Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:10 - ಕನ್ನಡ ಸತ್ಯವೇದವು C.L. Bible (BSI)

10 ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡು ನೀವು ಬಿಟ್ಟುಬಂದ ಈಜಿಪ್ಟ್ ದೇಶದ ಹಾಗಲ್ಲ. ಈಜಿಪ್ಟಿನಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ವ್ಯವಸಾಯ ಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರು ಕಟ್ಟುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮಗೆ ದೊರಕಲಿರುವ ದೇಶವು ನೀವು ಹೊರಟುಬಂದ ಈಜಿಪ್ಟ್ ದೇಶದಂತಿಲ್ಲ. ಈಜಿಪ್ಟಿನಲ್ಲಿ ನೀವು ಬಿತ್ತನೆ ಮಾಡಿದ ಮೇಲೆ ನೀರನ್ನು ಹಾಯಿಸಲು ನಿಮ್ಮ ಕಾಲುಗಳನ್ನು ಬಳಸುತ್ತಿದ್ದಿರಿ. ನಿಮ್ಮ ತರಕಾರಿ ತೋಟಗಳಿಗೆ ನೀರು ಹಾಯಿಸುವಂತೆಯೇ ನಿಮ್ಮ ಗದ್ದೆಗಳಿಗೂ ನೀರನ್ನು ಹಾಯಿಸುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು, ನೀವು ಹೊರಟ ಈಜಿಪ್ಟ್ ದೇಶದ ಹಾಗಲ್ಲ. ಅಲ್ಲಿ ನೀವು ಬೀಜವನ್ನು ಬಿತ್ತಿ, ಪಲ್ಯಗಳ ತೋಟವನ್ನು ಸಾಗುವಳಿ ಮಾಡುವ ರೀತಿಯಲ್ಲಿ ಏತವನ್ನು ತುಳಿದು, ನೀರು ಕಟ್ಟುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:10
7 ತಿಳಿವುಗಳ ಹೋಲಿಕೆ  

ಈಜಿಪ್ಟಿನ ಮನೆತನದವರು ಬರದೆಹೋದರೆ, ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ರಾಷ್ಟ್ರಗಳಿಗೆ ಸರ್ವೇಶ್ವರ ವಿಧಿಸುವ ದಂಡನೆ ಅವರಿಗೂ ತಗಲುವುದು.


ಸರ್ವೇಶ್ವರ ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ನಾಡಿನಲ್ಲಿ ನೀವು ಬಹುಕಾಲ ಬಾಳುವಿರಿ; ಅದು ಹಾಲೂ ಜೇನೂ ಹರಿಯುವ ನಾಡು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡೋ ಹಳ್ಳದಿಣ್ಣೆಗಳ ನಾಡು; ಆಕಾಶದಿಂದ ಮಳೆಬಿದ್ದಂತೆ ನೀರುದೊರಕುತ್ತದೆ.


ಪರನಾಡುಗಳಲ್ಲಿ ಬಾವಿತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ.


ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.


“ನಿಮ್ಮ ದೇವರಾದ ಸರ್ವೇಶ್ವರ ಉತ್ತಮವಾದ ನಾಡಿಗೆ ನಿಮ್ಮನ್ನು ಸೇರಿಸುತ್ತಾರೆ. ಆ ನಾಡಿನ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತಿರುತ್ತದೆ; ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಿ ಆಗಲಿ, ಎಲ್ಲಾ ಕಡೆಯು ಬಾವಿಗಳಿಂದಲೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತಿರುತ್ತದೆ.


ನಾಡಿನ ಜವಳಿ ವ್ಯಾಪಾರಿಗಳು, ಕೂಲಿಯಾಳುಗಳು ಚಿಂತಾಕ್ರಾಂತರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು