ಧರ್ಮೋಪದೇಶಕಾಂಡ 11:17 - ಕನ್ನಡ ಸತ್ಯವೇದವು C.L. Bible (BSI)17 ಅವರು ನಿಮ್ಮ ಮೇಲೆ ಸಿಟ್ಟಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಡಬಹುದು. ಆಗ ಭೂಮಿಯಲ್ಲಿ ಬೆಳೆಯಾಗದೆ ಸರ್ವೇಶ್ವರ ನಿಮಗೆ ಕೊಡುವ ಆ ಉತ್ತಮನಾಡಿನಲ್ಲಿ ನೀವು ಉಳಿಯದೆ ಬೇಗ ನಾಶವಾಗಿಹೋಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂವಿುಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಳ್ಳುವನು; ಆಕಾಶವನ್ನು ಮುಚ್ಚಿ ಮಳೆಬೀಳದಂತೆ ಮಾಡುವನು. ಆಗ ಹೊಲದಲ್ಲಿ ಧಾನ್ಯ ಬೆಳೆಯುವುದಿಲ್ಲ. ಆಗ ಆತನು ಕೊಡುವ ಒಳ್ಳೆಯ ದೇಶದಲ್ಲಿಯೇ ಊಟಕ್ಕಿಲ್ಲದೆ ಸಾಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇಲ್ಲದಿದ್ದರೆ, ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯಲು ಅವರು ಮಳೆಯಾಗದಂತೆ ಮಾಡುವರು. ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡುವರು. ಯೆಹೋವ ದೇವರು ನಿಮಗೆ ಕೊಡುವ ಆ ಒಳ್ಳೆಯ ದೇಶದಲ್ಲಿ ನೀವು ಬೇಗ ನಾಶವಾಗಿಹೋಗುವಿರಿ, ಎಚ್ಚರಿಕೆ. ಅಧ್ಯಾಯವನ್ನು ನೋಡಿ |
ನಾನು ಪ್ರಮಾಣಮಾಡಿ ಕೊಟ್ಟ ನಾಡಿಗೆ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ನಾಡಿಗೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿ, ನನ್ನನ್ನು ತಾತ್ಸಾರಮಾಡಿ, ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಗೀತೆ ಇವರ ಸಂತತಿಯವರ ಬಾಯಲ್ಲಿದ್ದು ಅವರ ಮುಂದೆ ಸಾಕ್ಷಿಕೊಡುವುದು,” ಎಂದು ಹೇಳಿದರು.