ರಭುವಿನ ಮಾರ್ಗ ಧರ್ಮಸಮ್ಮತ I ಆತನ ಕಾರ್ಯವೆಲ್ಲ ಪುನೀತ II


ಮಾನವರೆಲ್ಲರೂ ಪಾಪಿಗಳೇ, ಎಲ್ಲರೂ ದೇವದತ್ತ ಮಹಿಮೆಯನ್ನು ಕಳೆದುಕೊಂಡವರೇ.


ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ


ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II


ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;


ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಆ ದಿನಗಳಲ್ಲಿ ದಾನಿಯೇಲನಾದ ನಾನು ಮೂರು ವಾರ ಒಂದು ವ್ರತವನ್ನು ಕೈಗೊಂಡಿದ್ದೆ.


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.


ಎಜ್ರನು ದೇವಾಲಯದ ಮುಂದೆ ಹೀಗೆ ಅಡ್ಡಬಿದ್ದು ಅಳುತ್ತಾ, ವಿಜ್ಞಾಪನೆಯನ್ನೂ ಪಾಪ ನಿವೇದನೆಯನ್ನೂ ಮಾಡುತ್ತಿರುವಾಗ ಇಸ್ರಯೇಲರ ಗಂಡಸರು, ಹೆಂಗಸರು ಹಾಗು ಮಕ್ಕಳು ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಜನರೆಲ್ಲರು ಅಲ್ಲಿ ಬಹಳವಾಗಿ ದುಃಖಿಸತೊಡಗಿದರು.


ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.


ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು