Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:4 - ಕನ್ನಡ ಸತ್ಯವೇದವು C.L. Bible (BSI)

4 ಅಂದರೆ ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಲವತ್ತನೆಯ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ತನಗೆ ಆಜ್ಞಾಪಿಸಿದ್ದನ್ನೆಲ್ಲ ಇಸ್ರಯೇಲರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಂದರೆ [ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟ] ನಾಲ್ವತ್ತನೆಯ ವರುಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ಯರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೀಹೋನನನ್ನು ಮತ್ತು ಓಗನನ್ನು ದೇವರಾದ ಯೆಹೋವನು ಸೋಲಿಸಿದ ಬಳಿಕ ನಡೆದ ಸಂಗತಿಯಿದು. (ಸೀಹೋನನು ಅಮೋರಿಯರ ರಾಜನಾಗಿದ್ದನು. ಅವನು ಹೆಷ್ಬೋನಿನಲ್ಲಿ ವಾಸಿಸುತ್ತಿದ್ದನು. ಓಗನು ಬಾಷಾನಿನ ಅರಸನು. ಇವನು ಅಷ್ಟಾರೋತ್ ಮತ್ತು ಎದ್ರೈ ಎಂಬಲ್ಲಿ ವಾಸವಾಗಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದ ಮೇಲೆಯೂ, ಅಷ್ಟಾರೋತ್‌ನಲ್ಲಿ, ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಎದ್ರೈಯಲ್ಲಿ ಸೋಲಿಸಿದ ಮೇಲೆಯೂ ಮೋಶೆ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:4
13 ತಿಳಿವುಗಳ ಹೋಲಿಕೆ  

ರಾಜ್ಯಗಳನು, ಜನಾಂಗಗಳನು ವಶಪಡಿಸಿದಿರಿ ಅವರಿಗೆ ಹಂಚಿಕೊಟ್ಟಿರಿ ಆ ರಾಷ್ಟ್ರಗಳ ಸೊತ್ತುಗಳನೆ ಹೆಷ್ಬೋನಿನ ಅರಸ ಸೀಹೋನನಿಗೆ, ಬಾಷಾನಿನ ಅರಸ ಓಗನಿಗೆ, ಸೇರಿದ ಪ್ರಾಂತ್ಯಗಳಿಗೆ ಸ್ವಾಧೀನಪಡಿಸಿಕೊಂಡರಲ್ಲವೆ?


“ಆಗ ನಾನು ಕೆದೇಮೋತಿನ ಮರುಭೂಮಿಯಿಂದ ಹೆಷ್ಬೋನಿನ ಅರಸ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದೆ.


ನಿರ್ಮೂಲ ಮಾಡಿದನಾತ ಅಮೋರ್ಯರ ಸೀಹೋನ್ ರಾಜನನು I ಬಾಷಾನಿನ ಅರಸ ಓಗನನು, ಕಾನಾನಿನ ರಾಜ್ಯಗಳೆಲ್ಲವನು II


ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಮತ್ತು ಅವನಿಗೆ ಸೇರಿದ ರಾಜರೂ ಬಂದು ಅಷ್ಟರೋತ್ ಕರ್ನಯಿಮ್ ಎಂಬಲ್ಲಿ ರೆಫಾಯರನ್ನೂ ಹಾಮ್ ಎಂಬಲ್ಲಿ ಏಮಿಯರನ್ನೂ ಸೋಲಿಸಿದರು.


ಜೋರ್ಡನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆ ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿದನು:


ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ನಿಶ್ಯೇಷವಾಗಿ ನಾಶಮಾಡಿದೆವು.


ಅವನ ರಾಜ್ಯವನ್ನೂ ಬಾಷಾನ್ ದೇಶದ ಅರಸ ಓಗನ ರಾಜ್ಯವನ್ನೂ ಜೋರ್ಡನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನೂ ಗೆದ್ದುಕೊಂಡಿದ್ದರು.


“ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಹತ್ತಿಹೋದೆವು. ಆಗ ಬಾಷಾನಿನ ಅರಸ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು