Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:22 - ಕನ್ನಡ ಸತ್ಯವೇದವು C.L. Bible (BSI)

22 “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡಲು ಈಗ ಬಂದಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನನ್ನೊಂದಿಗೆ ಹೀಗೆ ಮಾತಾಡಿ ಉಪದೇಶಿಸಿದನು - ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವದಕ್ಕೆ ಈಗ ಬಂದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ತಿಳಿದುಕೊಳ್ಳಬಯಸಿದ ವಿಷಯಗಳನ್ನು ತಿಳಿದುಕೊಳ್ಳಲು ಗಬ್ರಿಯೇಲನು ನನಗೆ ಸಹಾಯ ಮಾಡಿದನು. ಗಬ್ರಿಯೇಲನು, “ದಾನಿಯೇಲನೇ, ನಾನು ನಿನಗೆ ಜ್ಞಾನವನ್ನು ಕೊಡಲು ಮತ್ತು ಅರ್ಥಮಾಡಿಕೊಳ್ಳಲು ನಿನಗೆ ಸಹಾಯ ಮಾಡಲು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನನಗೆ, “ದಾನಿಯೇಲನೇ, ನಿನಗೆ ವಿವೇಕವನ್ನೂ, ಬುದ್ಧಿಯನ್ನೂ ಕೊಡುವುದಕ್ಕೆ ಈಗ ನಾನು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:22
12 ತಿಳಿವುಗಳ ಹೋಲಿಕೆ  

ಸತ್ಯಗ್ರಂಥದಲ್ಲಿ ಲಿಖಿತವಾದುದನ್ನು ಈಗ ನಿನಗೆ ತಿಳಿಸುತ್ತೇನೆ. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಕಾವಲುದೂತನಾದ ಮಿಕಾಯೇಲನ ಹೊರತು ನನಗೆ ಬೆಂಬಲಿಗರಾಗತಕ್ಕವರು ಇನ್ನಾರೂ ಇಲ್ಲ.


ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು,” ಎಂದು ಮನುಷ್ಯ ಧ್ವನಿಯಂಥ ಒಂದು ವಾಣಿ ಊಲಾ ಕಾಲುವೆಯ ನಡುವೆ ನನಗೆ ಕೇಳಿಸಿತು.


ನಾನು, ‘ಸ್ವಾಮೀ, ಇದೆಲ್ಲ ಏನು?’ ಎಂದು ಕೇಳಿದೆ. ಅದಕ್ಕೆ ಸೂತ್ರಧಾರಿಯಾದ ದೂತನು ನನ್ನೊಡನೆ ಮಾತನಾಡುತ್ತಾ ‘ಇದು ಏನನ್ನು ಸೂಚಿಸುತ್ತದೆಂಬುದನ್ನು ನಿನಗೆ ತೋರಿಸುತ್ತೇನೆ’ ಎಂದು ಹೇಳಿದ.


ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಮತ್ತು ಆ ದೂತ ಹೀಗೆಂದು ನನಗೆ ಅಪ್ಪಣೆಮಾಡಿದ: “ಇದನ್ನು ನೀನು ಸಾರಿ ಹೇಳಬೇಕು. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - ಜೆರುಸಲೇಮಿನ ಹಾಗೂ ಸಿಯೋನಿನ ಮೇಲೆ ನನಗೆ ತುಂಬ ಅಭಿಮಾನವಿದೆ.


ಹತ್ತಿರದಲ್ಲೆ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸರಿಯಾದ ಅರ್ಥ ಏನೆಂದು ವಿಚಾರಿಸಿದೆ.


ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಆಗ ಅವನು ನನಗೆ, “ಅತಿಪ್ರಿಯ ದಾನಿಯೇಲನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು. ಎದ್ದು ನಿಂತುಕೋ. ನಾನು ನಿನ್ನ ಬಳಿಗೆ ಕಳುಹಿಸಲ್ಪಟ್ಟವನು,” ಎಂದನು.


ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು