Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:11 - ಕನ್ನಡ ಸತ್ಯವೇದವು C.L. Bible (BSI)

11 ನೀವು ಈಗ ಇರುವುದಕ್ಕಿಂತ ಇನ್ನೂ ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮ್ಮನ್ನು ಹೆಚ್ಚಿಸಲಿ; ಅವರೇ ವಾಗ್ದಾನಮಾಡಿದ ಪ್ರಕಾರ ನಿಮ್ಮನ್ನು ಆಶೀರ್ವದಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀವು ಈಗ ಇರುವುದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ, ತಾನು ವಾಗ್ದಾನಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಈಗ ಇರುವದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ ತಾನು ವಾಗ್ದಾನ ಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಮ್ಮ ಪೂರ್ವಿಕರ ದೇವರಾದ ಯೆಹೋವನು ಈಗ ಇರುವುದಕ್ಕಿಂತ ಸಾವಿರಪಟ್ಟು ಅಧಿಕವಾಗಿ ನಿಮ್ಮ ಜನಸಂಖ್ಯೆಯನ್ನು ಹೆಚ್ಚಿಸಲಿ. ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮನ್ನು ಆಶೀರ್ವದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಈಗ ಇರುವುದಕ್ಕಿಂತ ಇನ್ನೂ ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಲಿ, ಅವರು ವಾಗ್ದಾನ ಮಾಡಿದ ಪ್ರಕಾರ ನಿಮ್ಮನ್ನು ಆಶೀರ್ವದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:11
16 ತಿಳಿವುಗಳ ಹೋಲಿಕೆ  

ವೃದ್ಧಿಗೊಳಿಸಲಿ ಪ್ರಭುವು ನಿಮ್ಮನು I ವೃದ್ಧಿಗೊಳಿಸಲಿ ನಿಮ್ಮ ಮಕ್ಕಳನು II


ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.


ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ.


ಹೀಗೆ ಅವರು ಇಸ್ರಯೇಲರ ಮೇಲೆ ನನ್ನ ಹೆಸರನ್ನು ಉಚ್ಛರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”


ಆಗ ಯೋವಾಬನು, “ನನ್ನ ಒಡೆಯರಾದ ತಮ್ಮ ಆಯುಷ್ಕಾಲದಲ್ಲೇ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯರಾದ ಅರಸರು ಈ ಕಾರ್ಯಕ್ಕೆ ಮನಸ್ಸುಮಾಡಿದ್ದೇಕೆ?” ಎಂದನು.


ಹೀಗಾಯಿತು ನಿನ್ನ ತ0ದೆಯ‍‍ ದೇವರಿ0ದ ಸಿಗಲಿ ನಿನಗಾತನ ಸಹಾಯ ಹೀಗಾಯಿತು ಸರ್ವವಲ್ಲಭ ದೇವರಿ0ದ. ದೊರಕಲಿ ನಿನಗಾತನ ಆಶೀರ್ವಾದ. ಮೇಲಣ ಆಕಾಶದಿ0ದ, ಕೆಳಗಣ ಸಾಗರ ಸೆಲೆಗಳಿ0ದ ಸ್ತನ್ಯದಿ0ದ, ಗರ್ಭದಿ0ದ, ಆತ ನೀಡುವ ವರದಾನ.


ಅದಕ್ಕೆ ದೇವರು, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದ ಹೊಂದಿದವರು. ಅವರನ್ನು ಶಪಿಸಬಾರದು,” ಎಂದು ಹೇಳಿಬಿಟ್ಟರು.


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.


ಆಗ ಯೋವಾಬನು, “ನನ್ನ ಒಡೆಯರಾದ ಅರಸರೇ, ಸರ್ವೇಶ್ವರ ತಮ್ಮ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ; ಅವರೆಲ್ಲರೂ ನನ್ನ ಒಡೆಯರ ಸೇವಕರಷ್ಟೇ. ಆದರೆ ಒಡೆಯರು ಇಂಥದನ್ನು ಅಪೇಕ್ಷಿಸಿದ್ದೇಕೆ? ಇಸ್ರಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ?” ಎಂದನು.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸಂಖ್ಯೆಯಲ್ಲಿ ಹೆಚ್ಚಿಸಿದ್ದಾರೆ; ನೀವು ಆಕಾಶದ ನಕ್ಷತ್ರಗಳಷ್ಟಾಗಿದ್ದೀರಿ;


ಆದರೆ ನಿಮ್ಮ ಸಮಸ್ಯೆಗಳನ್ನೂ ಹೊಣೆಯನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವುದು ಹೇಗೆ?


ನಿಮ್ಮ ಪಿತೃಗಳು, ಎಪ್ಪತ್ತುಮಂದಿ ಮಾತ್ರ. ಈಜಿಪ್ಟ್ ದೇಶಕ್ಕೆ ಹೋದರು; ಈಗಲಾದರೋ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗುವಂತೆ ಮಾಡಿದ್ದಾರೆ.


ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು, ನಿಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಡದೆ ಹೋದುದರಿಂದ ಸ್ವಲ್ಪ ಮಂದಿಯೇ ಉಳಿಯುವಿರಿ.


ಭೂಮಿಯಲ್ಲಿ ಮೊಳಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಿದೆ; ನೀನು ಬಲಿತು ಪ್ರಾಯ ತುಂಬಿ ಅತಿ ಸುಂದರಿಯಾದೆ; ನಿನಗೆ ಸ್ತನಗಳು ಮೂಡಿದವು. ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು