Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:16 - ಕನ್ನಡ ಸತ್ಯವೇದವು C.L. Bible (BSI)

16 ಆ ನ್ಯಾಯಾಧಿಪತಿಗಳಿಗೆ ನಾನು ಆಗ ಕೊಟ್ಟ ಸೂಚನೆ ಇದು: ‘ನೀವು ಸರ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಯೇಲರ ವ್ಯಾಜ್ಯವಾಗಿರಬಹುದು. ಅನ್ಯರೊಡನೆ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ, “ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅವರು ಇಸ್ರಾಯೇಲರೊಡನೆ ವ್ಯಾಜ್ಯವಾಡಿದರೂ, ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ - ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು; ಅವರು ಇಸ್ರಾಯೇಲ್ಯರೊಡನೆ ವ್ಯಾಜ್ಯವಾಡಿದರೂ ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನಿಮ್ಮ ನ್ಯಾಯಗಳನ್ನು ತೀರಿಸುವ, ಆ ನಾಯಕರುಗಳಿಗೆ ಹೇಳಿದ್ದೇನೆಂದರೆ: ‘ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ನ್ಯಾಯಾಧಿಪತಿಗಳಿಗೆ ಆ ಕಾಲದಲ್ಲಿ ನಾನು, “ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಾಯೇಲರ ವ್ಯಾಜ್ಯವಾಗಿರಬಹುದು. ಇಸ್ರಾಯೇಲರಲ್ಲದವರ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:16
22 ತಿಳಿವುಗಳ ಹೋಲಿಕೆ  

ಬರೀ ತೋರಿಕೆಯಿಂದ ತೀರ್ಪುಕೊಡುವುದು ಸಲ್ಲದು; ನಿಮ್ಮ ತೀರ್ಪು ನ್ಯಾಯಬದ್ಧವಾಗಿರಬೇಕು,” ಎಂದು ಹೇಳಿದರು.


ಅನ್ಯರಿಗಾಗಲಿ ಸ್ವಜನರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರ.”


“ಪರದೇಶೀಯನಿಗೆ ಅನ್ಯಾಯ ಮಾಡಬಾರದು, ಅವನನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದೀರಲ್ಲವೆ?


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ಜನನಾಯಕರೇ, ನ್ಯಾಯಬದ್ಧವೊ ನಿಮ್ಮ ತೀರ್ಪುಗಳು I ವ್ಯಾಜ್ಯಗಳನು ಬಗೆಹರಿಸುತ್ತವೆಯೆ ನಿಮ್ಮ ನಿರ್ಣಯಗಳು? II


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು.


ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,


“ಸ್ವದೇಶದವರಲ್ಲೇ ಆಗಲಿ, ನಿಮ್ಮಲ್ಲಿ ಇರುವ ಅನ್ಯದೇಶದವರಲ್ಲೇ ಆಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ ನೀವು ಏನೂ ಅನ್ಯಾಯ ಮಾಡಬಾರದು;


ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮುಂದೆ ಹಾಗು ಸಮಾಜದವರೆಲ್ಲರ ಮುಂದೆ ನಿಲ್ಲಿಸು; ಅವನ ಮೇಲೆ ಹಸ್ತನಿಕ್ಷೇಪಮಾಡಿ ಅವರ ಸಮ್ಮುಖದಲ್ಲೆ ಅಧಿಕಾರ ವಹಿಸಿಕೊಡು.


“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ತಂದೆ ಮಕ್ಕಳನ್ನು ಕಾಣುವಂತೆ ನಾವು ಪ್ರತಿಯೊಬ್ಬನನ್ನೂ ಆದರದಿಂದ ಕಂಡೆವು; ಬುದ್ಧಿ ಹೇಳಿದೆವು; ಪ್ರೋತ್ಸಾಹಿಸಿದೆವು.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರೆಯಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ ಹಾಗು ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ಹಾಗು ಉಪಾಧಿಕಾರಿಗಳನ್ನಾಗಿ ನೇಮಿಸಿದೆ.


“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ಅವರ ಪರವಾಗಿ ಮಾತಾಡಿ ನ್ಯಾಯವಾದ ತೀರ್ಪುಕೊಡು; ದೀನದರಿದ್ರರ ಹಕ್ಕು ಬಾಧ್ಯತೆಯನ್ನು ಕಾಪಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು